ಬೆಂಗಳೂರು: ಹೊಸ ವರ್ಷ ಆಚರಣೆ ಮತ್ತು ಓಮೈಕ್ರಾನ್ ಹಿನ್ನೆಲೆ ರಾಜ್ಯದಲ್ಲಿ ಇಂದಿನಿಂದ ನೈಟ್ ಕರ್ಫ್ಯೂ ಜಾರಿಯಾಗಲಿದೆ. ರಾತ್ರಿ 10 ಗಂಟೆಯಿಂದ ಬೆಳಗಿನ ಜಾವ 5 ಗಂಟೆವರೆಗೂ ನೈಟ್ ಕರ್ಫ್ಯೂ ಇರಲಿದೆ. ಅನಾವಶ್ಯಕವಾಗಿ ರಸ್ತೆಗೆ ಇಳಿಯುವ ಜನರನ್ನು ಪೊಲೀಸರು ವಶಕ್ಕೆ ಪಡೆಯಲು ಸಿದ್ಧತೆ ನಡೆಸಿದ್ದಾರೆ. ನೈಟ್ ಕರ್ಫ್ಯೂ ಹಿನ್ನೆಲೆ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಇಂದು 10 ಗಂಟೆಗೆ ಎಲ್ಲಾ ಡಿಸಿಪಿಗಳನ್ನು ಆಹ್ವಾನಿಸಿದ್ದು, ಸಭೆ ನಡೆಸಲಿದ್ದಾರೆ. ಯಾವೆಲ್ಲ ಬಂದೋಬಸ್ತ್ ಮಾಡಿಕೊಂಡಿದ್ದೀರಿ, ಎಲ್ಲೆಲ್ಲಿ ಬ್ಯಾರಿಗೇಟ್ ಹಾಕಬೇಕು ಅನ್ನೋದರ ಕುರಿತಾಗಿ ಸಭೆಯಲ್ಲಿ ಚರ್ಚೆ ನಡೆಯಲಿದೆ.
ಬಾರ್, ಪಬ್ , ರೆಸ್ಟೋರೆಂಟ್ ಗಳ ಮೇಲೆ ತೀವ್ರ ನಿಗಾ ಇರಿಸಬೇಕು. ಯಾವುದೇ ಕಾರಣಕ್ಕೂ ರಾತ್ರಿ 10 ಗಂಟೆ ಬಳಿಕ ಪಬ್ ಬಾರ್ ಅಂಡ್ ರೆಸ್ಟೋರೆಂಟ್ ಓಪನ್ ಇರದಂತೆ ನೋಡಬೇಕು. 9 ಗಂಟೆಯಿಂದಲೇ ಮೈಕ್ ಮೂಲಕ ಅನೌನ್ಸ್ ಮಾಡುತ್ತಿರಬೇಕು. ಜೊತೆಗೆ ಹೊಯ್ಸಳಗಳು ಸದಾ ಗಸ್ತಿನಲ್ಲಿ ಇರುವಂತೆ ಪೊಲೀಸ್ ಕಮೀಷನರ್ ಈಗಾಗಲೇ ಸೂಚನೆ ನೀಡಿದ್ದಾರೆ.
ನೈಟ್ ಕರ್ಪ್ಯೂ ವೇಳೆಯಲ್ಲಿ ಎನಿರುತ್ತೆ ಎನಿರಲ್ಲ.?
ನೈಟ್ ಕರ್ಪ್ಯೂ ವೇಳೆಯಲ್ಲಿ ರೋಗಿಗಳು ಮತ್ತು ಅವರ ಸಹಾಯಕರು ಓಡಾಡಬಹುದು. ತುರ್ತು ಸೇವೆಗಳು ಓಪನ್ ಇರಲಿದೆ
ಕಂಪನಿ ನೌಕರರು, ಕಾರ್ಖಾನೆಯ ಕಾರ್ಮಿಕರು ಐಡಿ ಕಾರ್ಡ್ ತೋರಿಸಿ ಓಡಾಡಬಹುದು.
ಗೂಡ್ಸ್ ಸೇವೆ ಇರಲಿದೆಬಸ್ , ರೈಲು, ವಿಮಾನ ಸೇವೆ ಇರಲಿದೆ
ಬಸ್ ಟಿಕೆಟ್ ತೋರಿಸಿ ಓಡಾಟ ನಡೆಸಬಹುದು
ಎಲ್ಲಾ ವಾಣಿಜ್ಯ ಚಟುವಟಿಕೆಗೆ ನಿರ್ಬಂಧ
ಅಗತ್ಯ ಸೇವೆ ಒದಗಿಸುವ ವಾಹನಕ್ಕೆ ಅನುಮತಿ
ಫುಡ್ ಹೋಂ ಡೆಲಿವರಿಗೆ ಅನುಮತಿ
ಇ-ಕಾಮರ್ಸ್, ಖಾಲಿ ವಾಹನ ಸಂಚಾರಕ್ಕೆ ಅವಕಾಶ
ದೂರ ಪ್ರಯಾಣದ ಬಸ್ಗಳಿಗೆ ಅನುಮತಿ
ಆಟೋ, ಕ್ಯಾಬ್ಗೆ ಅವಕಾಶ
ನೈಟ್ಕರ್ಪ್ಯೂ ವೇಳೆ ಬಾರ್, ಪಬ್ ಬಂದ್
ಲೇಟ್ನೈಟ್ ಪಾರ್ಟಿ, ಸಮಾರಂಭಗಳಿಗೆ ಬ್ರೇಕ್
ಎಲ್ಲಾ ಫುಡ್ ಸ್ಟ್ರೀಟ್ಗಳು ಬಂದ್
ಪಬ್,ಬಾರ್, ಕ್ಲಬ್, ಹೋಟೆಲ್ಗಳ್ಲಿ ಡಿಸೆಂಬರ್ 28ರಿಂದ 10 ದಿನ ಶೇ.50ರಷ್ಟು ಮಾತ್ರ ಅವಕಾಶ
ಸಿನೆಮಾ ಥಿಯೇಟರ್ ಬಂದ್
ರಾಜ್ಯದಲ್ಲಿ ಹೊಸವರ್ಷಕ್ಕೆ ಹೊಸ ನಿಯಮ ಜಾರಿಯಾಗಲಿದೆ. ರಾಜ್ಯಾದ್ಯಂತ ಡಿ.28ರಿಂದ 10 ದಿನ ನೈಟ್ ಕರ್ಫ್ಯೂ ಇರಲಿದೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೂ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬಹಿರಂಗ ಹೊಸ ವರ್ಷಾಚರಣೆ ನಿಷೇಧ ಮಾಡಲಾಗಿದೆ. ಪಬ್, ಬಾರ್, ಕ್ಲಬ್, ಹೋಟೆಲ್ಗಳ್ಲಿ ಡಿಸೆಂಬರ್ 28ರಿಂದ 10 ದಿನ ಶೇ.50ರಷ್ಟು ಮಾತ್ರ ಅವಕಾಶ ನೀಡಲಾಗಿದೆ. ಸಿನಿಮಾಗೆ 50% ಅನ್ವಯ ಆಗಲ್ಲ. ನೈಟ್ ಕರ್ಪ್ಯೂ ವೇಳೆ ಸಿನಿಮಾ ಬಂದ್ ಇರಲಿದೆ. ಆಮೇಲೆ ಪರಿಸ್ಥಿತಿ ನೋಡಿಕೊಂಡು ಸಿಎಂ ತೀರ್ಮಾನ ಮಾಡ್ತಾರೆ ಎಂದು ಆರೋಗ್ಯ ಸುಧಾಕರ್ ಹೇಳಿದ್ದಾರೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…