Categories: ಉಡುಪಿ

ಇಂದಿನ ಫಲಿತಾಂಶ ಮೋದಿಗೆ ಸೋಲಿನ ಸೂಚನೆ ಎಂದ ಖರ್ಗೆ,

ಬೆಂಗಳೂರು: ಬಳ್ಳಾರಿ ಲೋಕಸಭಾ ಉಪ ಚುನಾವಣೆಯಲ್ಲಿ ಬಿಜೆಪಿಗೆ ಹೀನಾಯ ಸೋಲಾಗಿರುವುದು ಪ್ರಧಾನಿ ನರೇಂದ್ರ ಮೋದಿಯವರ ಆಡಳಿತದಿಂದ ಜನ ಎಷ್ಟು ಬೇಸತ್ತಿದ್ದಾರೆ ಎನ್ನುವ ಸೂಚನೆ ಎಂದು ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಉಗ್ರಪ್ಪ ಜಯವನ್ನು ಬಣ್ಣಿಸಿದ್ದಾರೆ.

ಉಪ ಚುನಾವಣಾ ಫಲಿತಾಂಶಗಳ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿನ ಉಪ ಚುನಾವಣೆಗಳು ಪ್ರಧಾನಿ ಮೋದಿ ಆಡಳಿತದ ವಿರುದ್ಧದ ಸೂಚನೆಯಾಗಿದೆ. ಬಳ್ಳಾರಿಯಲ್ಲಿ ಬಿಜೆಪಿ ಹೀನಾಯವಾಗಿ ಸೋಲನ್ನು ಅನುಭವಿಸಿದೆ. ಕಾಂಗ್ರೆಸ್ಸಿನ ಅಭ್ಯರ್ಥಿ ವಿ.ಎಸ್.ಉಗ್ರಪ್ಪನವರು ಭಾರೀ ಅಂತರದಿಂದ ಗೆದ್ದಿದ್ದಾರೆ. ಈ ಬಗ್ಗೆ ನಮಗೆ ಯಾವುದೇ ಅಚ್ಚರಿ ಇಲ್ಲ. ಏಕೆಂದರೆ ನಮಗೆ ಮೊದಲೇ ನಿರೀಕ್ಷೆ ಇತ್ತು ಹಾಗೆ ಆಗಿದೆ ಎಂದು ಹೇಳಿದ್ರು.

ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರು ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರವನ್ನು ನವೆಂಬರ್ 6ಕ್ಕೆ ಅಸ್ಥಿರಗೊಳಿಸುತ್ತೇವೆ ಎಂದು ಮುಹೂರ್ತ ಇಟ್ಟಿದ್ದರು. ಆದರೆ ಅವರಿಗೆ ವಾಸ್ತವದ ಸ್ಥಿತಿ ಗೊತ್ತಿಲ್ಲ. ಅದಕ್ಕೆ ಆ ರೀತಿ ಮಾತನಾಡುತ್ತಿದ್ದರು. ಅವರಿಗೆ ಮಾತನಾಡುವ ಚಟ ಹೆಚ್ಚಾಗಿದೆ ಎಂದು ವ್ಯಂಗ್ಯವಾಡಿದರು.

ಶಿವಮೊಗ್ಗದಲ್ಲೂ ಸಮ್ಮಿಶ್ರ ಸರ್ಕಾರದ ಅಭ್ಯರ್ಥಿ ಗೆಲ್ಲುತ್ತಾರೆಂದು ವಿಶ್ವಾಸ ಇತ್ತು. ಆದರೂ ಸಹ ಬಿಜೆಪಿಯವರು ಬಹಳ ಅಂತರದಿಂದ ಗೆಲುವು ಸಾಧಿಸಿಲ್ಲ. ರಾಜ್ಯದಲ್ಲಿನ ಉಪ ಚುನಾವಣೆಗಳು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿಯವರ ಸೋಲಿಗೆ ಸೂಚನೆ. ಅಲ್ಲದೇ ಕಾಂಗ್ರೆಸ್ ಹಾಗೂ ಜೆಡಿಎಸ್ ಸರ್ಕಾರ ಗೆಲುವು ಸಾಧಿಸುತ್ತದೆ ಎನ್ನುವುದನ್ನು ಇದು ತೋರಿಸಿದೆ ಎಂದು ತಿಳಿಸಿದರು.

 

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಶ್ವಿನ್ ಕೋಟ್ಯಾನ್ ಖಂಡನೆ – vishwanews24

ಉಡುಪಿ: ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಶ್ವಿನ್ ಕೋಟ್ಯಾನ್ ಖಂಡನೆ ಉಡುಪಿ: ಇತ್ತೀಚೆಗೆ ನ್ಯಾಯಯುತವಾದ…

31 minutes ago

ಐಫೋನ್ ಬದಲು ಆಯಿಲ್ ಕಳುಹಿಸಿದ್ದ ಫ್ಲಿಪ್​ಕಾರ್ಟ್​ : 1.8 ಲಕ್ಷ ರೂ. ಪರಿಹಾರಕ್ಕೆ ಮುಂಬೈನ ಗ್ರಾಹಕ ನ್ಯಾಯಾಲಯ ಆದೇಶ – vishwanews24

ಐಫೋನ್ ಬದಲು ಆಯಿಲ್ ಕಳುಹಿಸಿದ್ದ ಫ್ಲಿಪ್​ಕಾರ್ಟ್​ : ಭಾರಿ ದಂಡ ವಿಧಿಸಿದ ಮುಂಬೈನ ಗ್ರಾಹಕ ನ್ಯಾಯಾಲಯ ಮುಂಬೈ: ಆನ್‌ಲೈನ್‌ನಲ್ಲಿ ಲಕ್ಷಾಂತರ…

38 minutes ago

ಕೇಂದ್ರದ ಭರವಸೆಯ ಬಳಿಕ  ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯ – vishwanews24

ಕೇಂದ್ರದ ಭರವಸೆಯ ಬಳಿಕ  ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯ ನವದೆಹಲಿ: ಹೋರಾಟಗಾರ ಹಾಗೂ ಲಡಾಖ್‌ನ ಸಾಮಾಜಿಕ ಕಾರ್ಯಕರ್ತ…

1 hour ago

ಜು.26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ‘ಪರ್ಬದ ಲೇಸ್’ ಕಾರ್ಯಕ್ರಮ – vishwanews24

ಜು.26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ‘ಪರ್ಬದ ಲೇಸ್’ ಕಾರ್ಯಕ್ರಮ ಬೆಂಗಳೂರು: ತುಳುವೆರೆ ಚಾವಡಿಯ 28ನೇ ವರ್ಷದ "ಪರ್ಬದ…

1 hour ago

ಬೆಳ್ತಂಗಡಿ: ಚಾರ್ಮಾಡಿ ಘಾಟ್ ನಲ್ಲಿ ಚಿರತೆ ಪ್ರತ್ಯಕ್ಷ ; ವಾಹನ ಸವಾರರಲ್ಲಿ ಆತಂಕ – vishwanews24

ಬೆಳ್ತಂಗಡಿ: ಚಾರ್ಮಾಡಿ ಘಾಟ್ ನಲ್ಲಿ ಚಿರತೆ ಪ್ರತ್ಯಕ್ಷ ; ವಾಹನ ಸವಾರರಲ್ಲಿ ಆತಂಕ ಬೆಳ್ತಂಗಡಿ,: ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು…

2 hours ago

ಸುಳ್ಯ: ಮನೆ ಬಿಟ್ಟು ತೆರಳಿದ್ದ ಅಪ್ರಾಪ್ತ ಬಾಲಕಿ ಪತ್ತೆ; ಯುವಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲು – vishwanews24

ಸುಳ್ಯ : ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ: ಯುವಕನ ಬಂಧನ ಸುಳ್ಯ: ಮನೆ ಬಿಟ್ಟು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು…

2 hours ago