ಬೆಂಗಳೂರು : ಇಂದಿನಿಂದ ರಾಜ್ಯದ್ಯಂತ ಕೋವಿಡ್-19 ವಿಶೇಷ ಲಸಿಕಾ ಮೇಳವನ್ನು ನಡೆಸಲಾಗುತ್ತಿದೆ. ಈ ಮೇಳದಲ್ಲಿ ಆದ್ಯತೆಯ ಮೇರೆಗೆ ರಾಜ್ಯದಲ್ಲಿ ಕೊರೋನಾ ಲಸಿಕೆ ನೀಡಲಾಗುತ್ತಿದೆ. ಈ ಕುರಿತಂತೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಭಿಯಾನ ನಿರ್ದೇಶಕಿ ಅರುಂಧತಿಯವರು ಬಿಬಿಎಂಪಿ ಮುಖ್ಯ ಆಯುಕ್ತರಿಗೆ, ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆಯಲ್ಲಿ ಹೊರಡಿಸಿದ್ದು, ರಾಜ್ಯದಲ್ಲಿ ಕೋವಿಡ್-19 ಲಸಿಕಾಕರಣದ ಪ್ರಗತಿ ವೃದ್ಧಿಯ ಉಪಕ್ರಮವಾಗಿ ದಿನಾಂಕ 27-08-2021ರಂದು ರಾಜ್ಯಾದ್ಯಂತ ಕೋವಿಡ್-19 ಲಸಿಕಾ ಮೇಳವನ್ನು ಹಮ್ಮಿಕೊಳ್ಳಲಾಗಿದೆ.
ಈ ಮೇಳದಲ್ಲಿ ಈ ಕೆಳಕಂಡ ಗುಂಪಿನವರಿಗೆ ಆದ್ಯತೆ ನೀಡುವ ಮುಖಾಂತರ ಈ ಕೋವಿಡ್ ಲಸಿಕಾ ಮೇಳವನ್ನು ಯಶಸ್ವಿಗೊಳಿಸುವಂತೆ ಕೋರಿದ್ದಾರೆ.
ಇಂದು ಅದ್ಯತೆ ಮೇಲೆ ಯಾರಿಗೆಲ್ಲಾ ಲಸಿಕೆ ಸಿಗಲಿದೆ.?
• ಇದುವರೆಗೆ ಒಂದು ಡೋಸ್ ಲಸಿಕೆ ಪಡೆಯದ ಆರೋಗ್ಯ ಕಾರ್ಯಕರ್ತರ ಮತ್ತು ಮುಂಚೂಣಿ ಕಾರ್ಯಕರ್ತರ ಶೇ.100ರಷ್ಟು ಕೋವಿಡ್-19 ಲಸಿಕಾಕರಣ
• 2ನೇ ಡೋಸ್ ಗೆ ಬಾಕಿ ಇರುವ ಆರೋಗ್ಯ ಕಾರ್ಯಕರ್ತರ ಮತ್ತು ಮುಂಚೂಣಿ ಕಾರ್ಯಕರ್ತರ ಶೇ.100ರಷ್ಟು ಕೋವಿಡ್-19 ಲಸಿಕಾಕರಣ
• 60 ವರ್ಷ ಮೇಲ್ಪಟ್ಟವರ 1ನೇ ಡೋಸ್ ಹಾಗೂ 2ನೇ ಡೋಸ್ ಕೋವಿಡ್ ಲಸಿಕಾಕರಣ
• ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 1 ರಿಂದ 10ನೇ ತರಗತಿ, ಪದವಿ ಪೂರ್ವ ಕಾಲೇಜಿನ ( 11ನೇ ಹಾಗೂ 12ನೇ ತರಗತಿ ಅನ್ವಯಿಸುವಲ್ಲಿ ) ಬೋಧಕ, ಬೋಧಕೇತರ ಸಿಬ್ಬಂದಿಗಳು ಇನ್ನೂ ಕೋವಿಡ್-19 ಲಸಿಕೆ ಪಡೆಯದಿದ್ದಲ್ಲಿ ಅವರಿಗೆ ಲಸಿಕಾಕರಣ
• ಇತರೆ 18 ವರ್ಷ ಮೇಲ್ಪಟ್ಟ ಅರ್ಹ ಫಲಾನುಭವಿಗಳ ಕೋವಿಡ್-19 ಲಸಿಕಾಕರಣ
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…