ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಸ್ಥಾನಗಳಲ್ಲಿ ಒಂದಾದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ಇಂದು ವೈಭವದ ಬ್ರಹ್ಮಕಲಶೋತ್ಸವ ನಡೆಯಲಿದೆ.
ಇಂದು ಬೆಳಗ್ಗೆ 9.37ರ ಮೀನ ಲಗ್ನ ಸುಮುಹೂರ್ತದಲ್ಲಿ ಪ್ರಧಾನ ಸ್ವರ್ಣಕಲಶ ಹಾಗೂ 1,127 ಬೆಳ್ಳಿ ಕಲಶಗಳಿಂದ ಶ್ರೀದೇವಿಗೆ ಅಭಿಷೇಕ ನಡೆಯಲಿದೆ. ಕಲಶಮಂಡಲ ಪೂಜೆಯ ವೇಳೆ ಪ್ರಧಾನ ಸ್ವರ್ಣ ಕಲಶವನ್ನು ಮಂಡಲ ಮಧ್ಯೆ ಪ್ರತಿಷ್ಠಾಪಿಸಲಾಗುತ್ತದೆ. 27 ದೊಡ್ಡ ಗಾತ್ರದ ಬೆಳ್ಳಿಯ ಖಂಡ ಕಲಶಗಳು ಹಾಗೂ 1100 ಬೆಳ್ಳಿಯ ಸಣ್ಣ ಕಲಶಗಳನ್ನು ಮಂಡಲದಲ್ಲಿ ಇರಿಸಿ ಪೂಜಿಸಿ ಬಳಿಕ ದೇವಿಗೆ ಅಭಿಷೇಕ ಮಾಡಲಾಗುತ್ತದೆ.
ಸೋಮವಾರದಂದು ಕಟೀಲು ದೇವರಿಗೆ ಅಷ್ಟಬಂಧ ನಡೆದು, ಸಾನ್ನಿಧ್ಯ ಕಲಶಾಭಿಷೇಕ, ಚಿನ್ನದ ರಥೋತ್ಸವ ಸಂಪನ್ನಗೊಂಡಿದೆ. ಬ್ರಹ್ಮಕಲಶೋತ್ಸವ ಸಂದರ್ಭ ನಡೆಯುವ ಮೂರು ಪ್ರಮುಖ ಧಾರ್ಮಿಕ ವಿಧಿಗಳಾದ ಫೆ.1ರ ನಾಗಮಂಡಲೋತ್ಸವ, ಫೆ.2ರ ಕೋಟಿ ಜಪಯಜ್ಞ ಸಮಾಪ್ತಿ ಹಾಗೂ ಫೆ.3ರಂದು ಹತ್ತು ಮಹಾಕುಂಡಗಳಲ್ಲಿ ಸಹಸ್ರ ಚಂಡಿಕಾಯಾಗಗಳು ಭ್ರಾಮರೀ ವನದಲ್ಲಿಯೇ ನಡೆಯಲಿದೆ. ಹತ್ತು ಮಹಾಕುಂಡಗಳಲ್ಲಿ ನಡೆಯಲಿರುವ ಸಹಸ್ರ ಚಂಡಿಕಾಯಾಗಕ್ಕೆ ಸಿದ್ಧತೆ ನಡೆಯುತ್ತಿದೆ.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…
ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…
ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…
ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ ಕಾಪು: ಕಾಪು ಕಡಲ ಕಿನಾರೆಯಲ್ಲಿ…
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…