ಉಡುಪಿ: ಕಾರ್ಕಳ ತಾಲೂಕು ಯರ್ಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಪರಶುರಾಮ ಥೀಮ್ ಪಾರ್ಕ್ಗೆ ಪ್ರವಾಸಿಗರ ಹಾಗೂ ಸಾರ್ವಜನಿಕರ ಪ್ರವೇಶವನ್ನು ಅ.9ರಿಂದ ನವೆಂಬರ್ ತಿಂಗಳ ಕೊನೆಯವರೆಗೆ ತಾತ್ಕಾಲಿಕವಾಗಿ ನಿಷೇಧಿಸಿ ಕಾರ್ಕಳ ತಹಶೀಲ್ದಾರ್ ಅವರು ಆದೇಶ ಹೊರಡಿಸಿದ್ದಾರೆ.
ಈ ಥೀಮ್ ಪಾರ್ಕ್ ಕಳೆದ ಜನವರಿ 27ರಂದು ಉದ್ಘಾಟನೆಗೊಂಡು ಸಾರ್ವಜನಿಕರು ಹಾಗೂ ಪ್ರವಾಸಿಗರ ಭೇಟಿಗೆ ತೆರೆದು ಕೊಂಡಿತ್ತು. ಆದರೆ ಥೀಮ್ ಪಾರ್ಕ್ನ ಬಾಕಿ ಉಳಿದ ಕಾಮಗಾರಿಯಲ್ಲಿ ಪರಶುರಾಮ ಮೂರ್ತಿ ಯನ್ನು ಬಲಪಡಿಸುವ, ಮೂರ್ತಿಗೆ ಸಿಡಿಲು ನಿರೋಧಕವನ್ನು ಅಳವಡಿಸುವ ಹಾಗೂ ಮೂರ್ತಿಗೆ ತುಕ್ಕು ನಿರೋಧಕ ಲೇಪನದ ಮತ್ತು ಇತರ ಮುಕ್ತಾ ಯದ ಕಾಮಗಾರಿಯನ್ನು ಪೂರ್ಣಗೊಳಿಸಲು ಅನುಕೂಲವಾಗುವಂತೆ ಸೆ.23ರವರೆಗೆ ಪ್ರವೇಶವನ್ನು ನಿಷೇಧಿಸಲಾಗಿತ್ತು.
ಇದೀಗ ಕಾಮಗಾರಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ನಿರ್ಮಿತಿ ಕೇಂದ್ರದವರು ಇನ್ನಷ್ಟು ಕಾಲಾವಕಾಶವನ್ನು ಕೋರಿದ್ದು, ಅದರಂತೆ ಅ.9ರಿಂದ ನವೆಂಬರ್ ಕೊನೆಯವರೆಗೆ ಪರಶುರಾಮ ಥೀಮ್ ಪಾರ್ಕ್ಗೆ ಯಾವುದೇ ಸಾರ್ವಜನಿಕರ ಹಾಗೂ ಪ್ರವಾಸಿಗರ ಭೇಟಿಯನ್ನು ನಿಷೇಧಿಸಲಾಗಿದೆ ಎಂದು ಕಾರ್ಕಳ ತಹಶೀಲ್ದಾರರ ಪ್ರಕಟಣೆ ತಿಳಿಸಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…