ಬೆಂಗಳೂರು : ರಾಜ್ಯದಲ್ಲಿ ದಿನಸಿ, ಧಾನ್ಯ ಸೇರಿದಂತೆ ಎಲ್ಲಾ ವಸ್ತುಗಳ ಬೆಲೆಗಳು ಗಗನಕ್ಕೇರಿದೆ. ಇದರಿಂದ ರಾಜ್ಯದ ಜನತೆ ಕಂಗೆಡುತ್ತಿದ್ದಾರೆ. ಇದೀಗಾ ಈ ದರ ಏರಿಕೆ ನಿಯಂತ್ರಿಸಲು ಕೇಂದ್ರ ಸರ್ಕಾರ ಮಾರಾಟ ಮಾಡಲು ತೀರ್ಮಾನಿಸಿರುವ ಭಾರತ್ ಬ್ರ್ಯಾಂಡ್ ಅಕ್ಕಿ ಇಂದಿನಿಂದ ಗ್ರಾಹಕರ ಕೈಗೆ ಸೇರಲಿದೆ.
ಇಂದು ಬೆಂಗಳೂರಿನಲ್ಲಿ 4 ಗಂಟೆಗೆ ಬೆಂಗಳೂರಿನಲ್ಲಿ ಭಾರತ್ ಬ್ರ್ಯಾಂಡ್ ಅಕ್ಕಿ ವಾಹನಗಳಿಗೆ ಚಾಲನೆ ದೊರೆಯಲಿದ್ದು, ಈ ಮೂಲಕ ಭಾರತ್ ಅಕ್ಕಿ ಮಾರಾಟಕ್ಕೆ ಚಾಲನೆ ನೀಡಲಾಗುತ್ತಿದೆ.
ಈಗಾಗಲೇ, ಭಾರತ್ ಬ್ರ್ಯಾಂಡ್’ ಅಡಿಯಲ್ಲಿ ಗೋಧಿ ಹಿಟ್ಟು ಮತ್ತು ಬೇಳೆ ಕಾಳುಗಳನ್ನು ಮಾರಾಟ ಮಾಡಲಾಗುತ್ತಿದೆ. ಇದರೊಂದಿಗೆ ಅಕ್ಕಿಯನ್ನೂ ಸೇರಿಸಲಾಗಿದ್ದು, ಪ್ರತಿ ಒಂದು ಕೆ.ಜಿ ಅಕ್ಕಿಗೆ ರೂ.29 ದರ ನಿಗದಿಪಡಿಸಲಾಗೆದೆ. ಭಾರತ್ ಬ್ರ್ಯಾಂಡ್ ಅಕ್ಕಿಯ 5 ಕೆ.ಜಿ ಮತ್ತು 10 ಕೆ.ಜಿ ಪ್ಯಾಕೆಟ್ ಗಳು ದೊರೆಯಲಿದೆ.
ಇನ್ನು ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಮಹಾಮಂಡಳ (ನಾಫೆಡ್), ರಾಷ್ಟ್ರೀಯ ಸಹಕಾರ ಗ್ರಾಹಕರ ಮಹಾಮಂಡಳ (ಎನ್ಸಿಸಿಎಫ್) ಮತ್ತು ಕೇಂದ್ರೀಯ ಭಂಡಾರದ ಮಳಿಗೆಗಳಲ್ಲಿ ಮಾರಾಟಕ್ಕೆ ನಿರ್ಧರಿಸಲಾಗಿದ್ದು, ಇದರ ಜೊತೆಗೆ ರಿಲಯನ್ಸ್, ಫ್ಲಿಪ್ಕಾರ್ಟ್, ಬಿಗ್ ಬಾಸ್ಕೆಟ್ ಅಷ್ಟೇ ಅಲ್ಲದೆ ಆನ್ಲೈನ್ನಲ್ಲೂ ಭಾರತ್ ಬ್ರ್ಯಾಂಡ್ ಅಕ್ಕಿ ಖರೀದಿ ಮಾಡಬಹುದು ಎಂದು ಮೂಲಗಳ ಪ್ರಕಾರ ತಿಳಿದು ಬಂದಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…