Featured

ಇಂಥ ಕೆಟ್ಟ ರಾಜಕೀಯವನ್ನು ನಾನು ಎಂದೂ ನೋಡಿರಲಿಲ್ಲ : ಸಿದ್ದರಾಮಯ್ಯ ಆಕ್ರೋಶ – Vishwanews24

ಇಂಥ ಕೆಟ್ಟ ರಾಜಕೀಯವನ್ನು ನಾನು ಎಂದೂ ನೋಡಿರಲಿಲ್ಲ

ಮತ್ತೆ ನಾವು ಅಧಿಕಾರಕ್ಕೆ ಬಂದು ಎಲ್ಲವನ್ನೂ ತನಿಖೆ ಮಾಡಿಸಿ ಭ್ರಷ್ಟಾಚಾರ ಬಯಲಿಗೆಳೆಯುತ್ತೇವೆ : ಸಿದ್ದರಾಮಯ್ಯ

ಬೆಂಗಳೂರು: ಈ ಸರ್ಕಾರ ರಾಜ್ಯದ ಬೊಕ್ಕಸವನ್ನು ಬೇಕಾಬಿಟ್ಟಿಯಾಗಿ ಲೂಟಿ ಮಾಡಲು ಆರಂಭ ಮಾಡಿದೆ. ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇದ್ದು ಚುನಾವಣೆಗೆ ದುಡ್ಡು ಮಾಡಿಕೊಳ್ಳುವ ಉದ್ದೇಶದಿಂದ ಯಾವೆಲ್ಲ ಶಾಸಕರಿಗೆ ಮಂತ್ರಿ ಆಗದೆ ಇರುವುದರಿಂದ ಅಸಮಧಾನ ಇದೆ ಅವರಿಗೆ ದುಡ್ಡು ಮಾಡಿಕೊಡಲು ತರಾತುರಿನಲ್ಲಿ ಕೆಬಿಜೆಎಲ್‌ ನಲ್ಲಿ, ವಿಶ್ವೇರಯ್ಯ ನೀರಾವರಿ ನಿಗಮದಲ್ಲಿ, ಕರ್ನಾಟಕ ನೀರಾವರಿ ನಿಗಮದಲ್ಲಿ ಸಭೆಯನ್ನು ಕರೆದು ಯೋಜನೆಗಳಿಗೆ ಅನುಮೋದನೆ ಪಡೆಯುತ್ತಿದ್ದಾರೆ.

ಇದರಲ್ಲಿ ಪಾರದರ್ಶಕತೆ ಇಲ್ಲ. ಟೆಂಡರ್‌ ಹಣವನ್ನು ಕೂಡ ಎರಡು, ಮೂರು ಪಟ್ಟು ಹೆಚ್ಚಿಗೆ ಮಾಡಿಕೊಂಡಿದ್ದಾರೆ, ರಾಜ್ಯದಲ್ಲಿ ಜನಜನಿತವಾಗಿರುವ 40% ಕಮಿಷನ್‌ ನ ಮುಂದುವರೆದ ಭಾಗವಿದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿಗೋಷ್ಠಿ ಮಾತನಾಡಿದ ಅವರು, ಜನರ ತೆರಿಗೆ ಹಣವನ್ನು ರಕ್ಷಣೆ ಮಾಡಬೇಕಾಗಿರುವುದು ನಮ್ಮೆಲ್ಲರ ಜವಾಬ್ದಾರಿ. ಟೆಂಡರ್‌ ಹಣವನ್ನು ಹೆಚ್ಚು ಮಾಡಿದ್ದಾರೆ, ಯಾರು ಹೆಚ್ಚು ಕಮಿಷನ್‌ ನೀಡುತ್ತಾರೆ ಅವರಿಗೆ ಕಾಮಗಾರಿ ಕೊಡುತ್ತಿದ್ದಾರೆ, ತಮಗೆ ಬೇಕಾದ ಗುತ್ತಿಗೆದಾರರನ್ನು ಹುಡುಕಿ ಕೆಲಸ ನೀಡುತ್ತಿದ್ದಾರೆ. ಹೀಗೆ ಮಾಡಿ ಕಮಿಷನ್‌ ವಸೂಲಿ ಮಾಡಿಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಲೋಕೋಪಯೋಗಿ, ನೀರಾವರಿ, ಬಿಬಿಎಂಪಿ, ಗ್ರಾಮೀಣಾಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಸುಮಾರು 20,000 ಕೋಟಿ ರೂ. ಬಾಕಿ ಬಿಲ್‌ ಇದೆ. 10% ಕಮಿಷನ್‌ ಕೊಟ್ಟವರಿಗೆ ಕೆಲಸ ಮಾರಾಟ ಮಾಡುವ ನಡೆಯುತ್ತಿದೆ, ಇದು ಮುಖ್ಯಮಂತ್ರಿ ಕಚೇರಿಯಿಂದಲೇ ಆರಂಭವಾದುದ್ದು. ಇದನ್ನು ತಡೆಗಟ್ಟಬೇಕಾದುದ್ದು ಅಗತ್ಯ. ಇದನ್ನು ಸದನದಲ್ಲಿ ಕೂಡ ಪ್ರಸ್ತಾಪ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.

ಸರ್ಕಾರಕ್ಕೆ, ಗುತ್ತಿಗೆದಾರರಿಗೆ, ಅಧಿಕಾರಿಗಳಿಗೆ ಮಾಧ್ಯಮಗಳ ಮೂಲಕ ಎಚ್ಚರಿಕೆ ನೀಡುತ್ತಿದ್ದೇವೆ, ಮುಂದೆ ಕಾನೂನುಬಾಹಿರವಾಗಿ ಈ ರೀತಿ ಮಾಡಿದರೆ ನೀವು ಸಿಕ್ಕಿಹಾಕಿಕೊಳ್ಳುತ್ತೀರ, ಈ ವಿಚಾರವನ್ನು ತಾತ್ವಿಕ ಅಂತ್ಯ ಕಾಣಿಸುವವರೆಗೆ ನಾವು ಬಿಡುವುದಿಲ್ಲ. ನ್ಯಾಯಾಲಯದಲ್ಲಿ ಇವರ ವಿರುದ್ಧ ನಾವು ಸಿವಿಲ್‌ ಮತ್ತು ಕ್ರಿಮಿನಲ್ ಮೊಕದ್ದಮೆ ದಾಖಲಿಸುತ್ತೇವೆ, ಇಂದು ರಾಜ್ಯದಲ್ಲಿ ಕಾಂಗ್ರೆಸ್‌ ಪರವಾದ ಗಾಳಿ ಬೀಸಲು ಆರಂಭವಾಗಿದೆ, ಹೀಗಾಗಿ ಮುಂದೆ ಮತ್ತೆ ನಾವು ಅಧಿಕಾರಕ್ಕೆ ಬಂದೇ ಬರುತ್ತೇವೆ, ನಾವು ತನಿಖಾ ಆಯೋಗ ರಚನೆ ಮಾಡಿ ಎಲ್ಲವನ್ನೂ ತನಿಖೆ ಮಾಡಿಸಿ, ಯಾರ ಮೇಲೆ ಭ್ರಷ್ಟಾಚಾರದ ಆರೋಪಗಳಿವೆ ಅವೆಲ್ಲವನ್ನೂ ಬಯಲಿಗೆಳೆಯುತ್ತೇವೆ. ಇಂಥ ಕೆಟ್ಟ ರಾಜಕೀಯವನ್ನು ನಾನು ಎಂದೂ ನೋಡಿರಲಿಲ್ಲ ಎಂದರು.

 

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago