Featured

ಇಂದು ಬಿಜೆಪಿಯಿಂದ ʻಧರ್ಮಸ್ಥಳ ಚಲೋʼ : 500 ಕಾರುಗಳಲ್ಲಿ ಬೃಹತ್‌ ಯಾತ್ರೆ – vishwanews24

ಇಂದು ಬಿಜೆಪಿಯಿಂದ ʻಧರ್ಮಸ್ಥಳ ಚಲೋʼ : 500 ಕಾರುಗಳಲ್ಲಿ ಬೃಹತ್‌ ಯಾತ್ರೆ

ಬೆಂಗಳೂರು: ಧರ್ಮಸ್ಥಳದಲ್ಲಿ ಎಸ್‌ಐಟಿ ತನಿಖೆಯಲ್ಲಿ ಕಳೇಬರ ಸಿಗದ ಬೆನ್ನಲ್ಲೆ ದೇಗುಲಕ್ಕೆ ಅಪಪ್ರಚಾರ ಎಸಗಲಾಗುತ್ತಿದೆ ಅಂತಾ ದೇಗುಲದ ಭಕ್ತರ ಆಕ್ರೋಶ ಹೆಚ್ಚಾಗಿದೆ. ಮತ್ತೊಂದು ಕಡೆ ಬಿಜೆಪಿ ಸರ್ಕಾರದ ವಿರುದ್ಧ ಮುಗಿಬಿದ್ರೆ ಇನ್ನೊಂದು ಕಡೆ ಹಿಂದೂ ಸಂಘಟನೆಗಳು ಬೆಂಗಳೂರಿನಲ್ಲಿ ಹೋರಾಟಕ್ಕೆ ಮುಹೂರ್ತ ಫಿಕ್ಸ್ ಮಾಡಿಕೊಂಡಿದೆ.

ಈ ನಡುವೆ ಶಾಸಕ ಎಸ್.ಆರ್ ವಿಶ್ವನಾಥ್ ನೇತೃತ್ವದಲ್ಲಿ ಇಂದು (ಆ.16) ಧರ್ಮಸ್ಥಳಕ್ಕೆ 500 ಕಾರುಗಳಲ್ಲಿ ಬಿಜೆಪಿ ಕಾರ್ಯಕರ್ತರು ಹೊರಡಲಿದ್ದಾರೆ. ಈಗಾಗಲೇ ಕಾರುಗಳು ಜಮಾವಣೆಗೊಂಡಿದ್ದು, ನೆಲಮಂಗಲ-ಕುಣಿಗಲ್ ರಸ್ತೆಯ ಕುಣಿಗಲ್ ಟೋಲ್‌ಗೇಟ್‌ನಿಂದ ಯಾತ್ರೆ ಹೊರಡಲಿವೆ.

ಯಲಹಂಕದಿಂದ ಕಾರ್ಯಕರ್ತರು ಹೊರಡಲಿದ್ದಾರೆ. ನೂರಾರು ಜನ ಭಗವಾಧ್ವಜ ಹಿಡಿದು ಕೇಸರಿ ಶಾಲು ಧರಿಸಿ, ಧರ್ಮಸ್ಥಳಕ್ಕೆ ಹೊರಡಲಿದ್ದಾರೆ. ಪ್ರಯಾಣಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ಮಧ್ಯಾಹ್ನ ಸುಮಾರು 3 ಗಂಟೆಗೆ ವಿಶ್ವನಾಥ್ ತಂಡ ಧರ್ಮಸ್ಥಳ ತಲುಪಲಿದೆ. ದೇವರ ದರ್ಶನ ಪಡೆದು ಧರ್ಮಸ್ಥಳದಲ್ಲೇ ಇಂದು ರಾತ್ರಿ ವಾಸ್ತವ್ಯ ಹೂಡಲಿದ್ದಾರೆ.

ಇನ್ನೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದ ಶಾಸಕರ ನಿಯೋಗವೂ ಭಾನುವಾರ (ಆ.17) ಧರ್ಮಸ್ಥಳಕ್ಕೆ ಭೇಟಿ ಮಾಡಲಿದೆ. ಉಡುಪಿ, ಮಂಗಳೂರು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳ ಬಿಜೆಪಿ ಶಾಸಕರು ನಿಯೋಗದಲ್ಲಿರಲಿದ್ದಾರೆ. ಬಿಜೆಪಿ ನಾಯಕರು ಧರ್ಮಾಧಿಕಾರಿಗಳನ್ನೂ ಭೇಟಿ ಮಾಡಿ ನೈತಿಕ ಬೆಂಬಲ ಸೂಚಿಸಲಿದ್ದಾರೆ ಎಂದು ಬಿಜೆಪಿ ಪ್ರಕಟಣೆಯಲ್ಲಿ ತಿಳಿಸಿದೆ.

Vishwa News 24

Recent Posts

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ – vishwanews24

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…

20 minutes ago

ಉಡುಪಿ : ಜೂ.12 ರಂದು ನೇರ ಸಂದರ್ಶನ – vishwanews24

ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…

27 minutes ago

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ಭೇಟಿ – vishwanews24

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…

33 minutes ago

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ – vishwanews24

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…

55 minutes ago

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ – vishwanews24

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…

2 hours ago

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ – vishwanews24

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…

2 hours ago