ನಾನು ಮೋದಿಯವರನ್ನು ಹೊಗಳುತ್ತಿಲ್ಲ. ವಾಸ್ತವ ಹೇಳುತ್ತಿದ್ದೇನೆ..
ತುಮಕೂರು: ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್, ಜನರನ್ನು ಆಕರ್ಷಿಸುವ ನಾಯಕರಿದ್ದರೆ ಅದು ನರೇಂದ್ರ ಮೋದಿ ಮಾತ್ರ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದರು.
ಮಧುಗಿರಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿರಾ ಗಾಂಧಿಯವರ ನಂತರ ಮಾಸ್ ಲೀಡರ್ ಅಂತ ಯಾರಾದರೂ ಇದ್ದರೆ ಅದು ನರೇಂದ್ರ ಮೋದಿ. ಹಾಗಂತ ನಾನು ಮೋದಿಯವರನ್ನು ಹೊಗಳುತ್ತಿಲ್ಲ. ವಾಸ್ತವ ಹೇಳುತ್ತಿದ್ದೇನೆ ಎನ್ನುವ ಮೂಲಕ ಅಚ್ಚರಿ ಮೂಡಿಸಿದರು.
ಇದನ್ನೂ ಓದಿ:
ರಾಜಕಾರಣದಲ್ಲಿ ಪಾಪುಲಾರಿಟಿ ಯಾರಿಗೂ ಶಾಶ್ವತವಲ್ಲ. ಅದನ್ನು ಮೊದಲು ಅವರು ಅರಿಯಬೇಕು. ಈ ಹಿಂದೆ ಇಂದಿರಾಗಾಂಧಿಯವರ ಹೆಸರು ಹೇಳಿಕೊಂಡೇ 200 ಜನ ಎಂಪಿಗಳು ಗೆಲ್ಲುತ್ತಿದ್ದರು. ಆದರೆ ಅವರೇ ಪರಿಸ್ಥಿತಿಯ ಒತ್ತಡಗಳಿಗೆ ಸಿಲುಕಿ ಸ್ವಯಂ ಸೋಲು ಅನುಭವಿಸಬೇಕಾಯಿತು ಎಂದರು.
‘ನೀವು ಮೋದಿಯನ್ನು ಹೊಗಳಬಿಟ್ಟವ್ನೇ’ ಅಂತ ಬರೆದರೆ ನಮ್ಮವರೆಲ್ಲ ನನ್ನ ಮೇಲೆ ಕಣ್ಣು ಕೆಂಪಗೆ ಮಾಡ್ಕೋತಾರೆ. ನಾನು ವಾಸ್ತವಾಂಶವನ್ನ ಹೇಳುವವನು. ಮೋದಿ ಈಗ ಆಕಾಶದಲ್ಲಿ ಇದ್ದಾರೆ, ಭೂಮಿಗೆ ಬಂದಾಗ ಕಷ್ಟ, ಸುಖ ಎನು ಅಂತ ಗೊತ್ತಾಗುತ್ತೆ ಎಂದರು.
ಇದನ್ನೂ ಓದಿ:
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…