ಇಂದು ಪರಿಪೂರ್ಣತೆಯ ವ್ಯಕ್ತಿ ನರೇಂದ್ರ ಮೋದಿ ನಮ್ಮ ಪ್ರಧಾನಿಯಾಗುವುದರ ಮೂಲಕ ಪರಿವರ್ತನೆಗಳು ಸಾಕಾರವಾಗುತ್ತಿದೆ : ಚಕ್ರವರ್ತಿ ಸೂಲಿಬೆಲೆ -Vishwanews24

ಕಾರ್ಕಳ: ಯುವಜನತೆ ಸ್ಪಷ್ಟ ಗುರಿಯೊಂದಿಗೆ ರಾಷ್ಟ್ರಕ್ಕೆ ಶ್ರೇಷ್ಠ ಬದಲಾವಣೆ ಕೊಡಬೇಕೆನ್ನುವ ದೃಷ್ಟಿಕೋನದಲ್ಲಿ ಹೆಜ್ಜೆ ಹಾಕಿದರೆ ಹೊಸ ಭಾರತ ನಿರ್ಮಾಣ ಸಾಧ್ಯ ಎಂದು ಯುವ ಬ್ರಿಗೇಡ್‌ನ ಚಕ್ರವರ್ತಿ ಸೂಲಿಬೆಲೆ ಹೇಳಿದರು.

ಅದಮಾರು ಪೂರ್ಣಪ್ರಜ್ಞ ಪ. ಪೂ. ಕಾಲೇಜು ಆವರಣದಲ್ಲಿ ಎಲ್‌ಕೆಜಿ, ಯುಕೆಜಿ ಮಕ್ಕಳಿಗಾಗಿ ನೂತನವಾಗಿ ನಿರ್ಮಾಣವಾಗಿರುವ 1.5 ಕೋಟಿ ರೂ. ವೆಚ್ಚದ ’ಕಿಶೋರ ಪ್ರಿಯ’ ಕಟ್ಟಡ ಲೋಕಾರ್ಪಣೆ ಸಮಾರಂಭದಲ್ಲಿ ಗುರುವಾರ ಮಾತನಾಡಿದರು.

ಭಾರತೀಯ ಸಂಸ್ಕೃತಿಯಲ್ಲಿ ಜೀವನದ ಗುರಿ ಬೇರೆಯೇ ಇದೆ. ಇದು ಯುಗ, ಯುಗಾಂತರಗಳಲ್ಲಿ ಛಾಪನ್ನು ಮೂಡಿಸುವಂತಹಾ ವ್ಯಕ್ತಿತ್ವದ ಹೆಗ್ಗುರುತು ಆಗಿರುತ್ತದೆ. ಭಾರತವು ಆಸಾಧಾರಣ ಪರಿವರ್ತನೆಯ ಹಾದಿಯಲ್ಲಿದ್ದು, ಇಂದು ಪರಿಪೂರ್ಣತೆಯ ವ್ಯಕ್ತಿ ನರೇಂದ್ರ ಮೋದಿ ನಮ್ಮ ಪ್ರಧಾನಿಯಾಗುವುದರ ಮೂಲಕವಾಗಿ ಪರಿವರ್ತನೆಗಳು ಸಾಕಾರವಾಗುತ್ತಿದೆ. ಇಂದು ಶಿಕ್ಷಣವು ವಿದ್ಯಾರ್ಥಿಗಳನ್ನು ಡಾಕ್ಟರ್, ಇಂಜೀನಿಯರ್‌ಗಳಾಗುವತ್ತ ಪ್ರೇರಕವಾಗಿ ಪಾಶ್ಚಾತ್ಯ ಚಿಂತನೆಯತ್ತ ಒಯ್ಯುತ್ತವೆ ಎಂದರು.

ಅಮೇರಿಕಾ, ಇರಾನ್ ನಡುವಣ ಕದನ ಕಾರ್ಮೋಡವನ್ನು ತಣಿಸಲು ಇರಾನ್ ದೇಶ ಭಾರತದ ಮಧ್ಯಸ್ಥಿಕೆಯನ್ನು ಬಯಸಿರುವುದು, ಬಲೂಚಿಸ್ತಾನ, ಸಿಂಧ್ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಮಂದಿ ಇಂಗ್ಲೇಂಡ್‌ನಲ್ಲಿ ಪ್ರತಿಭಟನೆಯನ್ನು ನಡೆಸಿ ತಮ್ಮನ್ನೂ ಭಾರತ ದೇಶದೊಂದಿಗೆ ಸೇರಿಸಲು ಬೇಡಿಕೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮುಂದಿರಿಸಿರುವುದು, ಕಾಶ್ಮೀರದ ೩೭೦ನೇ ವಿಧಿ ರದ್ದುಗೊಳಿಸಿದ ಸಂದರ್ಭದಲ್ಲಿ ಜಾಗತಿಕ ಮಟ್ಟದಲ್ಲಿ ರಾಷ್ಟ್ರಗಳು ಭಾರತದ ಪರ ನಿಂತಿರುವುದು ಭಾರತವು ಪರಿವರ್ತನೆಯ ಹಾದಿಯಲ್ಲಿರುವುದನ್ನು ಸೂಚಿಸುತ್ತವೆ ಎಂದು ಸೂಲಿಬೆಲೆ ಹೇಳಿದರು.

ಕಟ್ಟಡ ನಿರ್ಮಾಣ ಕಾರ್ಯದಲ್ಲಿ ಸಹಕರಿಸಿದ ಲಕ್ಷ್ಮೀ ನಾರಾಯಣ, ರಾಘವೇಂದ್ರ, ವಿದ್ಯುತ್‌ ಗುತ್ತಿಗೆದಾರ ಶ್ರೀಪತಿ ಭಟ್, ಮಹಾಂತೇಶ್ ಮುಂತಾದವರನ್ನು ಗೌರವಿಸಲಾಯಿತು.ಈ ಸಂದರ್ಭ ಕಟ್ಟಡ ಲೋಕಾರ್ಪಣೆ ಮಾಡಿದ ಅದಮಾರು ಮಠಾಧೀಶ ಶ್ರೀ ವಿಶ್ವಪ್ರಿಯ ತೀರ್ಥ ಸ್ವಾಮೀಜಿ, ಪ್ರಾಂಶುಪಾಲ ರಾಮಕೃಷ್ಣ ಪೈ ರಚಿಸಿದ ಅರ್ಥಶಾಸ್ತ್ರ ಪುಸ್ತಕವನ್ನು ಬಿಡುಗಡೆಗೊಳಿಸಿದರು. ಮಂಗಳೂರು ವಿವಿಯಲ್ಲಿ ಇಂಗ್ಲೀಷ್ ಎಂಎಯಲ್ಲಿ ಪ್ರಥಮ ರ್‍ಯಾಂಕ್ ವಿಜೇತೆ ಆಂಗ್ಲ ಉಪನ್ಯಾಸಕಿ ಅಂಕಿತಾ ಅವರನ್ನು ಸಮ್ಮಾನಿಸಲಾಯಿತು. ಸಂಸ್ಥೆಗೆ ಟೆಲಿಸ್ಕೋಪ್ ದಾನವಾಗಿ ನೀಡಿದ ಆದರ್ಶ ಅನಂತ ಆಚಾರ್ ಹಾಗೂ ಗಾಯತ್ರಿ ಅನಂತ ಆಚಾರ್ ಅವರನ್ನು ಗೌರವಿಸಲಾಯಿತು.

ವೇದಿಕೆಯಲ್ಲಿ ಅದಮಾರು ಮಠಾಧೀಶ ಶ್ರೀ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಅದಮಾರು ಮಠ ಶಿಕ್ಷಣ ಮಂಡಳಿಯ ಗೌರವ ಕಾರ್ಯದರ್ಶಿ ಪ್ರದೀಪ್ ಕುಮಾರ್, ಪ್ರಾಂಶುಪಾಲ ರಾಮಕೃಷ್ಣ ಪೈ, ಉಪ ಪ್ರಾಂಶುಪಾಲೆ ಡಾ. ಒಲಿವಿಟಾ ಡಿಸೋಜ, ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಶ್ರೀಕಾಂತ ರಾವ್, ದೇವಿಪ್ರಸಾದ್ ಬೆಳ್ಳಿಬೆಟ್ಟು ಉಪಸ್ಥಿತರಿದ್ದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago