Featured

ಇಂದು ಉಡುಪಿಗೆ ಯೋಗಗುರು ಬಾಬಾ ರಾಮದೇವ್‌ , ನಾಳೆಯಿಂದ ಐದು ದಿನ ಬೃಹತ್‌ ಯೋಗ ಶಿಬಿರ, ಚಿಕಿತ್ಸೆ -Vishwanews24

ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ಪಾರ್ಕಿಂಗ್‌ ಪ್ರದೇಶದಲ್ಲಿ ನ. 16ರಿಂದ 20ರ ವರೆಗೆ ನಡೆಯುವ ಐದು ದಿನಗಳ ಬೃಹತ್‌ ಯೋಗ ಚಿಕಿತ್ಸೆ ಮತ್ತು ಯೋಗ ಶಿಬಿರವನ್ನು ನಡೆಸಿಕೊಡುವ ಪ್ರಸಿದ್ಧ ಯೊಗಪಟು ಬಾಬಾ ರಾಮದೇವ್‌ ನ. 15ರ ಸಂಜೆ ಉಡುಪಿಗೆ ಆಗಮಿಸಲಿದ್ದಾರೆ.

ಮಂಗಳೂರಿಗೆ ವಿಮಾನದ ಮೂಲಕ ರಾಮದೇವ್‌ ಬರಲಿದ್ದಾರೆ. ಮಂಗಳೂರಿನಿಂದ ಉಡುಪಿಗೆ ರಸ್ತೆ ಮಾರ್ಗದಲ್ಲಿ ಬರುವ ರಾಮದೇವ್‌ ಅವರನ್ನು ಸಂಜೆ 5.30ಕ್ಕೆ ಕರಾವಳಿ ಬೈಪಾಸ್‌ ಬಳಿ ಸ್ವಾಗತಿಸಲಾಗುವುದು. ಕಲ್ಸಂಕದಿಂದ ಸುಮಾರು 5.45ಕ್ಕೆ ಬಡಗು ಪೇಟೆ ಮಾರ್ಗವಾಗಿ ಅವರನ್ನು ವೈಭವದ ಮೆರವಣಿಗೆಯಲ್ಲಿ ಶ್ರೀಕೃಷ್ಣ ಮಠಕ್ಕೆ ಕರೆತರಲಾಗುವುದು. ದೇವರ ದರ್ಶನ ಬಳಿಕ ಪರ್ಯಾಯ ಶ್ರೀ ಪಲಿಮಾರು ಮಠದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು ಉಭಯ ಕುಶಲೋಪರಿ ನಡೆಸಲಿದ್ದಾರೆ.

ನ. 16ರಿಂದ 20ರ ವರೆಗೆ ಬೆಳಗ್ಗೆ 5ರಿಂದ 7.30 ಗಂಟೆಯ ವರೆಗೆ ಯೋಗ ಶಿಬಿರ ನಡೆಯಲಿದೆ. ಇದಕ್ಕಾಗಿ ಬೃಹತ್‌ ವೇದಿಕೆ ಮಂಗಳವಾರದಿಂದ ಸಿದ್ಧಗೊಳ್ಳುತ್ತಿದೆ. 20×40 ಉದ್ದಗಲದ 12 ಅಡಿ ಎತ್ತರದ ವೇದಿಕೆಯಲ್ಲಿ ಬಾಬಾ ರಾಮದೇವ್‌ ಅವರು ಮುಂಜಾನೆ ಯೋಗ ಭಂಗಿಗಳನ್ನು ಪ್ರದರ್ಶಿಸಲಿದ್ದಾರೆ.

ನ. 18ರ ಸಂಜೆ 4.30ಕ್ಕೆ ವಿದ್ಯಾರ್ಥಿಗಳು, ಮಹಿಳೆಯರು, ಯುವವೃಂದವನ್ನುದ್ದೇಶಿಸಿ ನಡೆಯುವ ಸಮಾವೇಶದಲ್ಲಿ ರಾಮದೇವ್‌ ಮಾತನಾಡಲಿದ್ದಾರೆ. ನ. 19ರ ಸಂಜೆ 4ಕ್ಕೆ ರಾಜಾಂಗಣದಲ್ಲಿ ಸಂತ ಸಮ್ಮೇಳನ ನಡೆಯಲಿದ್ದು, ಕರಾವಳಿಯ ವಿವಿಧ ಮಠಾಧೀಶರು ಪಾಲ್ಗೊಳ್ಳುವರು. ಪೇಜಾವರ ಶ್ರೀಗಳು ಸಂತ ಸಮ್ಮೇಳನವಲ್ಲದೆ ಬೆಳಗ್ಗಿನ ಯೋಗ ಶಿಬಿರದಲ್ಲಿ ಯಾವುದಾದರೂ ಒಂದು ದಿನ ಪಾಲ್ಗೊಳ್ಳುವುದಾಗಿ ತಿಳಿಸಿದ್ದಾರೆ.

ಯೋಗ ಉಡುಗೆ
ನ. 16ರಿಂದ 20ರ ವರೆಗೆ ಬೆಳಗ್ಗೆ ನಡೆಯುವ ಶಿಬಿರದಲ್ಲಿ ಯೋಗಾಸನ ಮಾಡಲು ಅನುಕೂಲವಾಗುವಂತಹ ಉಡುಗೆಗಳನ್ನು ಧರಿಸಿ ಬರಬೇಕು. ಬಿಳಿ ಬಟ್ಟೆ ಉತ್ತಮ ಎಂದು ಸಂಘಟಕರು ತಿಳಿಸಿದ್ದಾರೆ.

ವಾಹನ ನಿಲುಗಡೆ ವ್ಯವಸ್ಥೆ
ಉಡುಪಿಯ ರಾಜಾಂಗಣ ಪಾರ್ಕಿಂಗ್‌ ಪ್ರದೇಶದಲ್ಲಿ ನ. 16ರಿಂದ 20ರ ವರೆಗೆ ನಡೆಯಲಿರುವ ಬಾಬಾ ರಾಮದೇವ್‌ ಅವರ ಬೃಹತ್‌ ಯೋಗ ಶಿಬಿರಕ್ಕೆ ಆಗಮಿಸುವ ನಾಗರಿಕರ ವಾಹನಗಳ ನಿಲುಗಡೆಯ ಬಗ್ಗೆ ಈ ಕೆಳಗಿನಂತೆ ವ್ಯವಸ್ಥೆ ಮಾಡಲಾಗಿದೆ.

– ಅಂಬಾಗಿಲು ಮತ್ತು ಕರಾವಳಿ ಬೈಪಾಸಿನಿಂದ ಬರುವ ದ್ವಿಚಕ್ರ ವಾಹನ ಮತ್ತು ಕಾರುಗಳನ್ನು ಬಡಗುಪೇಟೆ – ರಥಬೀದಿ – ಸೋದೆ ವಾದಿರಾಜ ಮಠ ಮಾರ್ಗವಾಗಿ ಬಂದು ಶ್ರೀಕೃಷ್ಣಮಠದ ಪೂರ್ವ ಭಾಗದ ಗೋಪುರದ ಮುಂಭಾಗದ ಮೈದಾನದಲ್ಲಿ (ಪಾರ್ಕಿಂಗ್‌ ಪ್ರದೇಶಕ್ಕೆ ತಾಗಿದ ಖಾಸಗಿ ಜಾಗ) ನಿಲ್ಲಿಸಬೇಕು.

– ಮಣಿಪಾಲದಿಂದ ಬರುವ ವಾಹನಗಳನ್ನು ಕುಂಜಿಬೆಟ್ಟು ಶಾರದಾ ಕಲ್ಯಾಣ ಮಂಟಪದ ಮಾರ್ಗವಾಗಿ ಬಂದು ಶಾರದಾ ನಗರದ ಬಳಿ ಬಲಕ್ಕೆ ತಿರುಗಿ ವಿದ್ಯೋದಯ ಶಾಲೆಯ (ಹೊಸ ಕ್ಯಾಂಪಸ್‌) ಆವರಣದಲ್ಲಿ ನಿಲ್ಲಿಸಬೇಕು. ಶಿಬಿರ ಮುಗಿದ ಬಳಿಕ ಅದೇ ಮಾರ್ಗದಲ್ಲಿ ಹಿಂದಿರುಗಬೇಕು.

– ವಿಐಪಿಗಳು ಮಾತ್ರ ತಮ್ಮ ವಾಹನಗಳನ್ನು ಕಲ್ಸಂಕದಿಂದ ರಾಜಾಂಗಣ ಪಾರ್ಕಿಂಗ್‌ ಪ್ರದೇಶ ರಸ್ತೆಯ ಬಲಭಾಗದಲ್ಲಿ ನಿಗದಿ ಪಡಿಸಿದ ಸ್ಥಳದಲ್ಲಿ ನಿಲ್ಲಿಸಬೇಕು.

– ಮಾಧ್ಯಮ ಮಿತ್ರರಿಗೆ ವಿಶೇಷ ಪಾಸ್‌ ವಿತರಿಸಲಾಗುತ್ತಿದ್ದು ಅವರು ವಾಹನಗಳನ್ನು ಕಲ್ಸಂಕ ಪಾರ್ಕಿಂಗ್‌ ಪ್ರದೇಶಕ್ಕೆ ಬರುವ ರಸ್ತೆಯ ಬಲಭಾಗದಲ್ಲಿ ವಿಐಪಿಗಳಿಗೆ ನಿಗದಿ ಪಡಿಸಲಾಗಿರುವ ಪಾರ್ಕಿಂಗ್‌ ಸ್ಥಳದಲ್ಲಿ ನಿಲುಗಡೆಗೊಳಿಸಬೇಕು.

ಶಿಬಿರ ಸಂಯೋಜಕರು ಮತ್ತು ನಗರ ಸಂಚಾರ ಠಾಣೆ ಪೊಲೀಸರೊಂದಿಗೆ ಸಹಕರಿಸಲು ವಿನಂತಿಸಲಾಗಿದೆ.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

4 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

4 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

5 hours ago