Featured

ಇಂದಿರಾ ಕ್ಯಾಂಟೀನ್ ನನ್ನ ಬ್ಯುಸಿನೆಸ್, ಇದು ನನಗೆ ಆಗಿರುವ ವಂಚನೆ’ : ಉದ್ಯಮಿ ಗೋವಿಂದ ಬಾಬು ಪೂಜಾರಿ  – Vishwanews24

ಇಂದಿರಾ ಕ್ಯಾಂಟೀನ್ಗು ಇವರಿಗೂ ಯಾವುದೇ ರೀತಿಯಾದ  ಸಂಬಂಧವಿಲ್ಲ : ಉದ್ಯಮಿ ಗೋವಿಂದ ಬಾಬು ಪೂಜಾರಿ

ಬೆಂಗಳೂರು : ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ಹೇಳಿ ವಂಚನೆ ಪ್ರಕರಣದಲ್ಲಿ ಸಿಸಿಬಿ ಪೊಲೀಸರ ವಶದಲ್ಲಿರುವ ಚೈತ್ರ ಕುಂದಾಪುರ ಇಂದು ಬೆಳಿಗ್ಗೆ ಇದು ಇಂದಿರಾ ಕ್ಯಾಂಟೀನ್ ಬಿಲ್ ಪೆಂಡಿಂಗ್ ಇದೇ ಅದಕ್ಕೋಸ್ಕರ ಈ ಷಡ್ಯಂತರ ಮಾಡಿದ್ದಾರೆ ಎಂದು ಆರೋಪಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಗೋವಿಂದ ಬಾಬು ಪೂಜಾರಿಯವರು,ಇಂದಿರಾ ಕ್ಯಾಂಟೀನ್ಗು ಇವರಿಗೂ ಯಾವುದೇ ರೀತಿಯಾದ ಸಂಬಂಧವಿಲ್ಲ. ಅದು ನನ್ನ ಬಿಜಿನೆಸ್ ಇದು ನನಗೆ ಆಗಿರುವ ವಂಚನೆ ಎಂದು ಬೆಂಗಳೂರಿನ ಸಿಸಿಬಿ ಕಚೇರಿ ಬಳಿ ಉದ್ಯಮಿ ಗೋವಿಂದಬಾಬು ಪೂಜಾರಿ ಹೇಳಿಕೆ ನೀಡಿದರು.

ಸಿಸಿಬಿ ಅಧಿಕಾರಿಗಳು ಕರೆದಿದ್ದಕ್ಕೆ ವಿಚಾರಣೆಗೆ ಆಗಮಿಸಿದ್ದೇನೆ. ದೂರಿನಲ್ಲಿ ಯಾರೆಲ್ಲಾ ಇದ್ದಾರೋ ಅವರನ್ನೆಲ್ಲ ಭೇಟಿಯಾಗಿದ್ದೇನೆ. ಸಿಸಿಬಿ ಅಧಿಕಾರಿಗಳ ವಿಚಾರಣೆ ಮುಗಿಸಿಕೊಂಡು ಮತ್ತೆ ಮಾತನಾಡುತ್ತೇನೆ ಎಂದು ವಿಚಾರಣೆಗೆ ಮುನ್ನ ಉದ್ಯಮಿ ಗೋವಿಂದ ಪೂಜಾರಿ ಹೇಳಿಕೆ ನೀಡಿದರು.

ಮತ್ತೆ ಸಿಸಿಬಿ ಕಚೇರಿಗೆ ಕರೆತಂದ ಅಧಿಕಾರಿಗಳು

ಉದ್ಯಮಿ ಒಬ್ಬರಿಗೆ ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ಸುಮಾರು ಐದು ಕೋಟಿಗೂ ಹೆಚ್ಚು ವಂಚನೆ ಮಾಡಿರೋ ಪ್ರಕರಣದಲ್ಲಿ ಹಿಂದೂ ಸಂಘಟನೆಯ ಪ್ರಮುಖ ನಾಯಕಿ ಚೈತ್ರ ಕುಂದಾಪುರನ್ನು ಇಂದು ವೈದ್ಯಕೀಯ ತಪಾಸಣೆಗೆಂದು ವಿಕ್ಟೋರಿಯಾ ಆಸ್ಪತ್ರೆಗೆ ಸಿಸಿಬಿ ಅಧಿಕಾರಿಗಳು ಕರೆದುಕೊಂಡು ಹೋಗಿದ್ದರು.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚೈತ್ರಾಗೆ ವೈದ್ಯಕೀಯ ತಪಾಸಣೆ ಅಂತ್ಯಗೊಂಡಿದ್ದು ಮತ್ತೆ ಸಿಸಿಬಿ ಕಚೇರಿಗೆ ಚೈತ್ರಳನ್ನು ಸಿಸಿಬಿ ಪೊಲೀಸರು ಕರೆತಂದಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಸಿಸಿಬಿ ಕಚೇರಿ ಇದ್ದು ತಪಾಸಣೆ ನಂತರ ಪುನಹ ಕರೆ ತಂದಿದ್ದಾರೆ.

Vishwa News 24

Recent Posts

ಜು.26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ‘ಪರ್ಬದ ಲೇಸ್’ ಕಾರ್ಯಕ್ರಮ – vishwanews24

ಜು.26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ‘ಪರ್ಬದ ಲೇಸ್’ ಕಾರ್ಯಕ್ರಮ ಬೆಂಗಳೂರು: ತುಳುವೆರೆ ಚಾವಡಿಯ 28ನೇ ವರ್ಷದ "ಪರ್ಬದ…

8 minutes ago

ಬೆಳ್ತಂಗಡಿ: ಚಾರ್ಮಾಡಿ ಘಾಟ್ ನಲ್ಲಿ ಚಿರತೆ ಪ್ರತ್ಯಕ್ಷ ; ವಾಹನ ಸವಾರರಲ್ಲಿ ಆತಂಕ – vishwanews24

ಬೆಳ್ತಂಗಡಿ: ಚಾರ್ಮಾಡಿ ಘಾಟ್ ನಲ್ಲಿ ಚಿರತೆ ಪ್ರತ್ಯಕ್ಷ ; ವಾಹನ ಸವಾರರಲ್ಲಿ ಆತಂಕ ಬೆಳ್ತಂಗಡಿ,: ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು…

14 minutes ago

ಸುಳ್ಯ: ಮನೆ ಬಿಟ್ಟು ತೆರಳಿದ್ದ ಅಪ್ರಾಪ್ತ ಬಾಲಕಿ ಪತ್ತೆ; ಯುವಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲು – vishwanews24

ಸುಳ್ಯ : ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ: ಯುವಕನ ಬಂಧನ ಸುಳ್ಯ: ಮನೆ ಬಿಟ್ಟು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು…

35 minutes ago

ಅತಿಥಿ ಶಿಕ್ಷಕರ ಮಾಸಿಕ ವೇತನ ₹25,000ಕ್ಕೆ ಹೆಚ್ಚಿಸಿ, ಸೇವಾ ಭದ್ರತೆ ಕಲ್ಪಿಸಿ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ – vishwanews24

ಅತಿಥಿ ಶಿಕ್ಷಕರ ಮಾಸಿಕ ವೇತನ ₹25,000ಕ್ಕೆ ಹೆಚ್ಚಿಸಿ, ಸೇವಾ ಭದ್ರತೆ ಕಲ್ಪಿಸಿ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ…

44 minutes ago

ಶಿರ್ವ  : ಮಸೀದಿ ಬಳಿಯ ಗುಂಡಿಯನ್ನು ಮುಚ್ಚಿ ಯುವಕರಿಂದ ಸಮಾಜಸೇವೆ – vishwanews24

ಶಿರ್ವ  : ಮಸೀದಿ ಬಳಿಯ ಗುಂಡಿಯನ್ನು ಸ್ವಯಂಪ್ರೇರಿತರಾಗಿ ಮುಚ್ಚಿ ಯುವಕರಿಂದ ಸಮಾಜಸೇವೆ ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಡಾನ್ ಬಾಸ್ಕೋ–…

54 minutes ago

ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ದೇಶದ ಶತ್ರುಗಳಂತೆ ನೋಡುತ್ತಿದೆ ಮೋದಿ ಸರ್ಕಾರ: ಸೋನಿಯಾ ಗಾಂಧಿ ತೀವ್ರ ವಾಗ್ದಾಳಿ – vishwanews24

ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ದೇಶದ ಶತ್ರುಗಳಂತೆ ನೋಡುತ್ತಿದೆ ಮೋದಿ ಸರ್ಕಾರ: ಸೋನಿಯಾ ತೀವ್ರ ವಾಗ್ದಾಳಿ ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ…

1 hour ago