Featured

ಇಂದಿನಿಂದ ರಾಜ್ಯಾದ್ಯಂತ ಕೊರೊನಾ ಲಸಿಕಾ ಅಭಿಯಾನ -Vishwanews24

ಇಂದಿನಿಂದ ರಾಜ್ಯಾದ್ಯಂತ ಕೊರೊನಾ ಲಸಿಕಾ ಅಭಿಯಾನ -Vishwanews24

ಯಾರಿಗೆ ಮೊದಲ ಆದ್ಯತೆ?..

ಇಲ್ಲಿದೆ ಮಾಹಿತಿ..

ಬೆಂಗಳೂರು : ಇಂದಿನಿಂದ ರಾಜ್ಯದ್ಯಂತ ಕೋವಿಡ್-19 ವಿಶೇಷ ಲಸಿಕಾ ಮೇಳವನ್ನು ನಡೆಸಲಾಗುತ್ತಿದೆ. ಈ ಮೇಳದಲ್ಲಿ ಆದ್ಯತೆಯ ಮೇರೆಗೆ ರಾಜ್ಯದಲ್ಲಿ ಕೊರೋನಾ ಲಸಿಕೆ ನೀಡಲಾಗುತ್ತಿದೆ. ಈ ಕುರಿತಂತೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಭಿಯಾನ ನಿರ್ದೇಶಕಿ ಅರುಂಧತಿಯವರು ಬಿಬಿಎಂಪಿ ಮುಖ್ಯ ಆಯುಕ್ತರಿಗೆ, ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆಯಲ್ಲಿ ಹೊರಡಿಸಿದ್ದು, ರಾಜ್ಯದಲ್ಲಿ ಕೋವಿಡ್-19 ಲಸಿಕಾಕರಣದ ಪ್ರಗತಿ ವೃದ್ಧಿಯ ಉಪಕ್ರಮವಾಗಿ ದಿನಾಂಕ 27-08-2021ರಂದು ರಾಜ್ಯಾದ್ಯಂತ ಕೋವಿಡ್-19 ಲಸಿಕಾ ಮೇಳವನ್ನು ಹಮ್ಮಿಕೊಳ್ಳಲಾಗಿದೆ.

ಈ ಮೇಳದಲ್ಲಿ ಈ ಕೆಳಕಂಡ ಗುಂಪಿನವರಿಗೆ ಆದ್ಯತೆ ನೀಡುವ ಮುಖಾಂತರ ಈ ಕೋವಿಡ್ ಲಸಿಕಾ ಮೇಳವನ್ನು ಯಶಸ್ವಿಗೊಳಿಸುವಂತೆ ಕೋರಿದ್ದಾರೆ.

ಇಂದು ಅದ್ಯತೆ ಮೇಲೆ ಯಾರಿಗೆಲ್ಲಾ ಲಸಿಕೆ ಸಿಗಲಿದೆ.?

• ಇದುವರೆಗೆ ಒಂದು ಡೋಸ್ ಲಸಿಕೆ ಪಡೆಯದ ಆರೋಗ್ಯ ಕಾರ್ಯಕರ್ತರ ಮತ್ತು ಮುಂಚೂಣಿ ಕಾರ್ಯಕರ್ತರ ಶೇ.100ರಷ್ಟು ಕೋವಿಡ್-19 ಲಸಿಕಾಕರಣ

• 2ನೇ ಡೋಸ್ ಗೆ ಬಾಕಿ ಇರುವ ಆರೋಗ್ಯ ಕಾರ್ಯಕರ್ತರ ಮತ್ತು ಮುಂಚೂಣಿ ಕಾರ್ಯಕರ್ತರ ಶೇ.100ರಷ್ಟು ಕೋವಿಡ್-19 ಲಸಿಕಾಕರಣ

• 60 ವರ್ಷ ಮೇಲ್ಪಟ್ಟವರ 1ನೇ ಡೋಸ್ ಹಾಗೂ 2ನೇ ಡೋಸ್ ಕೋವಿಡ್ ಲಸಿಕಾಕರಣ

• ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 1 ರಿಂದ 10ನೇ ತರಗತಿ, ಪದವಿ ಪೂರ್ವ ಕಾಲೇಜಿನ ( 11ನೇ ಹಾಗೂ 12ನೇ ತರಗತಿ ಅನ್ವಯಿಸುವಲ್ಲಿ ) ಬೋಧಕ, ಬೋಧಕೇತರ ಸಿಬ್ಬಂದಿಗಳು ಇನ್ನೂ ಕೋವಿಡ್-19 ಲಸಿಕೆ ಪಡೆಯದಿದ್ದಲ್ಲಿ ಅವರಿಗೆ ಲಸಿಕಾಕರಣ

• ಇತರೆ 18 ವರ್ಷ ಮೇಲ್ಪಟ್ಟ ಅರ್ಹ ಫಲಾನುಭವಿಗಳ ಕೋವಿಡ್-19 ಲಸಿಕಾಕರಣ

 

Vishwa News 24

Recent Posts

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

8 hours ago

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

8 hours ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

9 hours ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

9 hours ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

9 hours ago

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

9 hours ago