ಇಂದಿರಾ ಕ್ಯಾಂಟೀನ್ ನಲ್ಲಿ ಆಹಾರದ ಗುಣಮಟ್ಟ ಮತ್ತು ಶುಚಿತ್ವದಲ್ಲಿ ರಾಜಿ ಇಲ್ಲ: ಯು.ಟಿ‌.ಖಾದರ್ ► ಮಂಗಳೂರಿನಲ್ಲಿ ಇಂದಿರಾ ಕ್ಯಾಂಟೀನ್ ಗಳ ಪ್ರಗತಿ ಪರಿಶೀಲನಾ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.16. ಬಡವರಿಗಾಗಿ ನಿರ್ಮಿಸಲಾಗಿರುವ ಇಂದಿರಾ ಕ್ಯಾಂಟೀನ್ ನ ಊಟ, ತಿಂಡಿಯ ಗುಣಮಟ್ಟ, ಪ್ರಮಾಣ ಮತ್ತು ಶುಚಿತ್ವದ ವಿಷಯದಲ್ಲಿ ರಾಜಿ ಬೇಡ. ಎಲೆಕ್ಟ್ರಿಕಲ್ ಸ್ಕೇಲ್‍ನ್ನು ಕೌಂಟರ್‍ನಲ್ಲಿ ಅಳವಡಿಸಿದ್ದು, ಆಹಾರದ ಪ್ರಮಾಣದಲ್ಲಿ ಗ್ರಾಹಕರಿಗೆ ಅನುಮಾನವಿದ್ದಲ್ಲಿ ಪರಿಹರಿಸಿಕೊಳ್ಳಲು ಅನುಕೂಲವಾಗುತ್ತದೆ ಎಂದು ಆಹಾರ ಮತ್ತು ನಾಗರೀಕ ಸರಬಾರಾಜು ಸಚಿವ ಯು.ಟಿ.ಖಾದರ್ ಹೇಳಿದರು.

ಅವರು ಗುರುವಾರ ಜಿಲ್ಲಾಧಿಕಾರಿ ಕಛೇರಿಯಲ್ಲಿ ಇಂದಿರಾ ಕ್ಯಾಂಟೀನ್‍ಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಆಹಾರದ ರುಚಿಯಲ್ಲಿ ವ್ಯತ್ಯಾಸವಾಗಬಾರದು. ಸರಿಯಾದ ರೂಪದಲ್ಲಿ ಸರಿಯಾದ ಗುಣಮಟ್ಟದಲ್ಲಿ ಆಹಾರವನ್ನು ಒದಗಿಸಬೇಕು. ಇಂದಿರಾ ಕ್ಯಾಂಟೀನ್‍ನ ಫಲಾನುಭವಿಗಳಲ್ಲಿ ಹೆಚ್ಚಿನವರು ಕಾರ್ಮಿಕ ವರ್ಗದ ಜನರು. ಬೆಳಿಗ್ಗೆ ಉಪಹಾರ ಮಾಡಿದ ನಂತರ ಮಧ್ಯಾಹ್ನದ ವರೆಗೆ ಹೊಟ್ಟೆ ತುಂಬಿದಂತಿರಬೇಕು. ಗ್ರಾಹಕರ ಬೇಡಿಕೆಯ ಮೇರೆಗೆ ಚಿತ್ರಾನ್ನದ ಜೊತೆಗೆ ಚಟ್ನಿ ಅಥವಾ ರೈತಾ ಮಾಡುವಂತೆ ಹಾಗೂ ಪೊಂಗಲನ್ನು ಉಪಹಾರದ ಪಟ್ಟಿಯಿಂದ ಕೈ ಬಿಡುವಂತೆ ಸೂಚಿಸಿದರು. ಊಟದಲ್ಲಿ ಮೊಸರನ್ನದ ಬದಲು ಪಲ್ಯವನ್ನು ನೀಡುವಂತೆ ಸೂಚಿಸಿದರು. ಅಂಗವಿಕಲ ವ್ಯಕ್ತಿಗಳ ಅನುಕೂಲಕ್ಕಾಗಿ ಕೂಪನ್ ಮೀಸಲಿಡಿ. ಅಂಗವಿಕಲರಿಗೆ, ಮಹಿಳೆಯರಿಗೆ ಮತ್ತು ಹಿರಿಯ ನಾಗರೀಕರಿಗೆ ಪ್ರಥಮ ಆದ್ಯತೆ ಮೇಲೆ ಕೂಪನನ್ನು ಹಂಚುವಂತೆ ಹಾಗೂ ಸಿಬ್ಬಂದಿಗಳಿಗೆ ತರಬೇತಿ ನೀಡುವಂತೆ ತಿಳಿಸಿದರು.

ಕೂಪನ್‍ನಲ್ಲಿ ಉಪಹಾರದ ನಿಗದಿತ ಬೆಲೆ (ರೂ. 12) ಮತ್ತು ಗ್ರಾಹಕರು  ನೀಡುವಂತಹ ಬೆಲೆ (ರೂ. 5) ಎರಡನ್ನು ನಮೂದಿಸ ತಕ್ಕದು. ಸರ್ಕಾರ ಭರಿಸುತ್ತಿರುವ ವೆಚ್ಚದ ಬಗ್ಗೆ ಗ್ರಾಹಕರಿಗೆ ಸ್ಪಷ್ಟತೆ ಇರಬೇಕು. ಇಂದಿರಾ ಕ್ಯಾಂಟೀನ್‍ನಲ್ಲಿ ಕೆಲಸ ಮಾಡುವುದೇ ಸಿಬ್ಬಂದಿಗಳು ಇಂದಿರಾ ಕ್ಯಾಂಟೀನ್‍ನ ಸಮವಸ್ತ್ರ ಮತ್ತು ಟೋಪಿಯನ್ನು  ಹಾಕಿಕೊಂಡು ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳುವಂತೆ ಸಚಿವರು ಸೂಚಿಸಿದರು. ಸಿಬ್ಬಂದಿಗಳಿಗೆ ಕಡ್ಡಾಯವಾಗಿ ವೈದ್ಯಕೀಯ ಪರೀಕ್ಷೆ ನಡೆಸಬೇಕು ಮತ್ತು ದೈಹಿಕ ಸುದೃಢತೆಯುಳ್ಳ ವ್ಯಕ್ತಿಯನ್ನು ಹುದ್ದೆಗೆ ನೇಮಿಸಿಕೊಳ್ಳಬೇಕು ಎಂದರು. ಉಳ್ಳಾಲ ನಗರಸಭೆ ವ್ಯಾಪ್ತಿಯ ಇಂದಿರಾ ಕ್ಯಾಂಟೀನ್‍ನ ನಿರ್ಮಾಣದ ಕೆಲಸವು ಮುಂದಿನ ವಾರ ಸಂಪೂರ್ಣಗೊಳ್ಳಲಿದೆ. ಇದು ಮಾರ್ಚ್ 21 ಕ್ಕೆ ಉದ್ಘಾಟನೆಯಾಗುವ ಸಾಧ್ಯತೆ ಇದೆ. ಹೋಬಳಿ ಮಟ್ಟದಲ್ಲಿ ರಾಜ್ಯದಲ್ಲೇ ಪ್ರಥಮ ಇಂದಿರಾ ಕ್ಯಾಂಟೀನ್ ಆಗಿರುತ್ತದೆ ಎಂದು ಯು.ಟಿ. ಖಾದರ್ ಹೇಳಿದರು.

ದ.ಕ. ಜಿಲ್ಲಾಧಿಕಾರಿ ಡಾ. ಸಸಿಕಾಂತ್ ಸೆಂಥಿಲ್ ಮಾತನಾಡಿ, ಗ್ರಾಹಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ನೀರಿನ ಪೂರೈಕೆಯಲ್ಲಿ ವ್ಯತ್ಯಯವಾದಲ್ಲಿ ಕೂಡಲೇ ಮಹಾನಗರ ಪಾಲಿಕೆಗೆ ತಿಳಿಸಬೇಕು. ವಿದ್ಯುತ್ ಪೂರೈಕೆಯಲ್ಲಿಯೂ ವ್ಯತ್ಯಯವಾದಲ್ಲಿ ಕೂಡಲೇ ಇಲಾಖೆಗೆ ತಿಳಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು. ಇಂದಿರಾ ಕ್ಯಾಂಟೀನ್ ಕಾಮಗಾರಿಯನ್ನು ಸೂಕ್ತ ರೀತಿಯಲ್ಲಿ ಪೂರ್ಣಗೊಳಿಸಬೇಕು, ಜೂನ್ ತಿಂಗಳಿನಲ್ಲಿ ಮಳೆ ಜಾಸ್ತಿ ಇರುವುದರಿಂದ ತೊಂದರೆ ಉಂಟಾಗದಂತೆ ನೋಡಿಕೊಳ್ಳಬೇಕು. ಉಪಹಾರ ಮತ್ತು ಊಟದಲ್ಲಿ ತರುವಂತಹ ಅಂತಿಮ ಬದಲಾವಣೆಯನ್ನು ತಮ್ಮ ಗಮನಕ್ಕೆ ತರುವಂತೆ ಸೂಚಿಸಿದರು. ಸಭೆಯಲ್ಲಿ ಸಾಯಿ ಹಾಸ್ಪಿಟಲಿಟಿ ಸರ್ವಿಸ್‍ನ ಮ್ಯಾನೇಜರ್ ಚಂದ್ರಹಾಸ್, ಕೆಫ್ ಇನ್‍ಫ್ರಾ, ಕಂಟ್ರಾಕ್ಟರ್ ರೋನಾಲ್ಡ್ ಮತ್ತು ಇನ್ನಿತರರು ಉಪಸ್ಥಿತರಿದ್ದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago