ಬೆಂಗಳೂರು : ದೇಶಾದ್ಯಂತ ಕೇಂದ್ರದ ನೂತನ ಸಚಿವರು ಇಂದಿನಿಂದ ಜನಾಶೀರ್ವಾದ ಯಾತ್ರೆ ಕೈಗೊಳ್ಳಲಿದ್ದು, ರಾಜ್ಯದ ನಾಲ್ವರು ಕೇಂದ್ರ ಸಚಿವರು ತಮ್ಮ ವಿಭಾಗ ವ್ಯಾಪ್ತಿಯಲ್ಲಿ ಯಾತ್ರೆ ನಡೆಸಲಿದ್ದಾರೆ.
ಕರಾವಳಿ ಭಾಗದಲ್ಲಿ (ದಕ್ಷಿಣ ಕನ್ನಡ) ಕೃಷಿ ಮತ್ತು ರೈತರ ಕಲ್ಯಾಣ ಸಹಾಯಕ ಸಚಿವೆ ಶೋಭಾ ಕರಂದ್ಲಾಜೆ, ಹಳೇ ಮೈಸೂರು ಭಾಗದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಹಾಯಕ ಸಚಿವ ನಾರಾಯಣಸ್ವಾಮಿ, ಬೆಂಗಳೂರು ವಿಭಾಗದಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಹಾಯಕ ಸಚಿವ ರಾಜೀವ್ ಚಂದ್ರಶೇಖರ್, ಕಲಬುರಗಿ ವಿಭಾಗದಲ್ಲಿ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಹಾಯಕ ಸಚಿವ ಭಗವಂತ ಖೂಬಾ ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಉದ್ದೇಶದಿಂದ ಯಾತ್ರೆ ಕೈಗೊಳ್ಳಲಿದ್ದಾರೆ.
ಇನ್ನು ಬಹುತೇಕರು ತಮ್ಮ ಕ್ಷೇತ್ರಗಳಿಂದಲೇ ಸೋಮವಾರ ಯಾತ್ರೆ ಆರಂಭಿಸಲಿದ್ದು, ವಿವಿಧ ಊರುಗಳನ್ನು ಸಂಚರಿಸಲಿದ್ದಾರೆ. ದೇವಸ್ಥಾನ ಭೇಟಿ, ಸ್ಥಳೀಯ ಮಟ್ಟದ ಸಭೆಗಳು ಯಾತ್ರೆಯ ಭಾಗವಾಗಿವೆ. ಸ್ಥಳೀಯ ಶಾಸಕರು, ರಾಜ್ಯ ಸರ್ಕಾರದ ಸಚಿವರು ಕೂಡ ಯಾತ್ರೆಯಲ್ಲಿ ಕೇಂದ್ರ ಸಚಿವರಿಗೆ ಸಾಥ್ ನೀಡಲಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…