ಮೇಷ : ಇಂದು ನೀವು ಹೊಸ ಅತಿಥಿಗಳನ್ನು ಭೇಟಿಯಾಗಲಿದ್ದೀರಿ. ಇದರಿಂದ ನಿಮಗೆ ಲಾಭ ಕೂಡ ಆಗಲಿದೆ. ವೃತ್ತಿರಂಗದ ಎಲ್ಲಾ ಸಮಸ್ಯೆಗಳು ಶಮನವಾಗಲಿದೆ.
ವೃಷಭ : ಮಕ್ಕಳ ಆರೋಗ್ಯದಲ್ಲಿ ಏರುಪೇರು ಉಂಟಾಗಲಿದೆ. ಸಾರ್ವಜನಿಕ ಜೀವನದಲ್ಲಿ ನಿಮಗೆ ಮನ್ನಣೆ ಸಿಗಲಿದೆ. ಕೌಟುಂಬಿಕ ಜೀವನದಲ್ಲಿ ಎಲ್ಲಾ ಮನಸ್ತಾಪಗಳು ದೂರಾಗಲಿದೆ.
ಮಿಥುನ : ಕೆಲಸದ ಒತ್ತಡದಿಂದ ಕಂಗೆಟ್ಟಿದ್ದ ನೀವು ವಿಶ್ರಾಂತಿ ಪಡೆಯಲಿದ್ದೀರಿ. ಕುಟುಂಬಸ್ಥರ ಜೊತೆ ಉತ್ತಮ ಸಮಯ ಕಳೆಯುವಿರಿ. ಇದರಿಂದ ಮಾನಸಿಕವಾಗಿ ನೆಮ್ಮದಿ ಅನುಭವಿಸಲಿದ್ದೀರಿ.
ಕಟಕ : ಸುಳ್ಳಿನ ಮಾತುಗಳು ಬಹಳ ದಿನ ಬಾಳಿಕೆ ಬರುವುದಿಲ್ಲ. ಹೀಗಾಗಿ ಸುಳ್ಳು ಹೇಳುವುದನ್ನು ನಿಲ್ಲಿಸಿ. ವಾಸ್ತವದಲ್ಲಿ ಬದುಕಲು ಆರಂಭಿಸಿ.
ಸಿಂಹ : ನಿರಂತರ ಪ್ರಯಾಣದಿಂದ ಆರೋಗ್ಯದ ಸಮಸ್ಯೆ ಎದುರಾಗಲಿದೆ. ಬೆಲ್ಲವನ್ನು ದಾನ ಮಾಡಿ. ಇದರಿಂದ ನಿಮ್ಮ ಕುಟುಂಬದಲ್ಲಿನ ಕಿರಿಕಿರಿಗೆ ಪರಿಹಾರ ಸಿಗಲಿದೆ.
ಕನ್ಯಾ : ಸಹೋದರಿಯು ನಿಮ್ಮ ಆರ್ಥಿಕ ಸಂಕಷ್ಟಕ್ಕೆ ಹೆಗಲು ನೀಡಲಿದ್ದಾರೆ. ವಾಹನ ಸವಾರಿ ಮಾಡುವಾಗ ಆದಷ್ಟು ಎಚ್ಚರಿಕೆಯಿಂದಿರಿ.
ತುಲಾ : ವೈವಾಹಿಕ ಸಂಬಂಧಕ್ಕೆಂದು ಅರಸುತ್ತಿರುವವರಿಗೆ ಇಂದು ಶುಭ ಸುದ್ದಿ ಕಾದಿದೆ. ವೃತ್ತಿ ಜೀವನದಲ್ಲಿ ನಿಮಗೆ ಯಶಸ್ಸು ಸಿಗಲಿದೆ.
ವೃಶ್ಚಿಕ : ಉದ್ಯೋಗ ಕ್ಷೇತ್ರದಲ್ಲಿ ಬದಲಾವಣೆ ಮಾಡಬೇಕೆಂದು ಹರಸಾಹಸ ಪಡುತ್ತಿದ್ದೀರಿ. ಆದರೆ ಎಷ್ಟೇ ಪ್ರಯತ್ನದ ಬಳಿಕವೂ ಅದು ಸಾಧ್ಯವಾಗುವುದಿಲ್ಲ. ಇದರಿಂದ ನೀವು ಹತಾಶರಾಗುವಿರಿ.
ಧನು : ವ್ಯಾಪಾರಿಗಳಿಗೆ ಇದು ಲಾಭದ ದಿನವಾಗಿದೆ. ವಿದೇಶಿ ಗ್ರಾಹಕರು ಇಂದು ನಿಮ್ಮ ಭವಿಷ್ಯವನ್ನೇ ಬದಲಾಯಿಸಲಿದ್ದಾರೆ. ಸುಬ್ರಹ್ಮಣ್ಯ ದೇವರನ್ನು ಪ್ರಾರ್ಥನೆ ಮಾಡಿ.
ಮಕರ : ಬಹಳ ದಿನಗಳಿಂದ ಅಂದುಕೊಂಡಿದ್ದ ಕೆಲಸವನ್ನು ಇಂದು ಸಾಧಿಸಲಿದ್ದೀರಿ. ವಿದ್ಯಾರ್ಥಿಗಳಿಗೆ ಗುರುಗಳಿಂದ ಉತ್ತಮ ಮಾರ್ಗದರ್ಶನ ಸಿಗಲಿದೆ. ತಾಳ್ಮೆ ಕಾಯ್ದುಕೊಳ್ಳಿ.
ಕುಂಭ : ನಿಮ್ಮ ಸಂಗಾತಿಗೆ ನೋವುಂಟು ಮಾಡಬೇಡಿ. ಆದಷ್ಟು ಮಾತಿನ ಮೇಲೆ ಹಿಡಿತವಿರಲಿ. ಸಂಬಂಧಿಗಳ ಜೊತೆ ವ್ಯವಹಾರ ನಡೆಸುವ ಮುನ್ನ ಆದಷ್ಟು ಜಾಗೃತೆ ವಹಿಸಿ.
ಮೀನ : ಪುತ್ರಿಗೆ ಯೋಗ್ಯ ವರಾನ್ವೇಷಣೆ ಮಾಡುವಲ್ಲಿ ಯಶಸ್ಸು ಸಾಧಿಸುವಿರಿ. ಇದರಿಂದ ನಿಮ್ಮ ಪತ್ನಿಯು ಸಂತಸಗೊಳ್ಳಲಿದ್ದಾರೆ. ವ್ಯಾಪಾರ – ವ್ಯವಹಾರಗಳಲ್ಲಿ ತಕ್ಕಮಟ್ಟಿಗಿನ ಲಾಭವಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…