ನಾನು ಮೋದಿಯವರನ್ನು ಹೊಗಳುತ್ತಿಲ್ಲ. ವಾಸ್ತವ ಹೇಳುತ್ತಿದ್ದೇನೆ..
ತುಮಕೂರು: ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್, ಜನರನ್ನು ಆಕರ್ಷಿಸುವ ನಾಯಕರಿದ್ದರೆ ಅದು ನರೇಂದ್ರ ಮೋದಿ ಮಾತ್ರ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದರು.
ಮಧುಗಿರಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿರಾ ಗಾಂಧಿಯವರ ನಂತರ ಮಾಸ್ ಲೀಡರ್ ಅಂತ ಯಾರಾದರೂ ಇದ್ದರೆ ಅದು ನರೇಂದ್ರ ಮೋದಿ. ಹಾಗಂತ ನಾನು ಮೋದಿಯವರನ್ನು ಹೊಗಳುತ್ತಿಲ್ಲ. ವಾಸ್ತವ ಹೇಳುತ್ತಿದ್ದೇನೆ ಎನ್ನುವ ಮೂಲಕ ಅಚ್ಚರಿ ಮೂಡಿಸಿದರು.
ಇದನ್ನೂ ಓದಿ:
ರಾಜಕಾರಣದಲ್ಲಿ ಪಾಪುಲಾರಿಟಿ ಯಾರಿಗೂ ಶಾಶ್ವತವಲ್ಲ. ಅದನ್ನು ಮೊದಲು ಅವರು ಅರಿಯಬೇಕು. ಈ ಹಿಂದೆ ಇಂದಿರಾಗಾಂಧಿಯವರ ಹೆಸರು ಹೇಳಿಕೊಂಡೇ 200 ಜನ ಎಂಪಿಗಳು ಗೆಲ್ಲುತ್ತಿದ್ದರು. ಆದರೆ ಅವರೇ ಪರಿಸ್ಥಿತಿಯ ಒತ್ತಡಗಳಿಗೆ ಸಿಲುಕಿ ಸ್ವಯಂ ಸೋಲು ಅನುಭವಿಸಬೇಕಾಯಿತು ಎಂದರು.
‘ನೀವು ಮೋದಿಯನ್ನು ಹೊಗಳಬಿಟ್ಟವ್ನೇ’ ಅಂತ ಬರೆದರೆ ನಮ್ಮವರೆಲ್ಲ ನನ್ನ ಮೇಲೆ ಕಣ್ಣು ಕೆಂಪಗೆ ಮಾಡ್ಕೋತಾರೆ. ನಾನು ವಾಸ್ತವಾಂಶವನ್ನ ಹೇಳುವವನು. ಮೋದಿ ಈಗ ಆಕಾಶದಲ್ಲಿ ಇದ್ದಾರೆ, ಭೂಮಿಗೆ ಬಂದಾಗ ಕಷ್ಟ, ಸುಖ ಎನು ಅಂತ ಗೊತ್ತಾಗುತ್ತೆ ಎಂದರು.
ಇದನ್ನೂ ಓದಿ:
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…
ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ: ಕಾಂಗ್ರೆಸ್ ನ ಮುಸ್ಲಿಂ ಓಲೈಕೆ ನೀತಿ ಬಹಿರಂಗ : ಸುನಿಲ್ ಕುಮಾರ್ ಕಾರ್ಕಳ:…