ಮಂಡ್ಯ : “ಇಂದಿರಾ ಕ್ಯಾಂಟೀನ್ ಹೆಸರನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಬದಲಾಯಿಸಿದರೆ ಗಂಟಲಲ್ಲಿ ಅನ್ನ ಇಳಿಯುವುದಿಲ್ಲವೇ?. ಇಂದಿರಾ ಕ್ಯಾಂಟೀನ್ ಬದಲಾಯಿಸುವುದು ಬಿಜೆಪಿಯ ಪ್ರಣಾಳಿಕೆ” ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಇಂದಿರಾ ಗಾಂಧಿ ಅವರ ಭಾವಚಿತ್ರ ಇರುವುದರಿಂದ ಅದನ್ನು ಬದಲಾಯಿಸಿ ಅನ್ನಪೂರ್ಣೇಶ್ವರಿ ಎಂದು ನಾಮಕರಣ ಮಾಡುವ ಕುರಿತು ಮಾತನಾಡಿದ್ದೇನೆ. ಹೆಸರು ಬದಲಾವಣೆ ಆದರೂ ಕೂಡಾ ಬಡವರಿಗೆ ಅನ್ನ ನೀಡುವ ಉದ್ದೇಶ ಮಾತ್ರ ಮುಂದುವರಿಯುತ್ತದೆ. ಈ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು” ಎಂದಿದ್ದಾರೆ.
“ಜವಹರ್ಲಾಲ್ ನೆಹರೂ, ಇಂದಿರಾ ಗಾಂಧಿ ಅವರು ತಮಗೆ ತಾವೇ ಭಾರತ ರತ್ನ ಕೊಟ್ಟುಕೊಂಡಿದ್ದಾರೆ. ಡಾ.ಬಿ.ಆರ್ ಅಂಬೇಡ್ಕರ್ ಅವರಿಗೆ ಭಾರತ ರತ್ನ ನೀಡಲು 1989- 90ರ ತನಕ ಕಾಯಬೇಕಾಯಿತು. ನನ್ನ ಬೆಂಬಲದೊಂದಿಗೆ ರಚನೆಯಾಗಿದ್ದ ವಿ.ಪಿ ಸಿಂಗ್ ಸರ್ಕಾರದಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ ಪ್ರಸ್ತಾವದ ಮೇರೆಗೆ ಅಂಬೇಡ್ಕರ್ ಅವರಿಗೆ ಭಾರತರತ್ನ ನೀಡಲಾಯಿತು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು ಮಲ್ಪೆ: ಕಳೆದ ಎರಡು ದಿನಗಳಿಂದ ಆಳಸಮುದ್ರದಲ್ಲಿ ಭಾರೀ…
ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…