Featured

ಇಂದು ಉಡುಪಿಗೆ ಯೋಗಗುರು ಬಾಬಾ ರಾಮದೇವ್‌ , ನಾಳೆಯಿಂದ ಐದು ದಿನ ಬೃಹತ್‌ ಯೋಗ ಶಿಬಿರ, ಚಿಕಿತ್ಸೆ -Vishwanews24

ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ಪಾರ್ಕಿಂಗ್‌ ಪ್ರದೇಶದಲ್ಲಿ ನ. 16ರಿಂದ 20ರ ವರೆಗೆ ನಡೆಯುವ ಐದು ದಿನಗಳ ಬೃಹತ್‌ ಯೋಗ ಚಿಕಿತ್ಸೆ ಮತ್ತು ಯೋಗ ಶಿಬಿರವನ್ನು ನಡೆಸಿಕೊಡುವ ಪ್ರಸಿದ್ಧ ಯೊಗಪಟು ಬಾಬಾ ರಾಮದೇವ್‌ ನ. 15ರ ಸಂಜೆ ಉಡುಪಿಗೆ ಆಗಮಿಸಲಿದ್ದಾರೆ.

ಮಂಗಳೂರಿಗೆ ವಿಮಾನದ ಮೂಲಕ ರಾಮದೇವ್‌ ಬರಲಿದ್ದಾರೆ. ಮಂಗಳೂರಿನಿಂದ ಉಡುಪಿಗೆ ರಸ್ತೆ ಮಾರ್ಗದಲ್ಲಿ ಬರುವ ರಾಮದೇವ್‌ ಅವರನ್ನು ಸಂಜೆ 5.30ಕ್ಕೆ ಕರಾವಳಿ ಬೈಪಾಸ್‌ ಬಳಿ ಸ್ವಾಗತಿಸಲಾಗುವುದು. ಕಲ್ಸಂಕದಿಂದ ಸುಮಾರು 5.45ಕ್ಕೆ ಬಡಗು ಪೇಟೆ ಮಾರ್ಗವಾಗಿ ಅವರನ್ನು ವೈಭವದ ಮೆರವಣಿಗೆಯಲ್ಲಿ ಶ್ರೀಕೃಷ್ಣ ಮಠಕ್ಕೆ ಕರೆತರಲಾಗುವುದು. ದೇವರ ದರ್ಶನ ಬಳಿಕ ಪರ್ಯಾಯ ಶ್ರೀ ಪಲಿಮಾರು ಮಠದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು ಉಭಯ ಕುಶಲೋಪರಿ ನಡೆಸಲಿದ್ದಾರೆ.

ನ. 16ರಿಂದ 20ರ ವರೆಗೆ ಬೆಳಗ್ಗೆ 5ರಿಂದ 7.30 ಗಂಟೆಯ ವರೆಗೆ ಯೋಗ ಶಿಬಿರ ನಡೆಯಲಿದೆ. ಇದಕ್ಕಾಗಿ ಬೃಹತ್‌ ವೇದಿಕೆ ಮಂಗಳವಾರದಿಂದ ಸಿದ್ಧಗೊಳ್ಳುತ್ತಿದೆ. 20×40 ಉದ್ದಗಲದ 12 ಅಡಿ ಎತ್ತರದ ವೇದಿಕೆಯಲ್ಲಿ ಬಾಬಾ ರಾಮದೇವ್‌ ಅವರು ಮುಂಜಾನೆ ಯೋಗ ಭಂಗಿಗಳನ್ನು ಪ್ರದರ್ಶಿಸಲಿದ್ದಾರೆ.

ನ. 18ರ ಸಂಜೆ 4.30ಕ್ಕೆ ವಿದ್ಯಾರ್ಥಿಗಳು, ಮಹಿಳೆಯರು, ಯುವವೃಂದವನ್ನುದ್ದೇಶಿಸಿ ನಡೆಯುವ ಸಮಾವೇಶದಲ್ಲಿ ರಾಮದೇವ್‌ ಮಾತನಾಡಲಿದ್ದಾರೆ. ನ. 19ರ ಸಂಜೆ 4ಕ್ಕೆ ರಾಜಾಂಗಣದಲ್ಲಿ ಸಂತ ಸಮ್ಮೇಳನ ನಡೆಯಲಿದ್ದು, ಕರಾವಳಿಯ ವಿವಿಧ ಮಠಾಧೀಶರು ಪಾಲ್ಗೊಳ್ಳುವರು. ಪೇಜಾವರ ಶ್ರೀಗಳು ಸಂತ ಸಮ್ಮೇಳನವಲ್ಲದೆ ಬೆಳಗ್ಗಿನ ಯೋಗ ಶಿಬಿರದಲ್ಲಿ ಯಾವುದಾದರೂ ಒಂದು ದಿನ ಪಾಲ್ಗೊಳ್ಳುವುದಾಗಿ ತಿಳಿಸಿದ್ದಾರೆ.

ಯೋಗ ಉಡುಗೆ
ನ. 16ರಿಂದ 20ರ ವರೆಗೆ ಬೆಳಗ್ಗೆ ನಡೆಯುವ ಶಿಬಿರದಲ್ಲಿ ಯೋಗಾಸನ ಮಾಡಲು ಅನುಕೂಲವಾಗುವಂತಹ ಉಡುಗೆಗಳನ್ನು ಧರಿಸಿ ಬರಬೇಕು. ಬಿಳಿ ಬಟ್ಟೆ ಉತ್ತಮ ಎಂದು ಸಂಘಟಕರು ತಿಳಿಸಿದ್ದಾರೆ.

ವಾಹನ ನಿಲುಗಡೆ ವ್ಯವಸ್ಥೆ
ಉಡುಪಿಯ ರಾಜಾಂಗಣ ಪಾರ್ಕಿಂಗ್‌ ಪ್ರದೇಶದಲ್ಲಿ ನ. 16ರಿಂದ 20ರ ವರೆಗೆ ನಡೆಯಲಿರುವ ಬಾಬಾ ರಾಮದೇವ್‌ ಅವರ ಬೃಹತ್‌ ಯೋಗ ಶಿಬಿರಕ್ಕೆ ಆಗಮಿಸುವ ನಾಗರಿಕರ ವಾಹನಗಳ ನಿಲುಗಡೆಯ ಬಗ್ಗೆ ಈ ಕೆಳಗಿನಂತೆ ವ್ಯವಸ್ಥೆ ಮಾಡಲಾಗಿದೆ.

– ಅಂಬಾಗಿಲು ಮತ್ತು ಕರಾವಳಿ ಬೈಪಾಸಿನಿಂದ ಬರುವ ದ್ವಿಚಕ್ರ ವಾಹನ ಮತ್ತು ಕಾರುಗಳನ್ನು ಬಡಗುಪೇಟೆ – ರಥಬೀದಿ – ಸೋದೆ ವಾದಿರಾಜ ಮಠ ಮಾರ್ಗವಾಗಿ ಬಂದು ಶ್ರೀಕೃಷ್ಣಮಠದ ಪೂರ್ವ ಭಾಗದ ಗೋಪುರದ ಮುಂಭಾಗದ ಮೈದಾನದಲ್ಲಿ (ಪಾರ್ಕಿಂಗ್‌ ಪ್ರದೇಶಕ್ಕೆ ತಾಗಿದ ಖಾಸಗಿ ಜಾಗ) ನಿಲ್ಲಿಸಬೇಕು.

– ಮಣಿಪಾಲದಿಂದ ಬರುವ ವಾಹನಗಳನ್ನು ಕುಂಜಿಬೆಟ್ಟು ಶಾರದಾ ಕಲ್ಯಾಣ ಮಂಟಪದ ಮಾರ್ಗವಾಗಿ ಬಂದು ಶಾರದಾ ನಗರದ ಬಳಿ ಬಲಕ್ಕೆ ತಿರುಗಿ ವಿದ್ಯೋದಯ ಶಾಲೆಯ (ಹೊಸ ಕ್ಯಾಂಪಸ್‌) ಆವರಣದಲ್ಲಿ ನಿಲ್ಲಿಸಬೇಕು. ಶಿಬಿರ ಮುಗಿದ ಬಳಿಕ ಅದೇ ಮಾರ್ಗದಲ್ಲಿ ಹಿಂದಿರುಗಬೇಕು.

– ವಿಐಪಿಗಳು ಮಾತ್ರ ತಮ್ಮ ವಾಹನಗಳನ್ನು ಕಲ್ಸಂಕದಿಂದ ರಾಜಾಂಗಣ ಪಾರ್ಕಿಂಗ್‌ ಪ್ರದೇಶ ರಸ್ತೆಯ ಬಲಭಾಗದಲ್ಲಿ ನಿಗದಿ ಪಡಿಸಿದ ಸ್ಥಳದಲ್ಲಿ ನಿಲ್ಲಿಸಬೇಕು.

– ಮಾಧ್ಯಮ ಮಿತ್ರರಿಗೆ ವಿಶೇಷ ಪಾಸ್‌ ವಿತರಿಸಲಾಗುತ್ತಿದ್ದು ಅವರು ವಾಹನಗಳನ್ನು ಕಲ್ಸಂಕ ಪಾರ್ಕಿಂಗ್‌ ಪ್ರದೇಶಕ್ಕೆ ಬರುವ ರಸ್ತೆಯ ಬಲಭಾಗದಲ್ಲಿ ವಿಐಪಿಗಳಿಗೆ ನಿಗದಿ ಪಡಿಸಲಾಗಿರುವ ಪಾರ್ಕಿಂಗ್‌ ಸ್ಥಳದಲ್ಲಿ ನಿಲುಗಡೆಗೊಳಿಸಬೇಕು.

ಶಿಬಿರ ಸಂಯೋಜಕರು ಮತ್ತು ನಗರ ಸಂಚಾರ ಠಾಣೆ ಪೊಲೀಸರೊಂದಿಗೆ ಸಹಕರಿಸಲು ವಿನಂತಿಸಲಾಗಿದೆ.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

4 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

4 days ago