ಬೆಂಗಳೂರು : ರಾಜ್ಯದಲ್ಲಿ ದಿನಸಿ, ಧಾನ್ಯ ಸೇರಿದಂತೆ ಎಲ್ಲಾ ವಸ್ತುಗಳ ಬೆಲೆಗಳು ಗಗನಕ್ಕೇರಿದೆ. ಇದರಿಂದ ರಾಜ್ಯದ ಜನತೆ ಕಂಗೆಡುತ್ತಿದ್ದಾರೆ. ಇದೀಗಾ ಈ ದರ ಏರಿಕೆ ನಿಯಂತ್ರಿಸಲು ಕೇಂದ್ರ ಸರ್ಕಾರ ಮಾರಾಟ ಮಾಡಲು ತೀರ್ಮಾನಿಸಿರುವ ಭಾರತ್ ಬ್ರ್ಯಾಂಡ್ ಅಕ್ಕಿ ಇಂದಿನಿಂದ ಗ್ರಾಹಕರ ಕೈಗೆ ಸೇರಲಿದೆ.
ಇಂದು ಬೆಂಗಳೂರಿನಲ್ಲಿ 4 ಗಂಟೆಗೆ ಬೆಂಗಳೂರಿನಲ್ಲಿ ಭಾರತ್ ಬ್ರ್ಯಾಂಡ್ ಅಕ್ಕಿ ವಾಹನಗಳಿಗೆ ಚಾಲನೆ ದೊರೆಯಲಿದ್ದು, ಈ ಮೂಲಕ ಭಾರತ್ ಅಕ್ಕಿ ಮಾರಾಟಕ್ಕೆ ಚಾಲನೆ ನೀಡಲಾಗುತ್ತಿದೆ.
ಈಗಾಗಲೇ, ಭಾರತ್ ಬ್ರ್ಯಾಂಡ್’ ಅಡಿಯಲ್ಲಿ ಗೋಧಿ ಹಿಟ್ಟು ಮತ್ತು ಬೇಳೆ ಕಾಳುಗಳನ್ನು ಮಾರಾಟ ಮಾಡಲಾಗುತ್ತಿದೆ. ಇದರೊಂದಿಗೆ ಅಕ್ಕಿಯನ್ನೂ ಸೇರಿಸಲಾಗಿದ್ದು, ಪ್ರತಿ ಒಂದು ಕೆ.ಜಿ ಅಕ್ಕಿಗೆ ರೂ.29 ದರ ನಿಗದಿಪಡಿಸಲಾಗೆದೆ. ಭಾರತ್ ಬ್ರ್ಯಾಂಡ್ ಅಕ್ಕಿಯ 5 ಕೆ.ಜಿ ಮತ್ತು 10 ಕೆ.ಜಿ ಪ್ಯಾಕೆಟ್ ಗಳು ದೊರೆಯಲಿದೆ.
ಇನ್ನು ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಮಹಾಮಂಡಳ (ನಾಫೆಡ್), ರಾಷ್ಟ್ರೀಯ ಸಹಕಾರ ಗ್ರಾಹಕರ ಮಹಾಮಂಡಳ (ಎನ್ಸಿಸಿಎಫ್) ಮತ್ತು ಕೇಂದ್ರೀಯ ಭಂಡಾರದ ಮಳಿಗೆಗಳಲ್ಲಿ ಮಾರಾಟಕ್ಕೆ ನಿರ್ಧರಿಸಲಾಗಿದ್ದು, ಇದರ ಜೊತೆಗೆ ರಿಲಯನ್ಸ್, ಫ್ಲಿಪ್ಕಾರ್ಟ್, ಬಿಗ್ ಬಾಸ್ಕೆಟ್ ಅಷ್ಟೇ ಅಲ್ಲದೆ ಆನ್ಲೈನ್ನಲ್ಲೂ ಭಾರತ್ ಬ್ರ್ಯಾಂಡ್ ಅಕ್ಕಿ ಖರೀದಿ ಮಾಡಬಹುದು ಎಂದು ಮೂಲಗಳ ಪ್ರಕಾರ ತಿಳಿದು ಬಂದಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…