ಮೇಷ : ವಿದ್ಯಾರ್ಥಿಗಳ ಪ್ರಯತ್ನಗಳು ಅವರ ಕೈ ಹಿಡಿಯಲಿದೆ. ಎಂತಹ ಸಂದಿಗ್ದ ಪರಿಸ್ಥಿತಿಯಲ್ಲಿಯೂ ನಿಮ್ಮ ಸಂಸ್ಕಾರವನ್ನು ಮರೆಯಬೇಡಿ.
ವೃಷಭ : ಸಾರ್ವಜನಿಕ ವಲಯದಲ್ಲಿ ನಿಮ್ಮ ಗೌರವ ಹೆಚ್ಚಾಗಲಿದೆ. ಉದ್ಯಮದಲ್ಲಿ ನಿಮಗೆ ಆತ್ಮವಿಶ್ವಾಸ ಹೆಚ್ಚಲಿದೆ. ಭೂ ವಾಜ್ಯಗಳು ಸರಿ ಹೋಗಲಿವೆ. ನೀವು ಪಟ್ಟಿರುವ ಕನಸು ಈಡೇರುವ ಕಾಲ ಸನ್ನಿಹಿತವಾಗಲಿದೆ.
ಮಿಥುನ : ಉದ್ಯಮ ವಿಸ್ತರಣೆ ಮಾಡುವ ಬಗ್ಗೆ ಪೋಷಕರೊಂದಿಗೆ ಚರ್ಚೆ ನಡೆಸುವಿರಿ. ಮನೆಯಲ್ಲಿ ನಿಮ್ಮ ಮದುವೆ ವಿಚಾರದ ಪ್ರಸ್ತಾಪ ಕೇಳಿ ಬರಲಿದೆ.
ಕಟಕ : ಇಂದು ನೀವು ಪ್ರಭಾವಿ ವ್ಯಕ್ತಿಗಳ ಸಂಪರ್ಕವನ್ನು ಸಾಧಿಸಲಿದ್ದೀರಿ. ಈ ವ್ಯಕ್ತಿಯು ನಿಮ್ಮ ಅನೇಕ ಸಮಸ್ಯೆಗಳಿಗೆ ಪರಿಹಾರ ಹುಡುಕಿಕೊಡಲಿದ್ದಾರೆ. ವೃತ್ತಿ ಜೀವನದಲ್ಲಿ ಯಶಸ್ಸು ಕಾದಿದೆ.
ಸಿಂಹ : ಉದ್ಯಮದಲ್ಲಿ ನಿಮಗೆ ಉತ್ತಮ ಫಲಿತಾಂಶ ಸಿಗಲಿದೆ. ಸಂಬಳಕ್ಕೆ ಕೆಲಸ ಮಾಡುವವರು ಇಂದು ಹೆಚ್ಚಿನ ಒತ್ತಡ ಎದುರಿಸಬೇಕಾದೀತು.
ಕನ್ಯಾ : ಯಾರೋ ತಪ್ಪು ಮಾಡ್ತಿದ್ದಾರೆ ಎಂದು ನೀವೂ ಮಾಡಿದರೆ ನಿಮಗೂ ಅವರಿಗೂ ವ್ಯತ್ಯಾಸ ಇರೋದಿಲ್ಲ. ನಿಮ್ಮ ಆತ್ಮಸಾಕ್ಷಿಗೆ ಧಕ್ಕೆ ಉಂಟಾಗುವಂತಹ ಘಟನೆಗಳು ಕಚೇರಿಯಲ್ಲಿ ನಡೆಯಲಿದೆ. ಆರೋಗ್ಯದ ಬಗ್ಗೆ ಕಾಳಜಿ ಇರಲಿ.
ತುಲಾ : ವೈದ್ಯಕೀಯ ರಂಗದಲ್ಲಿ ಇರುವವರು ಇಂದು ಮೆಚ್ಚುಗೆ ಗಳಿಸಲಿದ್ದಾರೆ. ಗೆಳೆಯರ ಗುಂಪಿನಲ್ಲಿ ನಿಮಗೆ ಡಿಮ್ಯಾಂಡ್ ಹೆಚ್ಚಲಿದೆ. ಉತ್ತಮ ಜನರ ಸಂಪರ್ಕ ಸಾಧಿಸಲಿದ್ದೀರಿ.
ವೃಶ್ಚಿಕ : ಏನೋ ಮಾಡಲು ಹೋಗಿ ಇರೋದನ್ನೂ ಕಳೆದುಕೊಳ್ಳಬೇಡಿ. ಮೂಗಿನ ನೇರಕ್ಕೆ ಯೋಚನೆ ಮಾಡೋದನ್ನು ನಿಲ್ಲಿಸಿ. ಇದರಿಂದ ನಿಮಗೂ ನಷ್ಟವಿದೆ.
ಧನು : ಸಂಗಾತಿಯ ನಿರ್ಲಕ್ಷ್ಯ ಬುದ್ಧಿಯು ನಿಮಗೆ ಹತಾಶೆ ಮೂಡುವಂತೆ ಮಾಡಲಿದೆ. ಇದು ನಿಮ್ಮ ದಾಂಪತ್ಯ ಜೀವನದಲ್ಲಿ ಬಿರುಕಿಗೆ ಕಾರಣವಾಗಬಹುದು.
ಮಕರ : ನಿಮ್ಮ ಇಷ್ಟಾರ್ಥಗಳು ಒಂದೊಂದಾಗಿಯೇ ನೆರವೇರಲಿದೆ. ವ್ಯಾಪಾರಿಗಳಿಗೆ ಇಂದು ಲಾಭವಿದೆ. ವಿದೇಶಕ್ಕೆ ಹೋಗಬೇಕು ಎಂಬ ನಿಮ್ಮ ಕನಸು ನನಸಾಗುವ ದಿನಗಳು ಹೆಚ್ಚು ದೂರವಿಲ್ಲ.
ಕುಂಭ : ಕಚೇರಿ ಕೆಲಸಕ್ಕೆಂದು ವಿದೇಶ ಪ್ರಯಾಣ ಕೈಗೊಂಡ ನೀವು ಅತಿಯಾಗಿ ದಣಿಯಲಿದ್ದೀರಿ. ಪ್ರಭಾವಿ ವ್ಯಕ್ತಿಗಳನ್ನು ಭೇಟಿ ಮಾಡಲಿದ್ದೀರಿ.
ಮೀನ : ಅಧಿಕಾರಿಗಳೊಂದಿಗೆ ಯಾವುದೇ ಕಾರಣಕ್ಕೂ ಘರ್ಷಣೆಗೆ ಇಳಿಯಬೇಡಿ. ಹಾಗಾದಲ್ಲಿ ಮಾತ್ರ ನಿಮಗೆ ಪ್ರಗತಿ ಇದೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…