ನವದೆಹಲಿ, : ಸಂಕಷ್ಟದ ಪರಿಸ್ಥಿತಿಯಲ್ಲಿ ಭಾರತವು ಶ್ರೀಲಂಕಾ ಜತೆಯಲ್ಲಿ ನಿಲ್ಲಲಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
ಶ್ರೀಲಂಕಾದಲ್ಲಿ ನಡೆದ ಭೀಕರ ಘಟನೆಯನ್ನು ಖಂಡಿಸುತ್ತೇನೆ. ನಮ್ಮ ನಡುವೆ ಇಂಥ ಘಟನೆಗಳಿಗೆ ಆಸ್ಪದವೇ ಇಲ್ಲ. ಇಂಥ ಸಂಕಷ್ಟದ ಪರಿಸ್ಥಿತಿಯಲ್ಲಿ ಭಾರತವು ಶ್ರೀಲಂಕಾ ಜತೆಯಲ್ಲಿ ನಿಲ್ಲಲಿದೆ. ಅಸುನೀಗಿದವರಿಗೆ ನನ್ನ ಶ್ರದ್ಧಾಂಜಲಿಯನ್ನು ಅರ್ಪಿಸುತ್ತೇನೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.
ಕ್ರೈಸ್ತರ ಪವಿತ್ರ ಹಬ್ಬ ಈಸ್ಟರ್ ದಿನ (ಏ.21) ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ಭೀಕರ ಆತ್ಮಾಹುತಿ ದಾಳಿ ನಡೆದಿತ್ತು. ಚರ್ಚ್ಗಳಲ್ಲಿ ಪ್ರಾರ್ಥನೆಯಲ್ಲಿ ನಿರತರಾಗಿದ್ದವರ ಮೇಲೆ ಮತ್ತು ವಿಲಾಸಿ ಹೊಟೇಲಿನಲ್ಲಿ ತಂಗಿದ್ದವರನ್ನು ಗುರಿಯಾಗಿಸಿಕೊಂಡು ಬಾಂಬ್ ಸ್ಫೋಟಿಸಲಾಗಿದ್ದು, ಕನಿಷ್ಠ 215 ಮಂದಿ ಸಾವಿಗೀಡಾಗಿದ್ದಾರೆ. 500ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಸರಣಿ ಬಾಂಬ್ ಸ್ಫೋಟದ ಬಳಿಕ ದೇಶಾದ್ಯಂತ ಕರ್ಫ್ಯೂ ಜಾರಿಗೊಳಿಸಲಾಗಿದೆ. ವಿಮಾನ ನಿಲ್ದಾಣ ಸಹಿತ ಆಯಕಟ್ಟಿನ ತಾಣಗಳಲ್ಲಿ ಬಂದೋಬಸ್ತ್ ಹೆಚ್ಚಿಸಲಾಗಿದೆ. ದೇಶಾದ್ಯಂತ ಕಟ್ಟೆಚ್ಚರ ಘೋಷಿಸಲಾಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…