ಮಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಇಂದಿನಿಂದ ಆರಂಭಗೊಳ್ಳಲಿದೆ.
ಇಂದಿನಿಂದ 5 ದಿನ ಅಂದರೆ ಡಿಸೆಂಬರ್ 14ರ ವರೆಗೆ ಲಕ್ಷದೀಪೋತ್ಸವ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಧರ್ಮಸ್ಥಳದ ದೇವಸ್ಥಾನ, ಬೀಡು, ವಸತಿಛತ್ರಗಳು, ಉದ್ಯಾನ, ಪ್ರವೇಶದ್ವಾರ, ಬಾಹುಬಲಿ ಬೆಟ್ಟವನ್ನು ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿದ್ದು, ಶ್ರೀಕ್ಷೇತ್ರ ಮದುಮಗಳಂತೆ ಅಲಂಕಾರಗೊಂಡಿದೆ.
ಲಕ್ಷದೀಪೋತ್ಸವ ಕಾರ್ಯಕ್ರಮಗಳು ನಡೆಯಲಿದ್ದು, ಯುಟ್ಯೂಬ್ ಮತ್ತು ಫೇಸ್ಬುಕ್ನಲ್ಲಿ ಕಾರ್ಯಕ್ರಮಗಳ ನೇರ ಪ್ರಸಾರ ನಡೆಯಲಿದೆ. ಈ ಬಾರಿ ವಸ್ತು ಪ್ರದರ್ಶನ ರದ್ದುಗೊಳಿಸಲಾಗಿದೆ. ಕಾರ್ಯಕ್ರಮಗಳನ್ನು ಮನೆಯಲ್ಲೇ ಕುಳಿತು ನೋಡಬೇಕು ಎಂದು ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಈ ಹಿಂದೆಯೇ ಭಕ್ತರಲ್ಲಿ ವಿನಂತಿಸಿಕೊಂಡಿದ್ದಾರೆ.
ಡಿ.13 ರಂದು ಸರ್ವಧರ್ಮ ಸಮ್ಮೇಳನದ 88ನೇ ಅಧಿವೇಶನವನ್ನು ವಸತಿ ಸಚಿವ ವಿ. ಸೋಮಣ್ಣ ಉದ್ಘಾಟಿಸಲಿದ್ದಾರೆ. ಕನಕಗಿರಿ ಜೈನ ಮಠದ ಭುವನಕೀರ್ತಿ ಭಟ್ಟಾರಕ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. 14ರಂದು ನಡೆಯುವ ಸಾಹಿತ್ಯ ಸಮ್ಮೇಳನವನ್ನು ಹಿರಿಯ ವಿದ್ವಾಂಸ ಡಾ.ಎಸ್ ರಂಗನಾಥ್ ಉದ್ಘಾಟಿಸಲಿದ್ದು, ವಿಮರ್ಶಕ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ರಾತ್ರಿ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ನಡೆಯಲಿದೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…