Featured

ಇಂದಿನಿಂದ ಸಾಮಾಜಿಕ ಜಾಲತಾಣ ಬಳಸುವಾಗ ಎಚ್ಚರ ತಪ್ಪಿದರೆ ಅಂದರ್ ಗ್ಯಾರಂಟಿ: ಸೈಬರ್ ಕ್ರೈಮ್ ವಾರ್ನಿಂಗ್

ಬೆಂಗಳೂರು: ಆಧುನಿಕ ತಂತ್ರಜ್ಞಾನದ ಸಂಪರ್ಕ ವಿದ್ಯುನ್ಮಾನ ಯಂತ್ರಗಳ ಎಲ್ಲ ಮಾಹಿತಿಗಳು ಸೈಬರ್ ಕ್ರೈಂ ಘಟಕದ ಕಣ್ಗಾವಲಿನಲ್ಲಿ ದಾಖಲಾಗಲಿದೆ.
ದೂರ ಸಂಪರ್ಕದ ನಿಯಂತ್ರಣ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಪೊಲೀಸ್ ಇಲಾಖೆಯ ಸೈಬರ್ ಕ್ರೈಂ ಘಟಕ, ಸಾರ್ವಜನಿಕರು ಬಳಸುವ ಎಲ್ಲ ದೂರವಾಣಿಗಳನ್ನು ದಾಖಲು ಮಾಡಿಕೊಳ್ಳುತ್ತದೆ. ವಾಟ್ಸಪ್ ಸಂದೇಶವನ್ನು ಮೇಲ್ವಿಚಾರಣೆ ಮಾಡುತ್ತದೆ. ಟ್ವಿಟರ್ ಸಂದೇಶ, ಫೇಸ್​ಬುಕ್ ಮಾಹಿತಿ ವಿನಿಮಯ ಜೊತೆಗೆ ಎಲ್ಲ ಸಾಮಾಜಿಕ ಜಾಲತಾಣಗಳ ಮೊಬೈಲ್ ಸಂಪರ್ಕದ ಮಾಹಿತಿಗಳನ್ನು ಸೈಬರ್ ಘಟಕ ಮೇಲ್ವಿಚಾರಣೆ ನಡೆಸಲಿದೆ.

ಈ ಎಲ್ಲ ಸಂಪರ್ಕಗಳ ಸಾರ್ವಜನಿಕರು ಮಾಹಿತಿ ವಿನಿಮಯ ಮಾಡಿಕೊಳ್ಳುವ ಹಾಗೂ ರವಾನೆ ಮಾಡುವ ಸಂದರ್ಭದಲ್ಲಿ ಎಚ್ಚರಿಕೆ ವಹಿಸಬೇಕು. ಅನಾವ್ಯಶಕ ಸಂದೇಶಗಳ ಮೇಲೆ ನಿಯಂತ್ರಣ ತರಲು ಸೈಬರ್ ಕ್ರೈಂ ಘಟಕಗಳು ನಾಳೆಯಿಂದ ಕಾರ್ಯಪ್ರವೃತ್ತಗೊಳ್ಳಲಿವೆ. ಪೊಲೀಸ್ ಸೈಬರ್ ಅಪರಾಧ ಘಟಕ ತ್ವರಿತವಾಗಿ ಕಾರ್ಯಪ್ರವೃತ್ತಗೊಂಡು ಇನ್ನು ಮುಂದೆ ಎಲ್ಲ ದೂರ ಸಂಪರ್ಕಗಳ ಮಾಹಿತಿ ದಾಖಲು ಜೊತೆಗೆ ಸಂಪೂರ್ಣ ಕಣ್ಗಾವಲಿನಲ್ಲಿ ಕಾರ್ಯಪ್ರವೃತ್ತವಾಗಲಿದೆ.

ಅನಾವಶ್ಯಕವಾಗಿ ಮಾಹಿತಿ ಕಳುಹಿಸದಂತೆ ಮನವಿ ಮಾಡಿರುವ ಸೈಬರ್ ಘಟಕ, ಪ್ರತಿಯೊಬ್ಬರು ಎಲ್ಲ ವಿಚಾರಗಳನ್ನು ಗಂಭೀರವಾಗಿ ಪರಿಗಣಿಸಿ ಮಾಹಿತಿ ವಿನಿಮಯ ಮಾಡಿಕೊಳ್ಳಬೇಕು. ವಿವಿಧ ತಂಡಗಳು ತಮ್ಮದೇ ಟ್ವಿಟರ್, ಫೇಸ್​ಬುಕ್ ಹಾಗೂ ಸಾಮಾಜಿಕ ಜಾಲತಾಣಗಳನ್ನು ಹೊಂದಿರುವ ಘಟಕಗಳ ಮೇಲೆಯೂ ಸೈಬರ್ ಘಟಕ ನಿಗಾ ಇಡುತ್ತದೆ. ಮಾಹಿತಿ ವಿನಿಯಮ ಜನಸಾಮಾನ್ಯರ, ಸಾರ್ವಜನಿಕರಿಗೆ ಆತಂಕ ಉಂಟು ಮಾಡುವಂತಹ ಕಾರ್ಯಗಳಲ್ಲಿ ತೊಡಗಿಕೊಳ್ಳಬಾರದು ಎಂದು ಸೂಚನೆ ನೀಡಿದೆ.

ಪ್ರಧಾನಮಂತ್ರಿ, ಕೇಂದ್ರ ಸರ್ಕಾರ ಹಾಗೂ ರಾಜಕೀಯ ಪಕ್ಷಗಳ ವಿಚಾರಗಳ ಬಗ್ಗೆ ವಿಡಿಯೋ ಅಥವಾ ಇತರೆ ಯಾವುದೇ ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳು ಪ್ರಕಟಿಸುವಂತಿಲ್ಲವೆಂದು ಸೈಬರ್ ಘಟಕ ಎಚ್ಚರಿಕೆ ನೀಡಿದೆ.

Vishwa News 24

Recent Posts

ಉಡುಪಿ: ಮೀನುಗಾರರಿಗೆ ಯೋಜನೆಗಳ ಮಾಹಿತಿ ತಲುಪಿಸಿ: ಶಾಸಕ ಯಶ್‌ಪಾಲ್ ಸುವರ್ಣ – vishwanews24

ಉಡುಪಿ: ಮೀನುಗಾರರಿಗೆ ಯೋಜನೆಗಳ ಮಾಹಿತಿ ತಲುಪಿಸಿ: ಶಾಸಕ ಯಶ್‌ಪಾಲ್ ಸುವರ್ಣ ಉಡುಪಿ: ಮೀನುಗಾರಿಕೆ ದೇಶದ ಆರ್ಥಿಕತೆಗೆ ಮಹತ್ತರ ಕೊಡುಗೆ ನೀಡುವ…

2 hours ago

ನಾಳೆ ಮಧ್ಯಾಹ್ನ ಸಿಜೆಪಿಗೆ ಸರ್ಕಾರದ ನಿರ್ಧಾರ ತಿಳಿಸುತ್ತೇವೆ: ಜೆಪಿ ನಡ್ಡಾ – vishwanews24

ನಾಳೆ ಮಧ್ಯಾಹ್ನ ಸಿಜೆಪಿಗೆ ಸರ್ಕಾರದ ನಿರ್ಧಾರ ತಿಳಿಸುತ್ತೇವೆ: ಜೆಪಿ ನಡ್ಡಾ ನವದೆಹಲಿ: ನಾಳೆ ಮಧ್ಯಾಹ್ನ ಮತ್ತೆ ಕಾಕ್ರೋಚ್‌ ಜನತಾ ಪಾರ್ಟಿ…

2 hours ago

ಉಡುಪಿ ಅಕ್ಕಪಡೆ ತ್ವರಿತ ಕಾರ್ಯಾಚರಣೆ : ಕಾಣೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಸುರಕ್ಷಿತವಾಗಿ ಪತ್ತೆ – vishwanews24

ಉಡುಪಿ ಅಕ್ಕಪಡೆ ತ್ವರಿತ ಕಾರ್ಯಾಚರಣೆ : ಕಾಣೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಸುರಕ್ಷಿತವಾಗಿ ಪತ್ತೆ ಉಡುಪಿ :ಜಿಲ್ಲೆಯಲ್ಲಿ ಕಾಣೆಯಾಗಿದ್ದ ಎಂಟನೇ…

2 hours ago

ಧರ್ಮೇಂದ್ರ ಪ್ರಧಾನ್ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ : ರಾಹುಲ್ ಗಾಂಧಿ – vishwanews24

ಧರ್ಮೇಂದ್ರ ಪ್ರಧಾನ್ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ : ರಾಹುಲ್ ಗಾಂಧಿ ನವದೆಹಲಿ: ಧರ್ಮೇಂದ್ರ ಪ್ರಧಾನ್ ಅವರನ್ನ…

2 hours ago

ಪ್ರತಿಷ್ಠಿತ ಕಂಪನಿಗಳ ಹೆಸರಲ್ಲಿ ನಕಲಿ ಕೀಟನಾಶಕ ತಯಾರಿಸಿ ರೈತರಿಗೆ ಮಾರಾಟ : ಕೃಷಿ ಅಧಿಕಾರಿಗಳ ದಾಳಿ – vishwanews24

ಪ್ರತಿಷ್ಠಿತ ಕಂಪನಿಗಳ ಹೆಸರಲ್ಲಿ ನಕಲಿ ಕೀಟನಾಶಕ ತಯಾರಿಸಿ ರೈತರಿಗೆ ಮಾರಾಟ : ಕೃಷಿ ಅಧಿಕಾರಿಗಳ ದಾಳಿ ಚಿಕ್ಕಬಳ್ಳಾಪುರ: ಪ್ರತಿಷ್ಠಿತ ಕಂಪನಿಗಳ…

2 hours ago

ನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆ: ಇಂದಿನಿಂದಲೇ ಪರಿಷ್ಕೃತ ದರ ಜಾರಿ – vishwanews24

ನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆ: ಇಂದಿನಿಂದಲೇ ಪರಿಷ್ಕೃತ ದರ ಜಾರಿ ಬೆಂಗಳೂರು : ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಾಲು…

4 hours ago