ಬೆಂಗಳೂರು: ಆರ್ಎಸ್ಎಸ್ ಬಗ್ಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿರುವ ನಟ ಜಗ್ಗೇಶ್, “ನಾನು ಕಂಡ ಆರ್ಎಸ್ ಎಸ್ ಜಾತಿ ಧರ್ಮ ಮೀರಿದ ಮಾತೃಹೃದಯಿ ಸಂಘಟನೆ. ಜಗದಲ್ಲಿ ನಿಸ್ವಾರ್ಥಸೇವೆ ಮಾಡುವ ಮಾತೃಹೃದಯಿ ಸಂಸ್ಥೆ” ಎಂದಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಆ ಸಂಸ್ಥೆಯ ಸಂಪರ್ಕ ದೊರಕಿದರೆ ಅಂಥವರು ತಮಗರಿಯದೆ ಸಾತ್ವಿಕನಾಗಿ ಸ್ವಾರ್ಥಬಿಟ್ಟು ಸಮಾಜಕ್ಕೆ ಹೆಗಲುಕೊಡುವ ಕರ್ಮಯೋಗಿ ಆಗುತ್ತಾನೆ. ದೂರನಿಂತು ಬೆಟ್ಟ ನೋಡುವರಿಗು ಆ ಬೆಟ್ಟ ಏರಿದವರಿಗು ವಿವರಣೆಗೆ ವ್ಯತಾಸವುಂಟು!ನೋಡುಗರಿಗಿಂತ ಅದರ ಸಾಂಗತ್ಯ ಇರುವವರ ಸಂಖ್ಯೆ ಹೆಚ್ಚು ಕಾರಣ ಅದರ ಮಾತೃರೂಪ ಹಾಗು ಸರ್ವಸಂಗ ಪರಿತ್ಯಾಗಿಗಳು ಕಟ್ಟಿದ ನಿಸ್ವಾರ್ಥ” ಎಂದು ತಿಳಿಸಿದ್ದಾರೆ.
“ನಾನು ಕಂಡ ಆರ್ ಎಸ್ ಎಸ್ ಜಾತಿ ಧರ್ಮ ಮೀರಿದ ಮಾತೃಹೃದಯಿ ಸಂಘಟನೆ ಕೊರೋನ ಸಂದರ್ಭವಾಗಲಿ ನೆರೆಬಂದ ಸಂದರ್ಭವಾಗಲಿ ರಾಷ್ಟ್ರಕ್ಕೆ ಸಂಕಷ್ಟ ಬಂದಾಗ ಆಗಲಿ, ವಿದ್ಯೆ ದಾನಕ್ಕಾಗಲಿ, ಅನ್ನದ ಮಾರ್ಗಕ್ಕಾಗಲಿ ಶಿಸ್ತಿನ ಸೈನ್ಯ ಇಂಥ ಸ್ವಾರ್ಥ ಜಗದಲ್ಲಿ ನಿಸ್ವಾರ್ಥಸೇವೆ ಮಾಡುವ ಮಾತೃಹೃದಯಿ ಸಂಸ್ಥೆ ಎಂದರೆ ಅದು ಒಂದೆ ಆರ್ಎಸ್ಎಸ್. ಯಾರಿಗೆ ಸಂಘವಿದು. ಆ ಸಂಘದಲ್ಲಿ ಅದರ ಸಿದ್ಧಾಂತ ಅಪ್ಪಿ ಜೀವಿಸುವವರು ವಿದ್ಯಾವಂತರು ರಾಷ್ಟ್ರಪ್ರೇಮಿಗಳು, ಆತ್ಮಸಾಕ್ಷಾತ್ಕಾರ ಆದ ಶ್ವೇತವರ್ಣ ಸನ್ಯಾಸಿಗಳು. ಅವರಿಗೆ ದೇಶವೆ ಮನೆ ದೇಶವಾಸಿಗಳೆ ಬಂಧುಗಳು ಅವರ ನಿಸ್ವಾರ್ಥ ಸಮಾಜಸೇವೆಯೇ ದೇವರ ಪೂಜೆ..ಆ ಸಂಘದ ಬಗ್ಗೆ ಮಾತಾಡುವ ಮುನ್ನ ಅದರ ನಿಸ್ವಾರ್ಥಗುಣ ಅರಿಯಿರಿ” ಎಂದಿದ್ದಾರೆ.
RSS ಸಂಘಟನೆ ಇಲ್ಲದೆ ಹೋಗಿದ್ದರೆ ಭಾರತ ಪಾಕಿಸ್ತಾನ ಆಗುತಿತ್ತು : ಪ್ರಭು ಚವ್ಹಾಣ್ – Vishwanews24
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…