ಇಂದು ಉಡುಪಿಗೆ ಭೀಮ್ ಆರ್ಮಿಯ ಚಂದ್ರಶೇಖರ್ ಅಜಾದ್ ; ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೃಹತ್ ಪ್ರತಿಭಟನಾ ಸಭೆಯಲ್ಲಿ ಭಾಗಿ -Vishwanews24

ಉಡುಪಿ,: ಸಹಬಾಳ್ವೆ ಉಡುಪಿ ವತಿಯಿಂದ ಇಂದು ಸಂಜೆ ಉಡುಪಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ.

ಈ ಸಭೆಯಲ್ಲಿ ದೇಶದಾದ್ಯಂತ ಹೋರಾಟಗಳ ಮೂಲಕ ಚಿರಪರಿಚಿತರಾಗಿರುವ ಉತ್ತರಪ್ರದೇಶ ಮೂಲದ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ದಿಕ್ಸೂಚಿ ಭಾಷಣ ಮಾಡಲಿದ್ದು, ನಗರದ ಕ್ರಿಶ್ಚಿಯನ್ ಹೈಸ್ಕೂಲ್ ಇದಕ್ಕಾಗಿ ಸಜ್ಜಾಗಿದೆ. ಇವರಲ್ಲದೆ ವಿಧಾನಸಭೆಯ ಮಾಜಿ ಸ್ಪೀಕರ್, ಶಾಸಕ ರಮೇಶ್ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ರಾಜಕೀಯ

ಪೌರತ್ವ ಕಾಯ್ದೆ ವಿರುದ್ದ ಇನ್ನೂ ನಿಲ್ಲದ ಪ್ರತಿಭಟನೆ ಉಡುಪಿ ಮಿಷನ್ ಆಸ್ಪತ್ರೆ ಬಳಿಯ ಕ್ರಿಶ್ಚಿಯನ್ ಪಿಯು ಕಾಲೇಜ್ ಕ್ರೀಡಾಂಗಣದಲ್ಲಿ ಈ ಬೃಹತ್ ಪ್ರತಿಭಟನಾ ಸಭೆ ನಡೆಯುತ್ತಿದ್ದು, ಜಿಲ್ಲೆಯಿಂದ 20 ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರು ಸೇರುವ ನಿರೀಕ್ಷೆ ಇದೆ ಎಂದು ಸಂಘಟಕರು ತಿಳಿಸಿದ್ದಾರೆ.

ಅದೇ ರೀತಿ ಮಂಗಳೂರಿನ ಮಾಜಿ ಜಿಲ್ಲಾಧಿಕಾರಿ, ಚಿಂತಕ, ಸಾಮಾಜಿಕ ಹೋರಾಟಗಾರ ಸಸಿಕಾಂತ್ ಸೆಂಥಿಲ್, ಮಹೇಂದ್ರ ಕುಮಾರ್, ಕವಿತಾರೆಡ್ಡಿ ಮುಂತಾದವರು ಕಾರ್ಯಕ್ರಮದಲ್ಲಿ ಮಾತಾಡಲಿದ್ದಾರೆ. ಈ ಪ್ರತಿಭಟನೆಯ ಅಂಗವಾಗಿ ಪಾದಯಾತ್ರೆಯನ್ನೂ ಹಮ್ಮಿಕೊಳ್ಳಲಾಗಿತ್ತು, ಆದರೆ ಭದ್ರತೆಯ ಕಾರಣ ಮುಂದಿಟ್ಟು ಪೊಲೀಸರು ಪಾದಯಾತ್ರೆಗೆ ಅನುಮತಿ ನೀಡಿಲ್ಲ. ಪ್ರತಿಭಟನೆ ಹಿನ್ನೆಲೆಯಲ್ಲಿ ಖಾಕಿಪಡೆ ನಗರದಾದ್ಯಂತ ಭಾರೀ ಬಂದೋಬಸ್ತ್ ಮಾಡಿದೆ. ಸಂಜೆ ನಾಲ್ಕು ಗಂಟೆಗೆ ಪ್ರತಿಭಟನಾ ಸಭೆ ಪ್ರಾರಂಭವಾಗಲಿದೆ.

Vishwa News 24

Recent Posts

ಹೆಬ್ರಿ: ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಏಣಿಯಿಂದ ಬಿದ್ದು ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಾವು – vishwanews24

ಹೆಬ್ರಿ: ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಏಣಿಯಿಂದ ಬಿದ್ದು ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಾವು ಹೆಬ್ರಿ: ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಏಣಿಯಿಂದ…

30 minutes ago

ರಾಜ್ಯದಲ್ಲಿ ಏ.1ರವರೆಗೆ ಆಲಿಕಲ್ಲು ಮಳೆ ಸಾಧ್ಯತೆ ; ಕರಾವಳಿ ಜಿಲ್ಲೆಗೆ ಆರೆಂಜ್ ಅಲರ್ಟ್  ಘೋಷಣೆ – vishwanews24

ರಾಜ್ಯದಲ್ಲಿ ಏ.1ರವರೆಗೆ ಆಲಿಕಲ್ಲು ಮಳೆ ಸಾಧ್ಯತೆ ; ಕರಾವಳಿ ಜಿಲ್ಲೆಗೆ ಆರೆಂಜ್ ಅಲರ್ಟ್  ಘೋಷಣೆ ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ…

39 minutes ago

ಮೇ 16ರಂದು ಇತಿಹಾಸ ಪ್ರಸಿದ್ದ ಕಾಪು “ಪಿಲಿಕೋಲ” – vishwanews24

ಮೇ 16ರಂದು ಇತಿಹಾಸ ಪ್ರಸಿದ್ದ ಕಾಪು "ಪಿಲಿಕೋಲ" ಕಾಪು: ತನ್ನದೇ ಆದ ವಿಶಿಷ್ಟ- ವೈಶಿಷ್ಟ್ಯತೆಗಳಿಂ­ದಾಗಿ ಕರಾ­ವಳಿ ಜಿಲ್ಲೆ­ಗಳು ಮಾತ್ರವಲ್ಲದೇ ದೇಶ-ವಿದೇ­ಶ­ಗ­ಳ­ಲ್ಲಿಯೂ…

2 hours ago

ಕಾಪು ಅಕ್ರಮ ಮೀನುಗಾರಿಕೆ ನಡೆಸುತ್ತಿದ್ದ ದೋಣಿ ಸ್ಥಳೀಯ ನಾಡದೋಣಿ ಗೆ ಡಿಕ್ಕಿ ಪ್ರಕರಣ: SDPI ಖಂಡನೆ -vishwanews24

ಕಾಪು ಅಕ್ರಮ ಮೀನುಗಾರಿಕೆ ನಡೆಸುತ್ತಿದ್ದ ದೋಣಿ ಸ್ಥಳೀಯ ನಾಡದೋಣಿ ಗೆ ಡಿಕ್ಕಿ ಪ್ರಕರಣ: ಎಸ್‌ ಡಿ ಪಿ ಐ ಖಂಡನೆ…

3 hours ago

ಕಾರ್ಕಳ : ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರೂ. ಅನುದಾನ: ರಾಜ್ಯ ಸರ್ಕಾರಕ್ಕೆ ಉದಯ ಶೆಟ್ಟಿ ಮುನಿಯಾಲು ಧನ್ಯವಾದ ಸಲ್ಲಿಕೆ – vishwanews24

ಕಾರ್ಕಳ : ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರೂಪಾಯಿ ಅನುದಾನ: ರಾಜ್ಯ ಸರ್ಕಾರಕ್ಕೆ ಉದಯ ಶೆಟ್ಟಿ ಮುನಿಯಾಲು ಧನ್ಯವಾದ ಸಲ್ಲಿಕೆ ಕಾರ್ಕಳದಲ್ಲಿ…

3 hours ago

ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ ಡೀಸೆಲ್ ಪೂರೈಕೆಗೆ  ಕೇಂದ್ರ ಸಚಿವರಿಗೆ ಮನವಿ – vishwanews24

ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ ಡೀಸೆಲ್ ಪೂರೈಕೆಗೆ  ಕೇಂದ್ರ ಸಚಿವರಿಗೆ ಮನವಿ ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ…

3 hours ago