Featured

ಇಂದು ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಪ್ರಮಾಣವಚನ – vishwanews24

ಇಂದು ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಪ್ರಮಾಣವಚನ

ಬೆಂಗಳೂರು: ಕರ್ನಾಟಕ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿದ್ದಂತ ಬಿ.ವೈ ವಿಜಯೇಂದ್ರ ಅವರು, ಇಂದು (ನ. 15) ಅಧಿಕೃತವಾಗಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ.

ಬೆಳಗ್ಗೆ 10ಗಂಟೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಪದಗ್ರಹಣ ಸಮಾರಂಭ ನಡೆಯಲಿದೆ. ಅದಕ್ಕೂ ಮೊದಲು ಬೆಳಗ್ಗೆ 9.45ಕ್ಕೆ ಬಿಜೆಪಿ ರಾಜ್ಯ ಕಚೇರಿಯಲ್ಲಿ ಬಿವೈವಿಗೆ ಪೂರ್ಣಕುಂಭ ಸ್ವಾಗತ ನೀಡಲಾಗುತ್ತೆ. ಬಳಿಕ ಗೋಪೂಜೆ ನೆರರೇವರಿಸಲಿದ್ದಾರೆ. ಗಣಪತಿ ಹೋಮದ ಪೂರ್ಣಾಹುತಿ ನಂತರ ವಿಜಯೇಂದ್ರಗೆ ಹಾಲಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ನಿನ್ನೆ ರಾತ್ರಿಯಿಂದಲೇ ಪೂಜೆ, ಹೋಮ ಹವನಗಳು ನೆರವೇರುತ್ತಿವೆ. ನಿನ್ನೆ ದುರ್ಗಾಹೋಮ, ಗಣಪತಿ ಹೋಮ ನಡೆದಿದೆ. ಇನ್ನು ಮಲ್ಲೇಶ್ವರಂನಲ್ಲಿ ರಸ್ತೆಯುದ್ಧಕ್ಕೂ ಬಿಜೆಪಿ ಬಾವುಟಗಳು ರಾರಾಜಿಸುತ್ತಿವೆ. ಎಲ್ಲೆಲ್ಲೂ ವಿಜಯೇಂದ್ರ ಪೋಸ್ಟರ್‌ಗಳು ಮಿಂಚುತ್ತಿವೆ. ಅಲ್ಲದೇ ಬಿಜೆಪಿ ಕಚೇರಿ ತಳಿರು ತೋರಣಗಳಿಂದ ಸಿಂಗಾರಗೊಂಡಿದೆ.

ಬಿ.ವೈ.ವಿಜಯೇಂದ್ರ ಅವರು ಪಕ್ಷದ ನಾಯಕರಿಗೆ ಖುದ್ದು ಕರೆ ಮಾಡಿ ಪದಗ್ರಹಣ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದಾರೆ. ರಾಜ್ಯ ಬಿಜೆಪಿ ನಾಯಕರು, ಕೇಂದ್ರ ಸಚಿವರು, ಜಿಲ್ಲಾಧ್ಯಕ್ಷರು ಸೇರಿ ಹಲವರಿಗೆ ವಿಜಯೇಂದ್ರ ಅವರೇ ಕರೆ ಮಾಡಿ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ. ಆದ್ರೆ, ಇಂದಿನ ಪದಗ್ರಹಣ ಕಾರ್ಯಕ್ರಮಕ್ಕೆ ಸಿ.ಟಿ.ರವಿ ಗೈರಾಗಲಿದ್ದು, ಇನ್ನುಳಿದಂತೆ ಅಸಮಾಧಾನಿತರು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೋ ಇಲ್ಲವೋ ಎನ್ನುವ ಪ್ರಶ್ನೆ ಎದ್ದಿದ್ದು, ಮುಂದೆ ವಿಜಯೇಂದ್ರ ಇದೆಲ್ಲವನ್ನು ಹೇಗೆ ಸರಿದೂಗಿಸಿಕೊಂಡು ಹೋಗುತ್ತಾರೆ ಎಂಬುವುದು ಕಾದು ನೋಡಬೇಕಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago