ಮೇಷ : ಇಂದು ಕಚೇರಿಯಲ್ಲಿ ಒಳ್ಳೆಯ ವಾತಾವರಣ ಇರಲಿದೆ. ನೀವು ಚಟುವಟಿಕೆಯಿಂದ ಇರಲಿದ್ದೀರಿ. ನಿಮ್ಮೆಲ್ಲ ಕೆಲಸಗಳಿಗೆ ಸಂಗಾತಿಯು ಸಾಥ್ ನೀಡಲಿದ್ದಾರೆ.
ವೃಷಭ : ಮಕ್ಕಳ ಓದಿನತ್ತ ಹೆಚ್ಚಿನ ಗಮನ ನೀಡಲೇಬೇಕು. ಇಲ್ಲವಾದಲ್ಲಿ ಮಕ್ಕಳು ತುಂಬಾ ಹಿನ್ನಡೆ ಸಾಧಿಸುವ ಸಾಧ್ಯತೆ ಇದೆ. ದಾಂಪತ್ಯ ಜೀವನವು ಚೆನ್ನಾಗಿ ಇರಲಿದೆ.
ಮಿಥುನ : ಮಕ್ಕಳ ಒತ್ತಾಯಕ್ಕೆ ಮಣಿದು ಹೊಸ ವಾಹನ ಖರೀದಿ ಮಾಡಲಿದ್ದೀರಿ. ಸಂಗಾತಿಯ ಆರೋಗ್ಯ ಸಂಜೆಯ ಬಳಿಕ ಹದಗೆಡಲಿದೆ. ಇದರಿಂದ ನೀವು ಆತಂಕಕ್ಕೆ ಒಳಗಾಗುವಿರಿ.
ಕಟಕ : ನಿಮ್ಮ ಉತ್ತಮ ಬುದ್ಧಿಯಿಂದಾಗಿ ಉತ್ತಮ ಅವಕಾಶಗಳು ನಿಮ್ಮನ್ನು ಹುಡುಕಿಕೊಂಡು ಬರಲಿದೆ. ಇಂದು ನಿಮಗೆ ಕುಟುಂಬದಿಂದ ಒಳ್ಳೆಯ ಸುದ್ದಿ ಕೇಳಿ ಬರಲಿದೆ.
ಸಿಂಹ : ಕೃಷಿ ಚಟುವಟಿಕೆಗಳಲ್ಲಿ ಇರುವವರಿಗೆ ಇಂದು ತುಸು ಹೆಚ್ಚೇ ಖರ್ಚಾಗಬಹುದು. ಜವಳಿ ಉದ್ಯಮಿಗಳಿಗೆ ಉತ್ತಮ ಹಣಕಾಸಿನ ಲಾಭವಿದೆ. ಖಾಸಗಿ ಉದ್ಯೋಗಿಗಳಿಗೆ ಬಡ್ತಿ ಭಾಗ್ಯವಿದೆ.
ಕನ್ಯಾ : ಮಾತು ಬೆಳ್ಳಿ, ಮೌನ ಬಂಗಾರ ಎಂಬ ಮಾತಿದೆ. ಹೀಗಾಗಿ ಆದಷ್ಟು ಮೌನವಾಗಿ ಇದ್ದಷ್ಟು ಪರಿಸ್ಥಿತಿ ನಿಮ್ಮ ಪರವಾಗಿ ಇರಲಿದೆ. ವ್ಯಾಪಾರಿಗಳಿಗೆ ಇಂದು ಲಾಭವಿದೆ. ಪೋಷಕರ ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.
ತುಲಾ : ವೃತ್ತಿರಂಗದಲ್ಲಿ ನಿಮಗೆ ಯಶಸ್ಸಿದೆ. ವಿದ್ಯಾರ್ಥಿಗಳಿಗೆ ವಿದೇಶಿ ಪ್ರಯಾಣದ ಅವಕಾಶ ಹುಡುಕಿಕೊಂಡು ಬರಲಿದೆ. ವೈದ್ಯಕೀಯ ರಂಗದಲ್ಲಿ ಇರುವವರಿಗೆ ಇಂದು ಒತ್ತಡದ ದಿನವಾಗಿರಲಿದೆ.
ವೃಶ್ಚಿಕ : ರಾಜಕೀಯ ವ್ಯಕ್ತಿಗಳಿಗೆ ಇಂದು ಉತ್ತಮ ಸ್ಥಾನ ಮಾನ ಸಿಗಲಿದೆ. ತಾಯಿಯ ಕಟುವಾದ ನುಡಿಯು ನಿಮ್ಮ ಮನಸ್ಸಿಗೆ ಘಾಸಿ ಉಂಟು ಮಾಡುವ ಸಾಧ್ಯತೆ ಇದೆ.
ಧನು : ಹೊಸ ಕಚೇರಿಯ ವಾತಾವರಣಕ್ಕೆ ಹೊಂದಿಕೊಳ್ಳಲಿದ್ದೀರಿ. ಇಂದು ನಿಮಗೆ ಪ್ರಯಾಣ ಶುಭಕರವಾಗಿಲ್ಲ. ಹೀಗಾಗಿ ಆದಷ್ಟು ವಾಹನಗಳಿಂದ ದೂರವೇ ಇರಿ.
ಮಕರ : ಮಕ್ಕಳು ಓದಿನೆಡೆಗೆ ಹೆಚ್ಚಿನ ಆಸಕ್ತಿ ತೋರಲಿದ್ದಾರೆ. ಇದರಿಂದ ನೀವು ನಿರಾಳತೆ ಅನುಭವಿಸುವಿರಿ. ಇಂದು ನೀವು ಸಂಗಾತಿಯ ಜೊತೆ ಹೆಚ್ಚಿನ ಸಮಯ ಕಳೆಯಲಿದ್ದೀರಿ.
ಕುಂಭ : ಇಂದು ನಿಮ್ಮ ಅದೃಷ್ಟ ಖುಲಾಯಿಸಲಿದೆ. ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಕಾರ್ಯವು ಇಂದು ಪೂರ್ಣಗೊಳ್ಳಲಿದೆ. ನಿಮ್ಮ ಶ್ರಮಕ್ಕೆ ತಕ್ಕ ಬೆಲೆಯನ್ನು ಪಡೆಯಲಿದ್ದೀರಿ.
ಮೀನ : ದಾಂಪತ್ಯ ಜೀವನದಲ್ಲಿ ಕಿರಿಕಿರಿ ಉಂಟಾಗಲಿದೆ. ಸಂಗಾತಿಯ ಮೇಲೆ ಅನುಮಾನ ಪಡುವುದು ಸೂಕ್ತವಲ್ಲ. ಎಲ್ಲರೊಂದಿಗೆ ಸ್ನೇಹ ಸಂಪಾದಿಸುವಲ್ಲಿ ಯಶಸ್ವಿಯಾಗುವಿರಿ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…