ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾದ್ಯಂತ ಬೆಳಿಗ್ಗೆ 07 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದ್ದು, ಸಾರ್ವಜನಿಕರ ಉಪಯೋಗಕ್ಕಾಗಿ ಮಧ್ಯಾಹ್ನ 01 ಗಂಟೆಯವರೆಗೆ ಬಸ್ ಸಂಚಾರಕ್ಕೆ ಅನುಮತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಶುಕ್ರವಾರ ಸಂಜೆ 7ರಿಂದ ಸೋಮವಾರ ಬೆಳಗ್ಗೆ 7ರವರೆಗೆ ವೀಕೆಂಡ್ ಕರ್ಫ್ಯೂ ಇರಲಿದ್ದು, ಉಳಿದ ದಿನಗಳಲ್ಲಿ ಮೇಲಿನ ಆದೇಶ ಅನ್ವಯವಾಗಲಿದೆ. ಅಂಗಡಿ ಮುಂಗಟ್ಟು ಮತ್ತಿತರ ವಾಣಿಜ್ಯ ಚಟುವಟಿಕೆಯ ಉದ್ದೇಶಗಳಿಗೆ/ಕೇಂದ್ರಗಳಿಗೆ 18 ವರ್ಷದೊಳಗಿನವರನ್ನು ಕರೆದೊಯ್ಯುವುದನ್ನು ನಿರ್ಬಂಧಿಸಲಾಗಿದೆ. ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಹೊಟೇಲ್ಗಳನ್ನು ಕೂಡ ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಹೊಟೇಲ್ ಮತ್ತು ಬಸ್ ಗಳಲ್ಲಿ ಒಟ್ಟು ಆಸನ ಸಾಮರ್ಥ್ಯದ ಶೇ.50ರಷ್ಟನ್ನು ಮೀರುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…