ನವದೆಹಲಿ : ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಭಾರತೀಯ ಸೇನೆಯ ಗೌರವ ಲೆಫ್ಟಿನೆಂಟ್ ಕರ್ನಲ್ ಆಗಿ ಕಾಶ್ಮೀರದ ಕಣಿವೆಯಲ್ಲಿ ಗಸ್ತು ಮತ್ತು ಪಹರೆ ಕರ್ತವ್ಯವನ್ನು ನಿರ್ವಹಿಸಲು ಸಜ್ಜಾಗಿದ್ದಾರೆ.
ಬುಧವಾರದಿಂದ 15 ದಿನಗಳ ಕಾಲ ಅಂದರೆ ಆಗಸ್ಟ್ 15ರವರೆಗೆ ಅವರು ವಿಕ್ಟರ್ ಫೋರ್ಸ್ ನ ಭಾಗವಾಗಿ ತಮ್ಮ 106 ಟಿಎ ಬೆಟಾಲಿಯನ್ನೊಂದಿಗೆ ಕರ್ತವ್ಯ ನಿರ್ವಹಿಸಲಿದ್ದಾರೆ. ಈ ವೇಳೆ ಅವರು ಸೈನಿಕರ ದಿನಚರಿಯನ್ನೇ ಅನುಸರಿಸ ಲಿದ್ದಾರೆ. ಪ್ಯಾರಾ ಟ್ರೂಪರ್ ಆಗಿ ಈಗಾಗಲೆ ತರಬೇತಿ ಪಡೆದಿರುವ 38 ವರ್ಷದ ಧೋನಿಗೆ ಗಡಿ ಕಾವಲು ಕೆಲಸವೂ ತರಬೇತಿಯ ಭಾಗವಾಗಿ ರುತ್ತದೆ,
ಆರಂಭದ ಮೂರು ದಿನ ಧೋನಿಯವರಿಗೆ ಸೇನೆಯ ಪ್ರಾಥಮಿಕ ತರಬೇತಿಯನ್ನು ನೀಡಲಾಗುತ್ತದೆ. ಇದೇ ವೇಳೆ ಸೇನೆಯ ಬಗ್ಗೆ ಮಾಹಿತಿ, ಫೈರಿಂಗ್ ಸಹ ಹೇಳಿಕೊಡಲಾಗುತ್ತದೆ. ವೆಸ್ಟ್ ಇಂಡೀಸ್ ಪ್ರವಾಸದಿಂದ ರಜೆ ಪಡೆದುಕೊಂಡಿರುವ ಧೋನಿ ಇಂದಿನಿಂದ ಆಗಸ್ಟ್ 15 ರ ವರೆಗೆ ಕಾಶ್ಮೀರದಲ್ಲಿ ಕಾರ್ಯನಿರ್ವಹಿಸಲಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…