Featured

ಇಂದು ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಪ್ರಮಾಣವಚನ – vishwanews24

ಇಂದು ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಪ್ರಮಾಣವಚನ

ಬೆಂಗಳೂರು: ಕರ್ನಾಟಕ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿದ್ದಂತ ಬಿ.ವೈ ವಿಜಯೇಂದ್ರ ಅವರು, ಇಂದು (ನ. 15) ಅಧಿಕೃತವಾಗಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ.

ಬೆಳಗ್ಗೆ 10ಗಂಟೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಪದಗ್ರಹಣ ಸಮಾರಂಭ ನಡೆಯಲಿದೆ. ಅದಕ್ಕೂ ಮೊದಲು ಬೆಳಗ್ಗೆ 9.45ಕ್ಕೆ ಬಿಜೆಪಿ ರಾಜ್ಯ ಕಚೇರಿಯಲ್ಲಿ ಬಿವೈವಿಗೆ ಪೂರ್ಣಕುಂಭ ಸ್ವಾಗತ ನೀಡಲಾಗುತ್ತೆ. ಬಳಿಕ ಗೋಪೂಜೆ ನೆರರೇವರಿಸಲಿದ್ದಾರೆ. ಗಣಪತಿ ಹೋಮದ ಪೂರ್ಣಾಹುತಿ ನಂತರ ವಿಜಯೇಂದ್ರಗೆ ಹಾಲಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ನಿನ್ನೆ ರಾತ್ರಿಯಿಂದಲೇ ಪೂಜೆ, ಹೋಮ ಹವನಗಳು ನೆರವೇರುತ್ತಿವೆ. ನಿನ್ನೆ ದುರ್ಗಾಹೋಮ, ಗಣಪತಿ ಹೋಮ ನಡೆದಿದೆ. ಇನ್ನು ಮಲ್ಲೇಶ್ವರಂನಲ್ಲಿ ರಸ್ತೆಯುದ್ಧಕ್ಕೂ ಬಿಜೆಪಿ ಬಾವುಟಗಳು ರಾರಾಜಿಸುತ್ತಿವೆ. ಎಲ್ಲೆಲ್ಲೂ ವಿಜಯೇಂದ್ರ ಪೋಸ್ಟರ್‌ಗಳು ಮಿಂಚುತ್ತಿವೆ. ಅಲ್ಲದೇ ಬಿಜೆಪಿ ಕಚೇರಿ ತಳಿರು ತೋರಣಗಳಿಂದ ಸಿಂಗಾರಗೊಂಡಿದೆ.

ಬಿ.ವೈ.ವಿಜಯೇಂದ್ರ ಅವರು ಪಕ್ಷದ ನಾಯಕರಿಗೆ ಖುದ್ದು ಕರೆ ಮಾಡಿ ಪದಗ್ರಹಣ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದಾರೆ. ರಾಜ್ಯ ಬಿಜೆಪಿ ನಾಯಕರು, ಕೇಂದ್ರ ಸಚಿವರು, ಜಿಲ್ಲಾಧ್ಯಕ್ಷರು ಸೇರಿ ಹಲವರಿಗೆ ವಿಜಯೇಂದ್ರ ಅವರೇ ಕರೆ ಮಾಡಿ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ. ಆದ್ರೆ, ಇಂದಿನ ಪದಗ್ರಹಣ ಕಾರ್ಯಕ್ರಮಕ್ಕೆ ಸಿ.ಟಿ.ರವಿ ಗೈರಾಗಲಿದ್ದು, ಇನ್ನುಳಿದಂತೆ ಅಸಮಾಧಾನಿತರು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೋ ಇಲ್ಲವೋ ಎನ್ನುವ ಪ್ರಶ್ನೆ ಎದ್ದಿದ್ದು, ಮುಂದೆ ವಿಜಯೇಂದ್ರ ಇದೆಲ್ಲವನ್ನು ಹೇಗೆ ಸರಿದೂಗಿಸಿಕೊಂಡು ಹೋಗುತ್ತಾರೆ ಎಂಬುವುದು ಕಾದು ನೋಡಬೇಕಿದೆ.

Vishwa News 24

Recent Posts

ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ : ಪ್ರಶಸ್ತಿ ಸ್ವೀಕರಿಸಿದ ಪತ್ನಿ ಹೇಮಾ ಮಾಲಿನಿ – vishwanews24

ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಪತ್ನಿ ಹೇಮಾ ಮಾಲಿನಿ ನವದೆಹಲಿ: ದಿವಂಗತ ಬಾಲಿವುಡ್ ನಟ ಧರ್ಮೇಂದ್ರ  ಅವರಿಗೆ…

5 minutes ago

ಪುತ್ತೂರು: ವಿದ್ಯುತ್ ಶಾಕ್‌ ಹೊಡೆದು ಯುವಕ ಮೃತ್ಯು – vishwanews24

ಪುತ್ತೂರು: ವಿದ್ಯುತ್ ಶಾಕ್‌ ಹೊಡೆದು ಯುವಕ ಮೃತ್ಯು ಪುತ್ತೂರು : ನಿಡಳ್ಳಿ ಗ್ರಾಮದ ಬೋಳುಂಬುಡೆಯಲ್ಲಿ ವಿದ್ಯುತ್ ಶಾಕ್ ಹೊಡೆದು ನೆಲಕ್ಕೆ…

14 minutes ago

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್  – vishwanews24

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…

19 hours ago

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ – vishwanews24

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…

19 hours ago

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ – vishwanews24

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…

19 hours ago

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ – vishwanews24

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…

20 hours ago