ನವದೆಹಲಿ : ಇಂದಿನಿಂದ ಸಂಸತ್ತಿನಲ್ಲಿ ಉಭಯ ಸದನಗಳ ಮುಂಗಾರು ಅಧಿವೇಶನ ಆರಂಭವಾಗಲಿದ್ದು ಇದೇ ಮೊದಲ ಬಾರಿಗೆ ಎರಡೂ ಸದನಗಳನ್ನೂ ಬಳಸಿಕೊಂಡು ಒಂದು ಸದನ ಕಲಾಪ ನಡೆಸಲಾಗುತ್ತಿದೆ.
ಒಂದು ಕಲಾಪದಿಂದ ಮತ್ತೊಂದು ಕಲಾಪಕ್ಕೆ ಆರು ತಿಂಗಳ ಕಾಲದ ಅಂತರವಿರಬಾರದು ಎಂಬ ನಿಯಮದ ಪ್ರಕಾರವಾಗಿ ಕೊರೊನಾ ನಡುವೆಯೂ ಈ ಕಲಾಪವನ್ನು ನಡೆಸಲಾಗುತ್ತಿದ್ದು ಈ ಅಧಿವೇಶನವೂ ಎಂದಿಗಿಂತ ವಿಭಿನ್ನವಾಗಿ ನಡೆಯಲಿದೆ. ಸಾಮಾಜಿಕ ಅಂತರಕ್ಕೆ ಹೆಚ್ಚಿನ ಆಧ್ಯತೆ ನೀಡುವ ನಿಟ್ಟಿನಲ್ಲಿ ಎರಡು ಪಾಳಿಗಳಲ್ಲಿ ಕಲಾಪ ನಡೆಸಲಾಗುತ್ತಿದೆ.
ಸೋಮವಾರದಿಂದ ಅ. 1ರ ವರೆಗೆ ಕಲಾಪ ನಡೆಯಲಿದ್ದು ಈ ಬಾರಿ ಯಾವುದೇ ವಾರಾಂತ್ಯಗಳೂ, ಸರ್ಕಾರಿ ರಜೆಗಳನ್ನು ಪರಿಗಣನೆಗೆ ತೆಗೆದುಕೊಳ್ಳದೆ ಸತತ 18 ದಿನ ಕಲಾಪ ನಡೆಸಲು ಉದ್ದೇಶಿಸಲಾಗಿದೆ. ಬೆಳಿಗ್ಗೆ ರಾಜ್ಯಸಭೆ ಹಾಗೂ ಸಂಜೆ ಲೋಕಸಭೆ ಕಲಾಪಕ್ಕೆ ವ್ಯವಸ್ಥೆ ಮಾಡಲಾಗಿದೆ.
ಸದನದಲ್ಲಿ ಬಿಜೆಪಿ ಸರ್ಕಾರವು 45 ಮಸೂದೆಗಳನ್ನು ಮಂಡಿಸಲು ಉದ್ದೇಶಿಸಿದ್ದು, ಈ ಪೈಕಿ ಕೆಲವನ್ನು ಖಡಾಖಂಡಿತವಾಗಿ ವಿರೋಧಿಸಲು ವಿರೋಧ ಪಕ್ಷಗಳು ಸಜ್ಜಾಗಿದೆ. ಹಾಗೆಯೇ ದೇಶದಲ್ಲಿ ಉಂಟಾದ ಕೊರೊನಾ ಬಿಕ್ಕಟ್ಟು, ಆರ್ಥಿಕ ಸಮಸ್ಯೆ, ನಿರುದ್ಯೋಗ ಸಮಸ್ಯೆ, ಜಿಡಿಪಿ ಕುಸಿತ, ಚೀನಾ ಗಡಿ ಬಿಕ್ಕಟ್ಟು, ಬೆಲೆ ಏರಿಕೆ, ಜಿಎಸ್ಟಿ ನಷ್ಟ ಪರಿಹಾರ ವಿಚಾರ ಮೊದಲಾದವುಗಳನ್ನು ಮುಂದಿಟ್ಟು ಸರ್ಕಾರವನ್ನು ಪೇಚಿಗೆ ಸಿಲುಕಿಸಲು ಕೂಡಾ ವಿರೋಧ ಪಕ್ಷಗಳು ತಯಾರಾಗಿದೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…