ಬೆಂಗಳೂರು: ಧರ್ಮಸ್ಥಳದಲ್ಲಿ ಎಸ್ಐಟಿ ತನಿಖೆಯಲ್ಲಿ ಕಳೇಬರ ಸಿಗದ ಬೆನ್ನಲ್ಲೆ ದೇಗುಲಕ್ಕೆ ಅಪಪ್ರಚಾರ ಎಸಗಲಾಗುತ್ತಿದೆ ಅಂತಾ ದೇಗುಲದ ಭಕ್ತರ ಆಕ್ರೋಶ ಹೆಚ್ಚಾಗಿದೆ. ಮತ್ತೊಂದು ಕಡೆ ಬಿಜೆಪಿ ಸರ್ಕಾರದ ವಿರುದ್ಧ ಮುಗಿಬಿದ್ರೆ ಇನ್ನೊಂದು ಕಡೆ ಹಿಂದೂ ಸಂಘಟನೆಗಳು ಬೆಂಗಳೂರಿನಲ್ಲಿ ಹೋರಾಟಕ್ಕೆ ಮುಹೂರ್ತ ಫಿಕ್ಸ್ ಮಾಡಿಕೊಂಡಿದೆ.
ಈ ನಡುವೆ ಶಾಸಕ ಎಸ್.ಆರ್ ವಿಶ್ವನಾಥ್ ನೇತೃತ್ವದಲ್ಲಿ ಇಂದು (ಆ.16) ಧರ್ಮಸ್ಥಳಕ್ಕೆ 500 ಕಾರುಗಳಲ್ಲಿ ಬಿಜೆಪಿ ಕಾರ್ಯಕರ್ತರು ಹೊರಡಲಿದ್ದಾರೆ. ಈಗಾಗಲೇ ಕಾರುಗಳು ಜಮಾವಣೆಗೊಂಡಿದ್ದು, ನೆಲಮಂಗಲ-ಕುಣಿಗಲ್ ರಸ್ತೆಯ ಕುಣಿಗಲ್ ಟೋಲ್ಗೇಟ್ನಿಂದ ಯಾತ್ರೆ ಹೊರಡಲಿವೆ.
ಯಲಹಂಕದಿಂದ ಕಾರ್ಯಕರ್ತರು ಹೊರಡಲಿದ್ದಾರೆ. ನೂರಾರು ಜನ ಭಗವಾಧ್ವಜ ಹಿಡಿದು ಕೇಸರಿ ಶಾಲು ಧರಿಸಿ, ಧರ್ಮಸ್ಥಳಕ್ಕೆ ಹೊರಡಲಿದ್ದಾರೆ. ಪ್ರಯಾಣಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ಮಧ್ಯಾಹ್ನ ಸುಮಾರು 3 ಗಂಟೆಗೆ ವಿಶ್ವನಾಥ್ ತಂಡ ಧರ್ಮಸ್ಥಳ ತಲುಪಲಿದೆ. ದೇವರ ದರ್ಶನ ಪಡೆದು ಧರ್ಮಸ್ಥಳದಲ್ಲೇ ಇಂದು ರಾತ್ರಿ ವಾಸ್ತವ್ಯ ಹೂಡಲಿದ್ದಾರೆ.
ಇನ್ನೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದ ಶಾಸಕರ ನಿಯೋಗವೂ ಭಾನುವಾರ (ಆ.17) ಧರ್ಮಸ್ಥಳಕ್ಕೆ ಭೇಟಿ ಮಾಡಲಿದೆ. ಉಡುಪಿ, ಮಂಗಳೂರು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳ ಬಿಜೆಪಿ ಶಾಸಕರು ನಿಯೋಗದಲ್ಲಿರಲಿದ್ದಾರೆ. ಬಿಜೆಪಿ ನಾಯಕರು ಧರ್ಮಾಧಿಕಾರಿಗಳನ್ನೂ ಭೇಟಿ ಮಾಡಿ ನೈತಿಕ ಬೆಂಬಲ ಸೂಚಿಸಲಿದ್ದಾರೆ ಎಂದು ಬಿಜೆಪಿ ಪ್ರಕಟಣೆಯಲ್ಲಿ ತಿಳಿಸಿದೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…