ಬೆಂಗಳೂರು : 2017 ರಲ್ಲಿ ಸಿದ್ದರಾಮಯ್ಯ ಸರ್ಕಾರ ಜಾರಿಗೆ ತಂದಿದ್ದ ಇಂದಿರಾ ಕ್ಯಾಂಟಿನ್ ಹೆಸರಿಗೆ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅನ್ನಪೂರ್ಣ ಕ್ಯಾಂಟೀನ್ ಎಂದು ಮರುನಾಮಕರಣ ಮಾಡಲು ನಿರ್ಧರಿಸಿದೆ .
ಯಡಿಯೂರಪ್ಪ ಅವರು ಅಧಿಕಾರಕ್ಕೇರಿದ ಮೊದಲಿಗೆ ತೆಗೆದುಕೊಳ್ಳಲಾಗಿರುವ ಪ್ರಮುಖ ನಿರ್ಧಾರಗಳಲ್ಲಿ ಇಂದಿರಾ ಕ್ಯಾಂಟೀನ್ ಹೆಸರನ್ನು ಬದಲಾವಣೆ ಮಾಡುವುದು ಸಹ ಸೇರಿದೆ. ಹೆಸರು ಬದಲಾವಣೆಯ ಬಗ್ಗೆ ಬಜೆಪಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಸಾರ್ವಜನಿಕ ಆಡಳಿತ ಇಲಾಖೆಯೊಂದಿಗೆ ಚರ್ಚಿಸಿದೆ.ಸರ್ಕಾರವು ಲಿಖಿತ ಆದೇಶಗಳನ್ನು ನೀಡಿದ ನಂತರ ಹೆಸರನ್ನು ಬದಲಾಯಿಸುವ ಪ್ರಕ್ರಿಯೆ ಚುರುಕಾಗಲಿದೆ ಎಂದು ಹೇಳಲಾಗಿದೆ.
ಯಾವುದೇ ರಾಜಕೀಯ ನಾಯಕ, ದಿವಂಗತ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹೆಸರನ್ನು ಕ್ಯಾಂಟೀನ್ ಗೆ ಇಡುವುದಿಲ್ಲ ಎಂದು ಪಕ್ಷದ ಹಿರಿಯ ನಾಯಕರು ಹೇಳಿದ್ದಾರೆ. “ಇಂದಿರಾ ಗಾಂಧಿ ಪ್ರಧಾನಿಯಾಗಿದ್ದರೂ, ಅವರ ಹೆಸರನ್ನು ಬಳಸುವುದು ಕಾಂಗ್ರೆಸ್ ರಾಜಕೀಯ ಗಿಮಿಕ್. ಭಾರತದ ಮೊದಲ ಪ್ರಧಾನ ಮಂತ್ರಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಹೆಸರಿನಲ್ಲಿ ಇದು ಅನೇಕ ಯೋಜನೆಗಳಿವೆ” ಅವರು ಹೇಳಿದ್ದಾರೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…