ಮೇಷ : ಇಂದು ನೀವು ಹೊಸ ಅತಿಥಿಗಳನ್ನು ಭೇಟಿಯಾಗಲಿದ್ದೀರಿ. ಇದರಿಂದ ನಿಮಗೆ ಲಾಭ ಕೂಡ ಆಗಲಿದೆ. ವೃತ್ತಿರಂಗದ ಎಲ್ಲಾ ಸಮಸ್ಯೆಗಳು ಶಮನವಾಗಲಿದೆ.
ವೃಷಭ : ಮಕ್ಕಳ ಆರೋಗ್ಯದಲ್ಲಿ ಏರುಪೇರು ಉಂಟಾಗಲಿದೆ. ಸಾರ್ವಜನಿಕ ಜೀವನದಲ್ಲಿ ನಿಮಗೆ ಮನ್ನಣೆ ಸಿಗಲಿದೆ. ಕೌಟುಂಬಿಕ ಜೀವನದಲ್ಲಿ ಎಲ್ಲಾ ಮನಸ್ತಾಪಗಳು ದೂರಾಗಲಿದೆ.
ಮಿಥುನ : ಕೆಲಸದ ಒತ್ತಡದಿಂದ ಕಂಗೆಟ್ಟಿದ್ದ ನೀವು ವಿಶ್ರಾಂತಿ ಪಡೆಯಲಿದ್ದೀರಿ. ಕುಟುಂಬಸ್ಥರ ಜೊತೆ ಉತ್ತಮ ಸಮಯ ಕಳೆಯುವಿರಿ. ಇದರಿಂದ ಮಾನಸಿಕವಾಗಿ ನೆಮ್ಮದಿ ಅನುಭವಿಸಲಿದ್ದೀರಿ.
ಕಟಕ : ಸುಳ್ಳಿನ ಮಾತುಗಳು ಬಹಳ ದಿನ ಬಾಳಿಕೆ ಬರುವುದಿಲ್ಲ. ಹೀಗಾಗಿ ಸುಳ್ಳು ಹೇಳುವುದನ್ನು ನಿಲ್ಲಿಸಿ. ವಾಸ್ತವದಲ್ಲಿ ಬದುಕಲು ಆರಂಭಿಸಿ.
ಸಿಂಹ : ನಿರಂತರ ಪ್ರಯಾಣದಿಂದ ಆರೋಗ್ಯದ ಸಮಸ್ಯೆ ಎದುರಾಗಲಿದೆ. ಬೆಲ್ಲವನ್ನು ದಾನ ಮಾಡಿ. ಇದರಿಂದ ನಿಮ್ಮ ಕುಟುಂಬದಲ್ಲಿನ ಕಿರಿಕಿರಿಗೆ ಪರಿಹಾರ ಸಿಗಲಿದೆ.
ಕನ್ಯಾ : ಸಹೋದರಿಯು ನಿಮ್ಮ ಆರ್ಥಿಕ ಸಂಕಷ್ಟಕ್ಕೆ ಹೆಗಲು ನೀಡಲಿದ್ದಾರೆ. ವಾಹನ ಸವಾರಿ ಮಾಡುವಾಗ ಆದಷ್ಟು ಎಚ್ಚರಿಕೆಯಿಂದಿರಿ.
ತುಲಾ : ವೈವಾಹಿಕ ಸಂಬಂಧಕ್ಕೆಂದು ಅರಸುತ್ತಿರುವವರಿಗೆ ಇಂದು ಶುಭ ಸುದ್ದಿ ಕಾದಿದೆ. ವೃತ್ತಿ ಜೀವನದಲ್ಲಿ ನಿಮಗೆ ಯಶಸ್ಸು ಸಿಗಲಿದೆ.
ವೃಶ್ಚಿಕ : ಉದ್ಯೋಗ ಕ್ಷೇತ್ರದಲ್ಲಿ ಬದಲಾವಣೆ ಮಾಡಬೇಕೆಂದು ಹರಸಾಹಸ ಪಡುತ್ತಿದ್ದೀರಿ. ಆದರೆ ಎಷ್ಟೇ ಪ್ರಯತ್ನದ ಬಳಿಕವೂ ಅದು ಸಾಧ್ಯವಾಗುವುದಿಲ್ಲ. ಇದರಿಂದ ನೀವು ಹತಾಶರಾಗುವಿರಿ.
ಧನು : ವ್ಯಾಪಾರಿಗಳಿಗೆ ಇದು ಲಾಭದ ದಿನವಾಗಿದೆ. ವಿದೇಶಿ ಗ್ರಾಹಕರು ಇಂದು ನಿಮ್ಮ ಭವಿಷ್ಯವನ್ನೇ ಬದಲಾಯಿಸಲಿದ್ದಾರೆ. ಸುಬ್ರಹ್ಮಣ್ಯ ದೇವರನ್ನು ಪ್ರಾರ್ಥನೆ ಮಾಡಿ.
ಮಕರ : ಬಹಳ ದಿನಗಳಿಂದ ಅಂದುಕೊಂಡಿದ್ದ ಕೆಲಸವನ್ನು ಇಂದು ಸಾಧಿಸಲಿದ್ದೀರಿ. ವಿದ್ಯಾರ್ಥಿಗಳಿಗೆ ಗುರುಗಳಿಂದ ಉತ್ತಮ ಮಾರ್ಗದರ್ಶನ ಸಿಗಲಿದೆ. ತಾಳ್ಮೆ ಕಾಯ್ದುಕೊಳ್ಳಿ.
ಕುಂಭ : ನಿಮ್ಮ ಸಂಗಾತಿಗೆ ನೋವುಂಟು ಮಾಡಬೇಡಿ. ಆದಷ್ಟು ಮಾತಿನ ಮೇಲೆ ಹಿಡಿತವಿರಲಿ. ಸಂಬಂಧಿಗಳ ಜೊತೆ ವ್ಯವಹಾರ ನಡೆಸುವ ಮುನ್ನ ಆದಷ್ಟು ಜಾಗೃತೆ ವಹಿಸಿ.
ಮೀನ : ಪುತ್ರಿಗೆ ಯೋಗ್ಯ ವರಾನ್ವೇಷಣೆ ಮಾಡುವಲ್ಲಿ ಯಶಸ್ಸು ಸಾಧಿಸುವಿರಿ. ಇದರಿಂದ ನಿಮ್ಮ ಪತ್ನಿಯು ಸಂತಸಗೊಳ್ಳಲಿದ್ದಾರೆ. ವ್ಯಾಪಾರ – ವ್ಯವಹಾರಗಳಲ್ಲಿ ತಕ್ಕಮಟ್ಟಿಗಿನ ಲಾಭವಿದೆ.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…