ನವದೆಹಲಿ: ಇಂತಹ ಉತ್ತಮ ಸಮಯ ಕಳೆದುಕೊಂಡರೆ ಮತ್ತೆ ಸಿಗಲ್ಲ ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಪ್ರಧಾನಮಂತ್ರಿ ಸ್ಥಾನಕ್ಕೆ ನರೇಂದ್ರ ಮೋದಿಯವರ ಹೆಸರನ್ನು ಅನುಮೋದಿಸಿದ್ದಾರೆ.
ಇಂದು ದೆಹಲಿಯಲ್ಲಿ ನಡೆದ ಎನ್ಡಿಎ ಒಕ್ಕೂಟ ಸಂಸದರ ಸಭೆಯಲ್ಲಿ ಎಲ್ಲಾ ನಾಯಕರು ಮೋದಿ ಹೆಸರನ್ನೇ ಪ್ರಧಾನಿ ಸ್ಥಾನಕ್ಕೆ ಸೂಚಿಸಿದ್ದಾರೆ. ಬಳಿಕ ಮಾತನಾಡಿದ ಜೆಡಿಯು ನಾಯಕ ನಿತೀಶ್ ಕುಮಾರ್ ಇಂಡಿಯಾ ಬೆಳೆಯುತ್ತಿದೆ. ಉತ್ತಮ ನಾಯಕ, ಉತ್ತಮ ಸಮಯ ಮತ್ತೆ ಸಿಗುವುದಿಲ್ಲ. ಇದು ನಮಗೆ ಉತ್ತಮ ಅವಕಾಶ. ಈಗ ಇದನ್ನು ಕಳೆದುಕೊಂಡರೆ ಮತ್ತೆ ಸಿಗುವುದಿಲ್ಲ ಎಂದು ಹೇಳಿದರು.
ಮೋದಿಯವರು ದೇಶದ ಸೇವೆ ಮಾಡಿದ್ದಾರೆ, ಮುಂದಿನ ಅವಧಿಯಲ್ಲಿ ಏನು ಬಾಕಿ ಉಳಿದಿದೆಯೋ ಅದನ್ನೂ ಮಾಡಲಿದ್ದಾರೆ. ಮೋದಿ ಅವರಿಗೆ ಈಗ ಮತ್ತೊಂದು ಅವಕಾಶ ಸಿಕ್ಕಿದೆ. ಅಲ್ಲೂ ಇಲ್ಲೂ ಕೆಲವರು ಗೆದ್ದಿದ್ದಾರೆ. ಆದರೆ ಮುಂದಿನ ಬಾರಿ ಎಲ್ಲರೂ ಸೋಲಲಿದ್ದಾರೆ ಎಂದು ನಿತೀಶ್ ಕುಮಾರ್ ಹೇಳಿದರು.
ಬಿಹಾರದಲ್ಲಿ ಏನು ಬಾಕಿ ಉಳಿದಿದೆ ಅದನ್ನು ಕೂಡ ಮೋದಿಯವರು ಮಾಡಲಿದ್ದಾರೆ. ಅದಕ್ಕಾಗಿ ನಾವು ಎಲ್ಲಾ ಬೆಂಬಲ ನೀಡಿದ್ದೇವೆ. ಆದಷ್ಟು ಬೇಗ ಅವರು ಪ್ರಧಾನಿಯಾಗಲಿ. ಇವತ್ತೆ ಪ್ರಧಾನಿಯಾಗಬೇಕಿತ್ತು. ಆ ಕಡೆ ಈ ಕಡೆ ಹೋಗುವವರಿಗೆ ಯಾವುದೇ ಲಾಭ ಇಲ್ಲ ಎಂದು ಇದೇ ವೇಳೆ ನಿತೀಶ್ ಕುಮಾರ್ ಇಂಡಿಯಾ ಒಕ್ಕೂಟಕ್ಕೆ ಟಾಂಗ್ ಕೊಟ್ಟರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…