ಮೇಷ : ಇಂದು ನೀವು ಹೊಸ ಅತಿಥಿಗಳನ್ನು ಭೇಟಿಯಾಗಲಿದ್ದೀರಿ. ಇದರಿಂದ ನಿಮಗೆ ಲಾಭ ಕೂಡ ಆಗಲಿದೆ. ವೃತ್ತಿರಂಗದ ಎಲ್ಲಾ ಸಮಸ್ಯೆಗಳು ಶಮನವಾಗಲಿದೆ.
ವೃಷಭ : ಮಕ್ಕಳ ಆರೋಗ್ಯದಲ್ಲಿ ಏರುಪೇರು ಉಂಟಾಗಲಿದೆ. ಸಾರ್ವಜನಿಕ ಜೀವನದಲ್ಲಿ ನಿಮಗೆ ಮನ್ನಣೆ ಸಿಗಲಿದೆ. ಕೌಟುಂಬಿಕ ಜೀವನದಲ್ಲಿ ಎಲ್ಲಾ ಮನಸ್ತಾಪಗಳು ದೂರಾಗಲಿದೆ.
ಮಿಥುನ : ಕೆಲಸದ ಒತ್ತಡದಿಂದ ಕಂಗೆಟ್ಟಿದ್ದ ನೀವು ವಿಶ್ರಾಂತಿ ಪಡೆಯಲಿದ್ದೀರಿ. ಕುಟುಂಬಸ್ಥರ ಜೊತೆ ಉತ್ತಮ ಸಮಯ ಕಳೆಯುವಿರಿ. ಇದರಿಂದ ಮಾನಸಿಕವಾಗಿ ನೆಮ್ಮದಿ ಅನುಭವಿಸಲಿದ್ದೀರಿ.
ಕಟಕ : ಸುಳ್ಳಿನ ಮಾತುಗಳು ಬಹಳ ದಿನ ಬಾಳಿಕೆ ಬರುವುದಿಲ್ಲ. ಹೀಗಾಗಿ ಸುಳ್ಳು ಹೇಳುವುದನ್ನು ನಿಲ್ಲಿಸಿ. ವಾಸ್ತವದಲ್ಲಿ ಬದುಕಲು ಆರಂಭಿಸಿ.
ಸಿಂಹ : ನಿರಂತರ ಪ್ರಯಾಣದಿಂದ ಆರೋಗ್ಯದ ಸಮಸ್ಯೆ ಎದುರಾಗಲಿದೆ. ಬೆಲ್ಲವನ್ನು ದಾನ ಮಾಡಿ. ಇದರಿಂದ ನಿಮ್ಮ ಕುಟುಂಬದಲ್ಲಿನ ಕಿರಿಕಿರಿಗೆ ಪರಿಹಾರ ಸಿಗಲಿದೆ.
ಕನ್ಯಾ : ಸಹೋದರಿಯು ನಿಮ್ಮ ಆರ್ಥಿಕ ಸಂಕಷ್ಟಕ್ಕೆ ಹೆಗಲು ನೀಡಲಿದ್ದಾರೆ. ವಾಹನ ಸವಾರಿ ಮಾಡುವಾಗ ಆದಷ್ಟು ಎಚ್ಚರಿಕೆಯಿಂದಿರಿ.
ತುಲಾ : ವೈವಾಹಿಕ ಸಂಬಂಧಕ್ಕೆಂದು ಅರಸುತ್ತಿರುವವರಿಗೆ ಇಂದು ಶುಭ ಸುದ್ದಿ ಕಾದಿದೆ. ವೃತ್ತಿ ಜೀವನದಲ್ಲಿ ನಿಮಗೆ ಯಶಸ್ಸು ಸಿಗಲಿದೆ.
ವೃಶ್ಚಿಕ : ಉದ್ಯೋಗ ಕ್ಷೇತ್ರದಲ್ಲಿ ಬದಲಾವಣೆ ಮಾಡಬೇಕೆಂದು ಹರಸಾಹಸ ಪಡುತ್ತಿದ್ದೀರಿ. ಆದರೆ ಎಷ್ಟೇ ಪ್ರಯತ್ನದ ಬಳಿಕವೂ ಅದು ಸಾಧ್ಯವಾಗುವುದಿಲ್ಲ. ಇದರಿಂದ ನೀವು ಹತಾಶರಾಗುವಿರಿ.
ಧನು : ವ್ಯಾಪಾರಿಗಳಿಗೆ ಇದು ಲಾಭದ ದಿನವಾಗಿದೆ. ವಿದೇಶಿ ಗ್ರಾಹಕರು ಇಂದು ನಿಮ್ಮ ಭವಿಷ್ಯವನ್ನೇ ಬದಲಾಯಿಸಲಿದ್ದಾರೆ. ಸುಬ್ರಹ್ಮಣ್ಯ ದೇವರನ್ನು ಪ್ರಾರ್ಥನೆ ಮಾಡಿ.
ಮಕರ : ಬಹಳ ದಿನಗಳಿಂದ ಅಂದುಕೊಂಡಿದ್ದ ಕೆಲಸವನ್ನು ಇಂದು ಸಾಧಿಸಲಿದ್ದೀರಿ. ವಿದ್ಯಾರ್ಥಿಗಳಿಗೆ ಗುರುಗಳಿಂದ ಉತ್ತಮ ಮಾರ್ಗದರ್ಶನ ಸಿಗಲಿದೆ. ತಾಳ್ಮೆ ಕಾಯ್ದುಕೊಳ್ಳಿ.
ಕುಂಭ : ನಿಮ್ಮ ಸಂಗಾತಿಗೆ ನೋವುಂಟು ಮಾಡಬೇಡಿ. ಆದಷ್ಟು ಮಾತಿನ ಮೇಲೆ ಹಿಡಿತವಿರಲಿ. ಸಂಬಂಧಿಗಳ ಜೊತೆ ವ್ಯವಹಾರ ನಡೆಸುವ ಮುನ್ನ ಆದಷ್ಟು ಜಾಗೃತೆ ವಹಿಸಿ.
ಮೀನ : ಪುತ್ರಿಗೆ ಯೋಗ್ಯ ವರಾನ್ವೇಷಣೆ ಮಾಡುವಲ್ಲಿ ಯಶಸ್ಸು ಸಾಧಿಸುವಿರಿ. ಇದರಿಂದ ನಿಮ್ಮ ಪತ್ನಿಯು ಸಂತಸಗೊಳ್ಳಲಿದ್ದಾರೆ. ವ್ಯಾಪಾರ – ವ್ಯವಹಾರಗಳಲ್ಲಿ ತಕ್ಕಮಟ್ಟಿಗಿನ ಲಾಭವಿದೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…