ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಸ್ಥಾನಗಳಲ್ಲಿ ಒಂದಾದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ಇಂದು ವೈಭವದ ಬ್ರಹ್ಮಕಲಶೋತ್ಸವ ನಡೆಯಲಿದೆ.
ಇಂದು ಬೆಳಗ್ಗೆ 9.37ರ ಮೀನ ಲಗ್ನ ಸುಮುಹೂರ್ತದಲ್ಲಿ ಪ್ರಧಾನ ಸ್ವರ್ಣಕಲಶ ಹಾಗೂ 1,127 ಬೆಳ್ಳಿ ಕಲಶಗಳಿಂದ ಶ್ರೀದೇವಿಗೆ ಅಭಿಷೇಕ ನಡೆಯಲಿದೆ. ಕಲಶಮಂಡಲ ಪೂಜೆಯ ವೇಳೆ ಪ್ರಧಾನ ಸ್ವರ್ಣ ಕಲಶವನ್ನು ಮಂಡಲ ಮಧ್ಯೆ ಪ್ರತಿಷ್ಠಾಪಿಸಲಾಗುತ್ತದೆ. 27 ದೊಡ್ಡ ಗಾತ್ರದ ಬೆಳ್ಳಿಯ ಖಂಡ ಕಲಶಗಳು ಹಾಗೂ 1100 ಬೆಳ್ಳಿಯ ಸಣ್ಣ ಕಲಶಗಳನ್ನು ಮಂಡಲದಲ್ಲಿ ಇರಿಸಿ ಪೂಜಿಸಿ ಬಳಿಕ ದೇವಿಗೆ ಅಭಿಷೇಕ ಮಾಡಲಾಗುತ್ತದೆ.
ಸೋಮವಾರದಂದು ಕಟೀಲು ದೇವರಿಗೆ ಅಷ್ಟಬಂಧ ನಡೆದು, ಸಾನ್ನಿಧ್ಯ ಕಲಶಾಭಿಷೇಕ, ಚಿನ್ನದ ರಥೋತ್ಸವ ಸಂಪನ್ನಗೊಂಡಿದೆ. ಬ್ರಹ್ಮಕಲಶೋತ್ಸವ ಸಂದರ್ಭ ನಡೆಯುವ ಮೂರು ಪ್ರಮುಖ ಧಾರ್ಮಿಕ ವಿಧಿಗಳಾದ ಫೆ.1ರ ನಾಗಮಂಡಲೋತ್ಸವ, ಫೆ.2ರ ಕೋಟಿ ಜಪಯಜ್ಞ ಸಮಾಪ್ತಿ ಹಾಗೂ ಫೆ.3ರಂದು ಹತ್ತು ಮಹಾಕುಂಡಗಳಲ್ಲಿ ಸಹಸ್ರ ಚಂಡಿಕಾಯಾಗಗಳು ಭ್ರಾಮರೀ ವನದಲ್ಲಿಯೇ ನಡೆಯಲಿದೆ. ಹತ್ತು ಮಹಾಕುಂಡಗಳಲ್ಲಿ ನಡೆಯಲಿರುವ ಸಹಸ್ರ ಚಂಡಿಕಾಯಾಗಕ್ಕೆ ಸಿದ್ಧತೆ ನಡೆಯುತ್ತಿದೆ.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…