Featured

ಇಂದು ಪುನೀತ್ 11ನೇ ದಿನದ ಪುಣ್ಯಾರಾಧನೆ ; ನನ್ನ ಮಗ ಇಲ್ಲ ಎನ್ನುವ ನೋವು ನನ್ನನ್ನು ಕಾಡುತ್ತಿದೆ : ಶಿವರಾಜ್‍ಕುಮಾರ್ – Vishwanews24

ಇಂದು ಪುನೀತ್ 11ನೇ ದಿನದ ಪುಣ್ಯಾರಾಧನೆ ; ನನ್ನ ಮಗ ಇಲ್ಲ ಎನ್ನುವ ನೋವು ನನ್ನನ್ನು ಕಾಡುತ್ತಿದೆ : ಶಿವರಾಜ್‍ಕುಮಾರ್ – Vishwanews24

ಪುನೀತ್‍ಗೆ ಪದ್ಮಶ್ರೀ ಯಾಕೆ, ಪುನೀತ್ ಅಮರ ಶ್ರೀ..

ಬೆಂಗಳೂರು: ಇಂದು ಪುನೀತ್ 11ನೇ ದಿನದ ಪುಣ್ಯಾರಾಧನೆ. ಪುನೀತ್ ರಾಜ್‍ಕುಮಾರ್ ಅವರಿಗೆ ಪದ್ಮಶ್ರೀ ಕೊಡಬೇಕು ಎನ್ನುವ ವಿಚಾರವಾಗಿ ಕೆಲವು ಗಣ್ಯರು ಒತ್ತಾಯ ಮಾಡುತ್ತಿದ್ದಾರೆ. ಈ ಕುರಿತಾಗಿ ನಟ ಶಿವರಾಜ್‍ಕುಮಾರ್ ಅವರು ಮಾತನಾಡಿದ್ದಾರೆ.

ಪುನೀತ್ ರಾಜ್‍ಕುಮಾರ್ ಅವರ ಸಮಾಧಿ ಬಳಿಯ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪುನೀತ್‍ಗೆ ಪದ್ಮಶ್ರೀ ಯಾಕೆ, ಪುನೀತ್ ಅಮರ ಶ್ರೀ. ಹೆಸರ ಪಕ್ಕದಲ್ಲೊಂದು ಟೈಟಲ್ ಅಷ್ಟೆಯಾಗಿದೆ. ಎಲ್ಲರ ಆತ್ಮದಲ್ಲಿಯೂ ಅಪ್ಪು ಶ್ರೀಯಾಗಿರುತ್ತಾನೆ ಅದೇ ನಮಗೆ ದೊಡ್ಡುದು ಎಂದು ಹೇಳಿದ್ದಾರೆ.

ಗದ್ದಲ ಆಗೋದು ಬೇಡ ಎಂದು ಅಭಿಮಾನಿಗಳಿಗೆ ಅಪ್ಪು ಸಮಾಧಿ ಬಳಿ ಬರಲು ಅವಕಾಶ ನೀಡಿಲ್ಲ. ನಾವು 11 ದಿನದ ಕಾರ್ಯ ಎಂದು ಮಾಡುತ್ತಿರುವುದೇ ನೋವಿನ ಸಂಗತಿಯಾಗಿದೆ. ಬೆಳಗ್ಗೆ ಅಂದುಕೊಳ್ಳತ್ತಾ ಇದ್ದೆ, ಇದೆಲ್ಲಾ ಅವನಿಗೆ ಮಾಡಬೇಕಾ? ಎಂದು ನೋವಾಯಿತ್ತು. ಅಭಿಮಾನಿಗಳಿಗೆ ಮೊದಲು ಬಿಡಬೇಕು ಆದರೆ ಕುಟುಂಬದ ಕೆಲವು ಆಚಾರ, ಸಂಸ್ಕೃತಿಯನ್ನು ನಾವು ಅನುಸರಿಸಬೇಕು ಎಂದಿದ್ದಾರೆ.

ನೋವು ಇದೆ ಆದರೆ ಎಲ್ಲಾ ಕಾರ್ಯ ಮಾಡಬೇಕಿದೆ. ನನಗೆ ಇದನ್ನು ಬಿಟ್ಟು ಬೇರೆ ಏನನ್ನು ಹೇಳಬೇಕು ಎಂದು ತಿಳಿಯುತ್ತಿಲ್ಲ. ಇವತ್ತು ಮನೆಯಲ್ಲಿ ಪೂಜೆ ಇದೆ. ಈ ವಿಚಾರವಾಗಿ ಅಣ್ಣನಾಗಿ ಮಾತನಾಡೋದು ಕಷ್ಟವಾಗಿದೆ. ಅಪ್ಪುನನ್ನು ಕಳೆದುಕೊಂಡಿರುವುದು ನನ್ನ ಮಗ, ನನ್ನ ಬಲಗೈ ಹೋದಾಗಿದೆ. ನಾನು ಅಳಬಹುದು, ದುಃಖವನ್ನು ನಾನು ತೋಡಿಕೊಳ್ಳಬಹುದು. ನಾನು ಜೀವಂತವಾಗಿ ಇರುವವರೆಗೂ, ನನ್ನ ಜೀವ ಹೋದ ಮೇಲೂ ಈ ನೋವು ಹೋಗಲ್ಲ ಎಂದಿದ್ದಾರೆ.

ಅಪ್ಪು ಖುಷಿ ಆಗಬೇಕಾದರೆ ಜನ ಪ್ರಾಣ ಕಳೆದುಕೊಳ್ಳಬಾರದು. ಅಪ್ಪು ಹೆಸರನ್ನು ಉಳಿಸಲು ನೀವು ಪ್ರಯತ್ನಪಡಬೇಕು. ನಿಮ್ಮ ಕುಟುಂಬ ನಿಮ್ಮನ್ನು ನಂಬಿಕೊಂಡು ಇದೆ. ನಿಮ್ಮ ಕೈಲಿ ಆದಷ್ಟು ಬೇರೆಯವರಿಗೆ ಸಹಯಾ ಮಾಡಿ. ಪ್ರಾಣವನ್ನು ಮಾತ್ರ ಕಳೆದುಕೊಳ್ಳ ಬೇಡಿ ನಾನು ಕೈ ಮುಗಿದು ಕೇಳಿಕೊಳ್ಳುತ್ತೇನೆ ಎಂದು ಹೇಳುತ್ತಾ ಬಾವುಕರಾಗಿದ್ದಾರೆ.

ಈಗಾಗಲೇ ನಾವೆಲ್ಲ ನೋವನಲ್ಲಿ ಇದ್ದೇವೆ. ಅಪ್ಪು ಹೋಗಿದ್ದಾನೆ ಎಂದು ಯಾಕೆ ಅಂದು ಕೊಳ್ಳುತ್ತಿರ, ನಮ್ಮಲ್ಲಿ ಇದ್ದಾರೆ ಅಂತಾ ತಿಳಿದುಕೊಳ್ಳಿ. ಪುನೀತ್ ತಂದೆಗೆ ತಕ್ಕ ಮಗನಾಗಿದ್ದಾನೆ ಎಂದಿದ್ದಾರೆ.

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

2 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

5 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

5 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

5 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

5 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

5 hours ago