Featured

ಇಂದಿನಿಂದ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ – Vishwanews24

ಇಂದಿನಿಂದ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ – Vishwanews24

ಬೆಂಗಳೂರು: ಹೊಸ ವರ್ಷ ಆಚರಣೆ ಮತ್ತು ಓಮೈಕ್ರಾನ್  ಹಿನ್ನೆಲೆ ರಾಜ್ಯದಲ್ಲಿ ಇಂದಿನಿಂದ ನೈಟ್ ಕರ್ಫ್ಯೂ  ಜಾರಿಯಾಗಲಿದೆ. ರಾತ್ರಿ 10 ಗಂಟೆಯಿಂದ ಬೆಳಗಿನ ಜಾವ 5 ಗಂಟೆವರೆಗೂ ನೈಟ್ ಕರ್ಫ್ಯೂ ಇರಲಿದೆ. ಅನಾವಶ್ಯಕವಾಗಿ ರಸ್ತೆಗೆ ಇಳಿಯುವ ಜನರನ್ನು ಪೊಲೀಸರು ವಶಕ್ಕೆ ಪಡೆಯಲು ಸಿದ್ಧತೆ ನಡೆಸಿದ್ದಾರೆ. ನೈಟ್ ಕರ್ಫ್ಯೂ ಹಿನ್ನೆಲೆ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಇಂದು‌ 10 ಗಂಟೆಗೆ ಎಲ್ಲಾ ಡಿಸಿಪಿಗಳನ್ನು‌ ಆಹ್ವಾನಿಸಿದ್ದು, ಸಭೆ ನಡೆಸಲಿದ್ದಾರೆ. ಯಾವೆಲ್ಲ ಬಂದೋಬಸ್ತ್ ಮಾಡಿಕೊಂಡಿದ್ದೀರಿ, ಎಲ್ಲೆಲ್ಲಿ ಬ್ಯಾರಿಗೇಟ್ ಹಾಕಬೇಕು ಅನ್ನೋದರ ಕುರಿತಾಗಿ ಸಭೆಯಲ್ಲಿ ಚರ್ಚೆ ನಡೆಯಲಿದೆ.

ಬಾರ್, ಪಬ್ , ರೆಸ್ಟೋರೆಂಟ್ ಗಳ ಮೇಲೆ ತೀವ್ರ ನಿಗಾ ಇರಿಸಬೇಕು. ಯಾವುದೇ ಕಾರಣಕ್ಕೂ ರಾತ್ರಿ 10 ಗಂಟೆ ಬಳಿಕ ಪಬ್ ಬಾರ್ ಅಂಡ್ ರೆಸ್ಟೋರೆಂಟ್ ಓಪನ್ ಇರದಂತೆ ನೋಡಬೇಕು. 9 ಗಂಟೆಯಿಂದಲೇ ಮೈಕ್ ಮೂಲಕ ಅನೌನ್ಸ್ ಮಾಡುತ್ತಿರಬೇಕು. ಜೊತೆಗೆ ಹೊಯ್ಸಳಗಳು ಸದಾ ಗಸ್ತಿನಲ್ಲಿ ಇರುವಂತೆ ಪೊಲೀಸ್ ಕಮೀಷನರ್ ಈಗಾಗಲೇ ಸೂಚನೆ ನೀಡಿದ್ದಾರೆ.

ನೈಟ್ ಕರ್ಪ್ಯೂ ವೇಳೆಯಲ್ಲಿ ಎನಿರುತ್ತೆ ಎನಿರಲ್ಲ.?

ನೈಟ್ ಕರ್ಪ್ಯೂ ವೇಳೆಯಲ್ಲಿ ರೋಗಿಗಳು ಮತ್ತು ಅವರ ಸಹಾಯಕರು ಓಡಾಡಬಹುದು. ತುರ್ತು ಸೇವೆಗಳು ಓಪನ್ ಇರಲಿದೆ

ಕಂಪನಿ ನೌಕರರು,‌ ಕಾರ್ಖಾನೆಯ ಕಾರ್ಮಿಕರು ಐಡಿ ಕಾರ್ಡ್ ತೋರಿಸಿ ಓಡಾಡಬಹುದು.

ಗೂಡ್ಸ್ ಸೇವೆ ಇರಲಿದೆಬಸ್ , ರೈಲು, ವಿಮಾನ ಸೇವೆ ಇರಲಿದೆ

ಬಸ್ ಟಿಕೆಟ್ ತೋರಿಸಿ ಓಡಾಟ ನಡೆಸಬಹುದು

ಎಲ್ಲಾ ವಾಣಿಜ್ಯ ಚಟುವಟಿಕೆಗೆ ನಿರ್ಬಂಧ

ಅಗತ್ಯ ಸೇವೆ ಒದಗಿಸುವ ವಾಹನಕ್ಕೆ ಅನುಮತಿ

ಫುಡ್​ ಹೋಂ ಡೆಲಿವರಿಗೆ ಅನುಮತಿ

ಇ-ಕಾಮರ್ಸ್, ಖಾಲಿ ವಾಹನ ಸಂಚಾರಕ್ಕೆ ಅವಕಾಶ

ದೂರ ಪ್ರಯಾಣದ ಬಸ್​ಗಳಿಗೆ ಅನುಮತಿ

ಆಟೋ, ಕ್ಯಾಬ್​ಗೆ ಅವಕಾಶ

ನೈಟ್​ಕರ್ಪ್ಯೂ ವೇಳೆ ಬಾರ್, ಪಬ್ ಬಂದ್

ಲೇಟ್​ನೈಟ್ ಪಾರ್ಟಿ, ಸಮಾರಂಭಗಳಿಗೆ ಬ್ರೇಕ್

ಎಲ್ಲಾ ಫುಡ್ ಸ್ಟ್ರೀಟ್​​ಗಳು ಬಂದ್

ಪಬ್,ಬಾರ್, ಕ್ಲಬ್​​, ಹೋಟೆಲ್​ಗಳ್ಲಿ ಡಿಸೆಂಬರ್ 28ರಿಂದ 10 ದಿನ ಶೇ.50ರಷ್ಟು ಮಾತ್ರ ಅವಕಾಶ

ಸಿನೆಮಾ ಥಿಯೇಟರ್ ಬಂದ್

ರಾಜ್ಯದಲ್ಲಿ ಹೊಸವರ್ಷಕ್ಕೆ ಹೊಸ ನಿಯಮ ಜಾರಿಯಾಗಲಿದೆ. ರಾಜ್ಯಾದ್ಯಂತ ಡಿ.28ರಿಂದ 10 ದಿನ ನೈಟ್ ಕರ್ಫ್ಯೂ ಇರಲಿದೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೂ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬಹಿರಂಗ ಹೊಸ ವರ್ಷಾಚರಣೆ ನಿಷೇಧ ಮಾಡಲಾಗಿದೆ. ಪಬ್, ಬಾರ್, ಕ್ಲಬ್​​, ಹೋಟೆಲ್​ಗಳ್ಲಿ ಡಿಸೆಂಬರ್ 28ರಿಂದ 10 ದಿನ ಶೇ.50ರಷ್ಟು ಮಾತ್ರ ಅವಕಾಶ ನೀಡಲಾಗಿದೆ. ಸಿನಿಮಾಗೆ 50% ಅನ್ವಯ ಆಗಲ್ಲ. ನೈಟ್ ಕರ್ಪ್ಯೂ ವೇಳೆ ಸಿನಿಮಾ ಬಂದ್ ಇರಲಿದೆ. ಆಮೇಲೆ ಪರಿಸ್ಥಿತಿ ‌ನೋಡಿಕೊಂಡು ಸಿಎಂ ತೀರ್ಮಾನ ಮಾಡ್ತಾರೆ ಎಂದು ಆರೋಗ್ಯ ಸುಧಾಕರ್ ಹೇಳಿದ್ದಾರೆ.

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

5 hours ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

5 hours ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

5 hours ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

6 hours ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

6 hours ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

6 hours ago