ನವದೆಹಲಿ: ಇಂತಹ ಉತ್ತಮ ಸಮಯ ಕಳೆದುಕೊಂಡರೆ ಮತ್ತೆ ಸಿಗಲ್ಲ ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಪ್ರಧಾನಮಂತ್ರಿ ಸ್ಥಾನಕ್ಕೆ ನರೇಂದ್ರ ಮೋದಿಯವರ ಹೆಸರನ್ನು ಅನುಮೋದಿಸಿದ್ದಾರೆ.
ಇಂದು ದೆಹಲಿಯಲ್ಲಿ ನಡೆದ ಎನ್ಡಿಎ ಒಕ್ಕೂಟ ಸಂಸದರ ಸಭೆಯಲ್ಲಿ ಎಲ್ಲಾ ನಾಯಕರು ಮೋದಿ ಹೆಸರನ್ನೇ ಪ್ರಧಾನಿ ಸ್ಥಾನಕ್ಕೆ ಸೂಚಿಸಿದ್ದಾರೆ. ಬಳಿಕ ಮಾತನಾಡಿದ ಜೆಡಿಯು ನಾಯಕ ನಿತೀಶ್ ಕುಮಾರ್ ಇಂಡಿಯಾ ಬೆಳೆಯುತ್ತಿದೆ. ಉತ್ತಮ ನಾಯಕ, ಉತ್ತಮ ಸಮಯ ಮತ್ತೆ ಸಿಗುವುದಿಲ್ಲ. ಇದು ನಮಗೆ ಉತ್ತಮ ಅವಕಾಶ. ಈಗ ಇದನ್ನು ಕಳೆದುಕೊಂಡರೆ ಮತ್ತೆ ಸಿಗುವುದಿಲ್ಲ ಎಂದು ಹೇಳಿದರು.
ಮೋದಿಯವರು ದೇಶದ ಸೇವೆ ಮಾಡಿದ್ದಾರೆ, ಮುಂದಿನ ಅವಧಿಯಲ್ಲಿ ಏನು ಬಾಕಿ ಉಳಿದಿದೆಯೋ ಅದನ್ನೂ ಮಾಡಲಿದ್ದಾರೆ. ಮೋದಿ ಅವರಿಗೆ ಈಗ ಮತ್ತೊಂದು ಅವಕಾಶ ಸಿಕ್ಕಿದೆ. ಅಲ್ಲೂ ಇಲ್ಲೂ ಕೆಲವರು ಗೆದ್ದಿದ್ದಾರೆ. ಆದರೆ ಮುಂದಿನ ಬಾರಿ ಎಲ್ಲರೂ ಸೋಲಲಿದ್ದಾರೆ ಎಂದು ನಿತೀಶ್ ಕುಮಾರ್ ಹೇಳಿದರು.
ಬಿಹಾರದಲ್ಲಿ ಏನು ಬಾಕಿ ಉಳಿದಿದೆ ಅದನ್ನು ಕೂಡ ಮೋದಿಯವರು ಮಾಡಲಿದ್ದಾರೆ. ಅದಕ್ಕಾಗಿ ನಾವು ಎಲ್ಲಾ ಬೆಂಬಲ ನೀಡಿದ್ದೇವೆ. ಆದಷ್ಟು ಬೇಗ ಅವರು ಪ್ರಧಾನಿಯಾಗಲಿ. ಇವತ್ತೆ ಪ್ರಧಾನಿಯಾಗಬೇಕಿತ್ತು. ಆ ಕಡೆ ಈ ಕಡೆ ಹೋಗುವವರಿಗೆ ಯಾವುದೇ ಲಾಭ ಇಲ್ಲ ಎಂದು ಇದೇ ವೇಳೆ ನಿತೀಶ್ ಕುಮಾರ್ ಇಂಡಿಯಾ ಒಕ್ಕೂಟಕ್ಕೆ ಟಾಂಗ್ ಕೊಟ್ಟರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…