ಬೆಂಗಳೂರು : ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರೊಂದಿಗಿನ ಕಾಳಗದಲ್ಲಿ ಹುತಾತ್ಮರಾಗಿರುವ ನಮ್ಮ ಹೆಮ್ಮೆಯ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ₹50,00,000 (ಐವತ್ತು ಲಕ್ಷ ) ಪರಿಹಾರಧನವನ್ನು ನಮ್ಮ ಸರ್ಕಾರದಿಂದ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರ ಕಚೇರಿ ಎಕ್ಸ್ ನಲ್ಲಿ ಮಾಡಿರುವ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.
ದೇಶ ರಕ್ಷಣೆಗಾಗಿ ಪ್ರಾಣ ಪಣಕ್ಕಿಟ್ಟು ಶ್ರಮಿಸುವ ಪ್ರತಿಯೊಬ್ಬ ಯೋಧನ ಬಗ್ಗೆ ನಮಗೆ ಅಪಾರ ಗೌರವವಿದೆ. ಹುತಾತ್ಮ ಯೋಧ ಪ್ರಾಂಜಲ್ ಅವರ ತ್ಯಾಗ, ಬಲಿದಾನಕ್ಕೆ ಬೆಲೆಕಟ್ಟಲಾಗದು, ಆದರೆ ದೇಶದ ಕೋಟ್ಯಂತರ ಜನರ ಪರವಾಗಿ ಈ ಹೊತ್ತಿನಲ್ಲಿ ಅವರ ಕುಟುಂಬದ ಜೊತೆ ನಿಲ್ಲಬೇಕಾದುದ್ದು ನಮ್ಮ ಕರ್ತವ್ಯವೆಂದು ಭಾವಿಸಿದ್ದೇವೆ.
ಪರಿಹಾರಧನದ ಚೆಕ್ ಅನ್ನು ಸಿದ್ಧಪಡಿಸಲಾಗಿದ್ದು ನಾಳೆ ಮೃತ ಯೋಧನ ಕುಟುಂಬಕ್ಕೆ ಹಸ್ತಾಂತರಿಸಲಾಗುವುದು ಎಂದು ಸೋಮವಾರ ರಾತ್ರಿ ಮಾಡಿರುವ ಪೋಸ್ಟ್ ನಲ್ಲಿ ತಿಳಿಸಿದ್ದಾರೆ. ಮತ್ತೊಮ್ಮೆ ಕ್ಯಾಪ್ಟನ್ ಪ್ರಾಂಜಲ್ ಅವರ ಅನನ್ಯ ದೇಶಸೇವೆ, ಸಮರ್ಪಣಾಭಾವವನ್ನು ಗೌರವದಿಂದ ಸ್ಮರಿಸುತ್ತಾ, ಗೌರವ ನಮನ ಸಲ್ಲಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…