Featured

ಇಂದಿನಿಂದ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ – Vishwanews24

ಇಂದಿನಿಂದ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ – Vishwanews24

ಬೆಂಗಳೂರು: ಹೊಸ ವರ್ಷ ಆಚರಣೆ ಮತ್ತು ಓಮೈಕ್ರಾನ್  ಹಿನ್ನೆಲೆ ರಾಜ್ಯದಲ್ಲಿ ಇಂದಿನಿಂದ ನೈಟ್ ಕರ್ಫ್ಯೂ  ಜಾರಿಯಾಗಲಿದೆ. ರಾತ್ರಿ 10 ಗಂಟೆಯಿಂದ ಬೆಳಗಿನ ಜಾವ 5 ಗಂಟೆವರೆಗೂ ನೈಟ್ ಕರ್ಫ್ಯೂ ಇರಲಿದೆ. ಅನಾವಶ್ಯಕವಾಗಿ ರಸ್ತೆಗೆ ಇಳಿಯುವ ಜನರನ್ನು ಪೊಲೀಸರು ವಶಕ್ಕೆ ಪಡೆಯಲು ಸಿದ್ಧತೆ ನಡೆಸಿದ್ದಾರೆ. ನೈಟ್ ಕರ್ಫ್ಯೂ ಹಿನ್ನೆಲೆ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಇಂದು‌ 10 ಗಂಟೆಗೆ ಎಲ್ಲಾ ಡಿಸಿಪಿಗಳನ್ನು‌ ಆಹ್ವಾನಿಸಿದ್ದು, ಸಭೆ ನಡೆಸಲಿದ್ದಾರೆ. ಯಾವೆಲ್ಲ ಬಂದೋಬಸ್ತ್ ಮಾಡಿಕೊಂಡಿದ್ದೀರಿ, ಎಲ್ಲೆಲ್ಲಿ ಬ್ಯಾರಿಗೇಟ್ ಹಾಕಬೇಕು ಅನ್ನೋದರ ಕುರಿತಾಗಿ ಸಭೆಯಲ್ಲಿ ಚರ್ಚೆ ನಡೆಯಲಿದೆ.

ಬಾರ್, ಪಬ್ , ರೆಸ್ಟೋರೆಂಟ್ ಗಳ ಮೇಲೆ ತೀವ್ರ ನಿಗಾ ಇರಿಸಬೇಕು. ಯಾವುದೇ ಕಾರಣಕ್ಕೂ ರಾತ್ರಿ 10 ಗಂಟೆ ಬಳಿಕ ಪಬ್ ಬಾರ್ ಅಂಡ್ ರೆಸ್ಟೋರೆಂಟ್ ಓಪನ್ ಇರದಂತೆ ನೋಡಬೇಕು. 9 ಗಂಟೆಯಿಂದಲೇ ಮೈಕ್ ಮೂಲಕ ಅನೌನ್ಸ್ ಮಾಡುತ್ತಿರಬೇಕು. ಜೊತೆಗೆ ಹೊಯ್ಸಳಗಳು ಸದಾ ಗಸ್ತಿನಲ್ಲಿ ಇರುವಂತೆ ಪೊಲೀಸ್ ಕಮೀಷನರ್ ಈಗಾಗಲೇ ಸೂಚನೆ ನೀಡಿದ್ದಾರೆ.

ನೈಟ್ ಕರ್ಪ್ಯೂ ವೇಳೆಯಲ್ಲಿ ಎನಿರುತ್ತೆ ಎನಿರಲ್ಲ.?

ನೈಟ್ ಕರ್ಪ್ಯೂ ವೇಳೆಯಲ್ಲಿ ರೋಗಿಗಳು ಮತ್ತು ಅವರ ಸಹಾಯಕರು ಓಡಾಡಬಹುದು. ತುರ್ತು ಸೇವೆಗಳು ಓಪನ್ ಇರಲಿದೆ

ಕಂಪನಿ ನೌಕರರು,‌ ಕಾರ್ಖಾನೆಯ ಕಾರ್ಮಿಕರು ಐಡಿ ಕಾರ್ಡ್ ತೋರಿಸಿ ಓಡಾಡಬಹುದು.

ಗೂಡ್ಸ್ ಸೇವೆ ಇರಲಿದೆಬಸ್ , ರೈಲು, ವಿಮಾನ ಸೇವೆ ಇರಲಿದೆ

ಬಸ್ ಟಿಕೆಟ್ ತೋರಿಸಿ ಓಡಾಟ ನಡೆಸಬಹುದು

ಎಲ್ಲಾ ವಾಣಿಜ್ಯ ಚಟುವಟಿಕೆಗೆ ನಿರ್ಬಂಧ

ಅಗತ್ಯ ಸೇವೆ ಒದಗಿಸುವ ವಾಹನಕ್ಕೆ ಅನುಮತಿ

ಫುಡ್​ ಹೋಂ ಡೆಲಿವರಿಗೆ ಅನುಮತಿ

ಇ-ಕಾಮರ್ಸ್, ಖಾಲಿ ವಾಹನ ಸಂಚಾರಕ್ಕೆ ಅವಕಾಶ

ದೂರ ಪ್ರಯಾಣದ ಬಸ್​ಗಳಿಗೆ ಅನುಮತಿ

ಆಟೋ, ಕ್ಯಾಬ್​ಗೆ ಅವಕಾಶ

ನೈಟ್​ಕರ್ಪ್ಯೂ ವೇಳೆ ಬಾರ್, ಪಬ್ ಬಂದ್

ಲೇಟ್​ನೈಟ್ ಪಾರ್ಟಿ, ಸಮಾರಂಭಗಳಿಗೆ ಬ್ರೇಕ್

ಎಲ್ಲಾ ಫುಡ್ ಸ್ಟ್ರೀಟ್​​ಗಳು ಬಂದ್

ಪಬ್,ಬಾರ್, ಕ್ಲಬ್​​, ಹೋಟೆಲ್​ಗಳ್ಲಿ ಡಿಸೆಂಬರ್ 28ರಿಂದ 10 ದಿನ ಶೇ.50ರಷ್ಟು ಮಾತ್ರ ಅವಕಾಶ

ಸಿನೆಮಾ ಥಿಯೇಟರ್ ಬಂದ್

ರಾಜ್ಯದಲ್ಲಿ ಹೊಸವರ್ಷಕ್ಕೆ ಹೊಸ ನಿಯಮ ಜಾರಿಯಾಗಲಿದೆ. ರಾಜ್ಯಾದ್ಯಂತ ಡಿ.28ರಿಂದ 10 ದಿನ ನೈಟ್ ಕರ್ಫ್ಯೂ ಇರಲಿದೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೂ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬಹಿರಂಗ ಹೊಸ ವರ್ಷಾಚರಣೆ ನಿಷೇಧ ಮಾಡಲಾಗಿದೆ. ಪಬ್, ಬಾರ್, ಕ್ಲಬ್​​, ಹೋಟೆಲ್​ಗಳ್ಲಿ ಡಿಸೆಂಬರ್ 28ರಿಂದ 10 ದಿನ ಶೇ.50ರಷ್ಟು ಮಾತ್ರ ಅವಕಾಶ ನೀಡಲಾಗಿದೆ. ಸಿನಿಮಾಗೆ 50% ಅನ್ವಯ ಆಗಲ್ಲ. ನೈಟ್ ಕರ್ಪ್ಯೂ ವೇಳೆ ಸಿನಿಮಾ ಬಂದ್ ಇರಲಿದೆ. ಆಮೇಲೆ ಪರಿಸ್ಥಿತಿ ‌ನೋಡಿಕೊಂಡು ಸಿಎಂ ತೀರ್ಮಾನ ಮಾಡ್ತಾರೆ ಎಂದು ಆರೋಗ್ಯ ಸುಧಾಕರ್ ಹೇಳಿದ್ದಾರೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

10 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

11 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

11 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

12 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

13 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

13 hours ago