ನವದೆಹಲಿ : ಇಂದಿನಿಂದ ಸಂಸತ್ತಿನಲ್ಲಿ ಉಭಯ ಸದನಗಳ ಮುಂಗಾರು ಅಧಿವೇಶನ ಆರಂಭವಾಗಲಿದ್ದು ಇದೇ ಮೊದಲ ಬಾರಿಗೆ ಎರಡೂ ಸದನಗಳನ್ನೂ ಬಳಸಿಕೊಂಡು ಒಂದು ಸದನ ಕಲಾಪ ನಡೆಸಲಾಗುತ್ತಿದೆ.
ಒಂದು ಕಲಾಪದಿಂದ ಮತ್ತೊಂದು ಕಲಾಪಕ್ಕೆ ಆರು ತಿಂಗಳ ಕಾಲದ ಅಂತರವಿರಬಾರದು ಎಂಬ ನಿಯಮದ ಪ್ರಕಾರವಾಗಿ ಕೊರೊನಾ ನಡುವೆಯೂ ಈ ಕಲಾಪವನ್ನು ನಡೆಸಲಾಗುತ್ತಿದ್ದು ಈ ಅಧಿವೇಶನವೂ ಎಂದಿಗಿಂತ ವಿಭಿನ್ನವಾಗಿ ನಡೆಯಲಿದೆ. ಸಾಮಾಜಿಕ ಅಂತರಕ್ಕೆ ಹೆಚ್ಚಿನ ಆಧ್ಯತೆ ನೀಡುವ ನಿಟ್ಟಿನಲ್ಲಿ ಎರಡು ಪಾಳಿಗಳಲ್ಲಿ ಕಲಾಪ ನಡೆಸಲಾಗುತ್ತಿದೆ.
ಸೋಮವಾರದಿಂದ ಅ. 1ರ ವರೆಗೆ ಕಲಾಪ ನಡೆಯಲಿದ್ದು ಈ ಬಾರಿ ಯಾವುದೇ ವಾರಾಂತ್ಯಗಳೂ, ಸರ್ಕಾರಿ ರಜೆಗಳನ್ನು ಪರಿಗಣನೆಗೆ ತೆಗೆದುಕೊಳ್ಳದೆ ಸತತ 18 ದಿನ ಕಲಾಪ ನಡೆಸಲು ಉದ್ದೇಶಿಸಲಾಗಿದೆ. ಬೆಳಿಗ್ಗೆ ರಾಜ್ಯಸಭೆ ಹಾಗೂ ಸಂಜೆ ಲೋಕಸಭೆ ಕಲಾಪಕ್ಕೆ ವ್ಯವಸ್ಥೆ ಮಾಡಲಾಗಿದೆ.
ಸದನದಲ್ಲಿ ಬಿಜೆಪಿ ಸರ್ಕಾರವು 45 ಮಸೂದೆಗಳನ್ನು ಮಂಡಿಸಲು ಉದ್ದೇಶಿಸಿದ್ದು, ಈ ಪೈಕಿ ಕೆಲವನ್ನು ಖಡಾಖಂಡಿತವಾಗಿ ವಿರೋಧಿಸಲು ವಿರೋಧ ಪಕ್ಷಗಳು ಸಜ್ಜಾಗಿದೆ. ಹಾಗೆಯೇ ದೇಶದಲ್ಲಿ ಉಂಟಾದ ಕೊರೊನಾ ಬಿಕ್ಕಟ್ಟು, ಆರ್ಥಿಕ ಸಮಸ್ಯೆ, ನಿರುದ್ಯೋಗ ಸಮಸ್ಯೆ, ಜಿಡಿಪಿ ಕುಸಿತ, ಚೀನಾ ಗಡಿ ಬಿಕ್ಕಟ್ಟು, ಬೆಲೆ ಏರಿಕೆ, ಜಿಎಸ್ಟಿ ನಷ್ಟ ಪರಿಹಾರ ವಿಚಾರ ಮೊದಲಾದವುಗಳನ್ನು ಮುಂದಿಟ್ಟು ಸರ್ಕಾರವನ್ನು ಪೇಚಿಗೆ ಸಿಲುಕಿಸಲು ಕೂಡಾ ವಿರೋಧ ಪಕ್ಷಗಳು ತಯಾರಾಗಿದೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…