Featured

ಇಂದಿನಿಂದ ರಾಜ್ಯಾದ್ಯಂತ 15ರಿಂದ 18 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಲಸಿಕೆ ಅಭಿಯಾನ – Vishwanews24

ಇಂದಿನಿಂದ ರಾಜ್ಯಾದ್ಯಂತ 15ರಿಂದ 18 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಲಸಿಕೆ ಅಭಿಯಾನ – Vishwanews24

ಬೆಂಗಳೂರು : ಒಂದೆಡೆ ದೇಶಾದ್ಯಂತ ಒಮಿಕ್ರಾನ್‌ ರೂಪಾಂತರಿ ಸೇರಿದಂತೆ ಕೊರೊನಾ ಪ್ರಕರಣಗಳ ಸಂಖ್ಯೆ ದಿನೇ ದಿನೆ ಏರಿಕೆಯಾಗುತ್ತಿರುವುದು 3ನೇ ಅಲೆಯ ಪ್ರವೇಶದ ಮುನ್ಸೂಚನೆ ನೀಡಿದಂತಿದೆ. ಇನ್ನೊಂದೆಡೆ ಕೋವಿಡ್‌ನಿಂದ ಮಕ್ಕಳಿಗೆ ರಕ್ಷಣೆ ನೀಡುವ ಮಹತ್ವದ ಕ್ರಮದ ಭಾಗವಾಗಿ ಇಂದಿನಿಂದ ಸೋಂಕನ್ನು ಎದುರಿಸುವ ನಿಟ್ಟಿನಲ್ಲಿ ಮಕ್ಕಳಿಗೂ ಲಸಿಕೆ ನೀಡುವ ಸಿದ್ಧತೆ ಆರಂಭಗೊಂಡಿದೆ.

ಇಂದಿನಿಂದ 15ರಿಂದ 18 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಲಸಿಕೆ ನೀಡುವ ಅಭಿಯಾನ ನಡೆಯಲಿದೆ. ರಾಜ್ಯ ಮತ್ತು ದೇಶದಲ್ಲಿ ಕೋವಿಡ್‌ ಪ್ರಕರಣಗಳು ಮತ್ತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಅಭಿಯಾನಕ್ಕೆ ಹೆಚ್ಚಿನ ಮಹತ್ವ ದೊರೆತಿದೆ.

ರಾಜ್ಯದಲ್ಲಿ ಮಕ್ಕಳಿಗೆ ಲಸಿಕೆ ನೀಡುವ ಅಭಿಯಾನದ ಭಾಗವಾಗಿ ಬೆಂಗಳೂರಿನ ಭೈರವೇಶ್ವರ ನಗರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಲಿದ್ದಾರೆ. ಉಳಿದಂತೆ ಜಿಲ್ಲಾಮಟ್ಟದಲ್ಲಿ ಜಿಲ್ಲಾಉಸ್ತುವಾರಿ ಸಚಿವರು ಮತ್ತು ತಾಲ್ಲೂಕು ಮಟ್ಟದಲ್ಲಿ ಶಾಸಕರು ಅಭಿಯಾನ ಉದ್ಘಾಟಿಸಲಿದ್ದಾರೆ.

ಇಂದು ಅಭಿಯಾನಕ್ಕೆ ಚಾಲನೆ ದೊರಕಿದರೂ, ಜ.4ರ ಮಂಗಳವಾರದಂದು ಮಕ್ಕಳಿಗೆ ಪೂರ್ಣಪ್ರಮಾಣದಲ್ಲಿ ಲಸಿಕೆ ವಿತರಣೆ ಪ್ರಾರಂಭವಾಗುವುದು ಜ.3ರಂದು ಸೋಮವಾರ ನಿಗದಿತ ಸ್ಥಳಗಳಲ್ಲಿ ಮಾತ್ರ ಮಕ್ಕಳಿಗೆ ಲಸಿಕೆ ನೀಡಿ ನಾಳೆಯಿಂದ ಶಾಲಾ-ಕಾಲೇಜುಗಳಲ್ಲಿ ಲಸಿಕೆ ಪೂರ್ಣಪ್ರಮಾಣದಲ್ಲಿ ಲಸಿಕೆ ದೊರಕಲಿದೆ .

ರಾಜ್ಯದಲ್ಲಿ ಒಟ್ಟಾರೆ 31.75 ಲಕ್ಷ ವಿದ್ಯಾರ್ಥಿಗಳು ಲಸಿಕೆ ಪಡೆಯಲು ಅರ್ಹತೆ ಹೊಂದಿದ್ದಾರೆ. ಶಿಕ್ಷಣ ಸಂಸ್ಥೆ ಹಾಗೂ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಲಸಿಕೆ ನೀಡುವ ವ್ಯವಸ್ಥೆ ಮಾಡಲಾಗುತ್ತದೆ.

Vishwa News 24

Recent Posts

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ – vishwanews24

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…

5 hours ago

ನಿಮ್ಮ ಜೊತೆ ಸರಕಾರವಿದೆ ;ನಿಮ್ಮ ಸಂಕಷ್ಟಕ್ಕೆ ನಾವು ಸ್ಪಂದಿಸುತ್ತೇವೆ , ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಅಭಯ – vishwanews24

ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…

5 hours ago

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ – vishwanews24

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…

5 hours ago

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ – vishwanews24

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…

5 hours ago

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ – vishwanews24

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…

9 hours ago

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ – vishwanews24

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…

9 hours ago