ಬೆಂಗಳೂರು: ಕೊರೊನಾ ಎರಡನೇ ಅಲೆಯಿಂದಾಗಿ ಹೇರಲಾಗಿದ್ದ ಲಾಕ್ಡೌನ್ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಇಂದಿನಿಂದ (ಜು.26) ಪದವಿ ಕಾಲೇಜುಗಳ ಭೌತಿಕ ತರಗತಿಗಳು ಆರಂಭವಾಗುತ್ತಿದ್ದು, ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಸೂಚಿಸಿದ್ದಾರೆ.
ಈ ವಿಚಾರವಾಗಿ ಭಾನುವಾರ ಹೇಳಿಕೆ ನೀಡಿರುವ ಅವರು, “ನೇರ ತರಗತಿಗಳಿಗೆ ಹಾಜರಾಗುವ ಆಯ್ಕೆ ವಿದ್ಯಾರ್ಥಿಗಳಿಗೇ ಬಿಡಲಾಗಿದೆ. ಅವರು ಇಚ್ಛೆ ಇದ್ದರೆ ಭೌತಿಕ ತರಗತಿಗಳಿಗೆ ಹಾಜರಾಗಬಹುದು, ಇಲ್ಲವೇ ಆನ್ಲೈನ್ ಮೂಲಕವೂ ಕಲಿಯಬಹುದು. ಆದರೆ, ಯಾವುದಾದರೂ ಒಂದರಲ್ಲಿ ಹಾಜರಾತಿ ಕಡ್ಡಾಯ” ಎಂದು ಅವರು ತಿಳಿಸಿದ್ದಾರೆ.
“ನೇರ ತರಗತಿಗಳಿಗೆ ಹಾಜರಾಗಲು ಬಯಸುವ ವಿದ್ಯಾರ್ಥಿಗಳು ಮೊದಲ ಡೋಸ್ ಲಸಿಕೆ ಪಡೆಯುವುದು ಕಡ್ಡಾಯ. ಈಗಾಗಲೇ ವಿಶ್ವವಿದ್ಯಾಲಯ ಧನ ಸಹಾಯ ಆಯೋಗ (UGC) ಸ್ಪಷ್ಟ ಮಾರ್ಗಸೂಚಿ ಜಾರಿ ಮಾಡಿದ್ದು, ಅದನ್ನು ಎಲ್ಲ ವಿಶ್ವವಿದ್ಯಾಲಯಗಳ ಅಡಿಯಲ್ಲಿರುವ ಕಾಲೇಜುಗಳು ಚಾಚೂತಪ್ಪದೇ ಪಾಲಿಸಬೇಕು. ಈ ಬಗ್ಗೆ ಈಗಾಗಲೇ ಆದೇಶ ಹೊರಡಿಸಲಾಗಿದೆ” ಎಂದು ತಿಳಿಸಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…