ನವದೆಹಲಿ: ಇಂತಹ ಉತ್ತಮ ಸಮಯ ಕಳೆದುಕೊಂಡರೆ ಮತ್ತೆ ಸಿಗಲ್ಲ ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಪ್ರಧಾನಮಂತ್ರಿ ಸ್ಥಾನಕ್ಕೆ ನರೇಂದ್ರ ಮೋದಿಯವರ ಹೆಸರನ್ನು ಅನುಮೋದಿಸಿದ್ದಾರೆ.
ಇಂದು ದೆಹಲಿಯಲ್ಲಿ ನಡೆದ ಎನ್ಡಿಎ ಒಕ್ಕೂಟ ಸಂಸದರ ಸಭೆಯಲ್ಲಿ ಎಲ್ಲಾ ನಾಯಕರು ಮೋದಿ ಹೆಸರನ್ನೇ ಪ್ರಧಾನಿ ಸ್ಥಾನಕ್ಕೆ ಸೂಚಿಸಿದ್ದಾರೆ. ಬಳಿಕ ಮಾತನಾಡಿದ ಜೆಡಿಯು ನಾಯಕ ನಿತೀಶ್ ಕುಮಾರ್ ಇಂಡಿಯಾ ಬೆಳೆಯುತ್ತಿದೆ. ಉತ್ತಮ ನಾಯಕ, ಉತ್ತಮ ಸಮಯ ಮತ್ತೆ ಸಿಗುವುದಿಲ್ಲ. ಇದು ನಮಗೆ ಉತ್ತಮ ಅವಕಾಶ. ಈಗ ಇದನ್ನು ಕಳೆದುಕೊಂಡರೆ ಮತ್ತೆ ಸಿಗುವುದಿಲ್ಲ ಎಂದು ಹೇಳಿದರು.
ಮೋದಿಯವರು ದೇಶದ ಸೇವೆ ಮಾಡಿದ್ದಾರೆ, ಮುಂದಿನ ಅವಧಿಯಲ್ಲಿ ಏನು ಬಾಕಿ ಉಳಿದಿದೆಯೋ ಅದನ್ನೂ ಮಾಡಲಿದ್ದಾರೆ. ಮೋದಿ ಅವರಿಗೆ ಈಗ ಮತ್ತೊಂದು ಅವಕಾಶ ಸಿಕ್ಕಿದೆ. ಅಲ್ಲೂ ಇಲ್ಲೂ ಕೆಲವರು ಗೆದ್ದಿದ್ದಾರೆ. ಆದರೆ ಮುಂದಿನ ಬಾರಿ ಎಲ್ಲರೂ ಸೋಲಲಿದ್ದಾರೆ ಎಂದು ನಿತೀಶ್ ಕುಮಾರ್ ಹೇಳಿದರು.
ಬಿಹಾರದಲ್ಲಿ ಏನು ಬಾಕಿ ಉಳಿದಿದೆ ಅದನ್ನು ಕೂಡ ಮೋದಿಯವರು ಮಾಡಲಿದ್ದಾರೆ. ಅದಕ್ಕಾಗಿ ನಾವು ಎಲ್ಲಾ ಬೆಂಬಲ ನೀಡಿದ್ದೇವೆ. ಆದಷ್ಟು ಬೇಗ ಅವರು ಪ್ರಧಾನಿಯಾಗಲಿ. ಇವತ್ತೆ ಪ್ರಧಾನಿಯಾಗಬೇಕಿತ್ತು. ಆ ಕಡೆ ಈ ಕಡೆ ಹೋಗುವವರಿಗೆ ಯಾವುದೇ ಲಾಭ ಇಲ್ಲ ಎಂದು ಇದೇ ವೇಳೆ ನಿತೀಶ್ ಕುಮಾರ್ ಇಂಡಿಯಾ ಒಕ್ಕೂಟಕ್ಕೆ ಟಾಂಗ್ ಕೊಟ್ಟರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…