ಕೊರೊನಾ ಅವಧಿ ಬಳಿಕ ಶಬರಿಮಲೆ ಅಯ್ಯಪ್ಪ ಸ್ವಾಮಿ ಸನ್ನಿಧಾನಕ್ಕೆ ಭೇಟಿ ಕೊಡುವ ಭಕ್ತರ ಸಂಖ್ಯೆ ಕೊರೊನಾ ಪೂರ್ವ ಅವಧಿಗೆ ಸಮನಾಗುತ್ತಿದೆ. ಮಂಗಳವಾರ ಶಬರಿಮಲೆಯಲ್ಲಿ ಧಾರ್ಮಿಕ ವಿಧಿಗಳು ಆರಂಭಗೊಂಡಿದ್ದು ಬುಧವಾರ ದೇವಸ್ಥಾನದ ಬಾಗಿಲು ತೆರೆಯಲಾಗುತ್ತಿದೆ, ಭಕ್ತರಿಂದ ದರ್ಶನ ಆರಂಭವಾಗುತ್ತಿದೆ.
ಕರಾವಳಿಯಾದ್ಯಂತ ಕಾರ್ತಿಕ ಮಾಸದ ಸಂಕ್ರಮಣದಂದು (ಬುಧವಾರ) ಭಕ್ತರು ಮಾಲೆಯನ್ನು ಹಾಕುತ್ತಾರೆ. ಡಿ. 27ರಂದು ಮಂಡಲ ಪೂಜೆ ನಡೆಯಲಿದ್ದು ಬಳಿಕ ಇನ್ನೊಂದಾವರ್ತಿಯಲ್ಲಿ ಮಕರಸಂಕ್ರಮಣ ದರ್ಶನಕ್ಕೆ ತೆರೆಯಲಾಗುತ್ತದೆ. ಡಿಸೆಂಬರ್ ಮೊದಲೆರಡು ವಾರಗಳಲ್ಲಿಯೂ ವಿವಿಧೆಡೆ ಶಿಬಿರಗಳ ಮೂಲಕ ಮಾಲೆ ಧರಿಸುತ್ತಾರೆ. ಈ ಸಂದರ್ಭ ವ್ರತಧಾರಿ ಗಳಲ್ಲದೆ ಮನೆಯ ಇತರ ಸದಸ್ಯರೂ ಸಸ್ಯಾಹಾರವನ್ನು ಸ್ವೀಕರಿಸಿರುವುದರಿಂದ ಒಟ್ಟಾರೆ ತರಕಾರಿ, ಹಣ್ಣುಗಳ ಬಳಕೆ ಜಾಸ್ತಿಯಾಗುತ್ತಿದೆ.
✴️ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದ ಕಾಂತಾರ ನಟಿ ಸಪ್ತಮಿ ಗೌಡ..
ಚೆಂಗನ್ನೂರಿನಿಂದ ನೀಲಕಲ್ ವರೆಗೆ ಸ್ಪಾಟ್ ಬುಕಿಂಗ್ ಮಾಡುವ 12 ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. 15 ಆಸನಗಳಿಗಿಂತ ಕಡಿಮೆ ಇರುವ ವಾಹನಗಳಿಗೆ ಪಂಪೆ ವರೆಗೆ ಹೋಗಲು ಅವಕಾಶವಿದೆ. ಅದಕ್ಕಿಂತ ಹೆಚ್ಚಿನ ಆಸನ ಸಾಮರ್ಥ್ಯದ ವಾಹನಗಳಿಗೆ ನೀಲಕಲ್ ವರೆಗೆ ಮಾತ್ರ ಪ್ರವೇಶವಿದೆ. ಅಲ್ಲಿ ಭಕ್ತರು ಇಳಿದು ಸರಕಾರಿ ಬಸ್ಗಳಲ್ಲಿ ತೆರಳಬೇಕು. ವಾಹನ ದಟ್ಟಣೆಯನ್ನು ಕಡಿಮೆ ಮಾಡಲು ಈ ಕ್ರಮ ಕೈಗೊಳ್ಳಲಾಗಿದೆ.
ಕೊರೊನಾ ಅವಧಿಯಲ್ಲಿ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿತ್ತು. ಈ ಬಾರಿ ನಿತ್ಯ ಒಂದು ಲಕ್ಷ ಭಕ್ತರಿಗೆ ದರ್ಶನಾವಕಾಶ ಸಿಗುವ ಸಾಧ್ಯತೆ ಇದೆ.
ಕುಂದಾಪುರ : ಶಂಕರನಾರಾಯಣ ಮದರ್ ಥೆರೆಸಾ ಮೆಮೋರಿಯಲ್ ಶಾಲೆ..▶️ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳಿಂದ ಆಜಾನ್ಗೆ ನೃತ್ಯ..
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…