ಮಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಇಂದಿನಿಂದ ಆರಂಭಗೊಳ್ಳಲಿದೆ.
ಇಂದಿನಿಂದ 5 ದಿನ ಅಂದರೆ ಡಿಸೆಂಬರ್ 14ರ ವರೆಗೆ ಲಕ್ಷದೀಪೋತ್ಸವ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಧರ್ಮಸ್ಥಳದ ದೇವಸ್ಥಾನ, ಬೀಡು, ವಸತಿಛತ್ರಗಳು, ಉದ್ಯಾನ, ಪ್ರವೇಶದ್ವಾರ, ಬಾಹುಬಲಿ ಬೆಟ್ಟವನ್ನು ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿದ್ದು, ಶ್ರೀಕ್ಷೇತ್ರ ಮದುಮಗಳಂತೆ ಅಲಂಕಾರಗೊಂಡಿದೆ.
ಲಕ್ಷದೀಪೋತ್ಸವ ಕಾರ್ಯಕ್ರಮಗಳು ನಡೆಯಲಿದ್ದು, ಯುಟ್ಯೂಬ್ ಮತ್ತು ಫೇಸ್ಬುಕ್ನಲ್ಲಿ ಕಾರ್ಯಕ್ರಮಗಳ ನೇರ ಪ್ರಸಾರ ನಡೆಯಲಿದೆ. ಈ ಬಾರಿ ವಸ್ತು ಪ್ರದರ್ಶನ ರದ್ದುಗೊಳಿಸಲಾಗಿದೆ. ಕಾರ್ಯಕ್ರಮಗಳನ್ನು ಮನೆಯಲ್ಲೇ ಕುಳಿತು ನೋಡಬೇಕು ಎಂದು ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಈ ಹಿಂದೆಯೇ ಭಕ್ತರಲ್ಲಿ ವಿನಂತಿಸಿಕೊಂಡಿದ್ದಾರೆ.
ಡಿ.13 ರಂದು ಸರ್ವಧರ್ಮ ಸಮ್ಮೇಳನದ 88ನೇ ಅಧಿವೇಶನವನ್ನು ವಸತಿ ಸಚಿವ ವಿ. ಸೋಮಣ್ಣ ಉದ್ಘಾಟಿಸಲಿದ್ದಾರೆ. ಕನಕಗಿರಿ ಜೈನ ಮಠದ ಭುವನಕೀರ್ತಿ ಭಟ್ಟಾರಕ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. 14ರಂದು ನಡೆಯುವ ಸಾಹಿತ್ಯ ಸಮ್ಮೇಳನವನ್ನು ಹಿರಿಯ ವಿದ್ವಾಂಸ ಡಾ.ಎಸ್ ರಂಗನಾಥ್ ಉದ್ಘಾಟಿಸಲಿದ್ದು, ವಿಮರ್ಶಕ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ರಾತ್ರಿ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ನಡೆಯಲಿದೆ.
ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…