Featured

ಇಂದು ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಪ್ರಮಾಣವಚನ – vishwanews24

ಇಂದು ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಪ್ರಮಾಣವಚನ

ಬೆಂಗಳೂರು: ಕರ್ನಾಟಕ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿದ್ದಂತ ಬಿ.ವೈ ವಿಜಯೇಂದ್ರ ಅವರು, ಇಂದು (ನ. 15) ಅಧಿಕೃತವಾಗಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ.

ಬೆಳಗ್ಗೆ 10ಗಂಟೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಪದಗ್ರಹಣ ಸಮಾರಂಭ ನಡೆಯಲಿದೆ. ಅದಕ್ಕೂ ಮೊದಲು ಬೆಳಗ್ಗೆ 9.45ಕ್ಕೆ ಬಿಜೆಪಿ ರಾಜ್ಯ ಕಚೇರಿಯಲ್ಲಿ ಬಿವೈವಿಗೆ ಪೂರ್ಣಕುಂಭ ಸ್ವಾಗತ ನೀಡಲಾಗುತ್ತೆ. ಬಳಿಕ ಗೋಪೂಜೆ ನೆರರೇವರಿಸಲಿದ್ದಾರೆ. ಗಣಪತಿ ಹೋಮದ ಪೂರ್ಣಾಹುತಿ ನಂತರ ವಿಜಯೇಂದ್ರಗೆ ಹಾಲಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ನಿನ್ನೆ ರಾತ್ರಿಯಿಂದಲೇ ಪೂಜೆ, ಹೋಮ ಹವನಗಳು ನೆರವೇರುತ್ತಿವೆ. ನಿನ್ನೆ ದುರ್ಗಾಹೋಮ, ಗಣಪತಿ ಹೋಮ ನಡೆದಿದೆ. ಇನ್ನು ಮಲ್ಲೇಶ್ವರಂನಲ್ಲಿ ರಸ್ತೆಯುದ್ಧಕ್ಕೂ ಬಿಜೆಪಿ ಬಾವುಟಗಳು ರಾರಾಜಿಸುತ್ತಿವೆ. ಎಲ್ಲೆಲ್ಲೂ ವಿಜಯೇಂದ್ರ ಪೋಸ್ಟರ್‌ಗಳು ಮಿಂಚುತ್ತಿವೆ. ಅಲ್ಲದೇ ಬಿಜೆಪಿ ಕಚೇರಿ ತಳಿರು ತೋರಣಗಳಿಂದ ಸಿಂಗಾರಗೊಂಡಿದೆ.

ಬಿ.ವೈ.ವಿಜಯೇಂದ್ರ ಅವರು ಪಕ್ಷದ ನಾಯಕರಿಗೆ ಖುದ್ದು ಕರೆ ಮಾಡಿ ಪದಗ್ರಹಣ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದಾರೆ. ರಾಜ್ಯ ಬಿಜೆಪಿ ನಾಯಕರು, ಕೇಂದ್ರ ಸಚಿವರು, ಜಿಲ್ಲಾಧ್ಯಕ್ಷರು ಸೇರಿ ಹಲವರಿಗೆ ವಿಜಯೇಂದ್ರ ಅವರೇ ಕರೆ ಮಾಡಿ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ. ಆದ್ರೆ, ಇಂದಿನ ಪದಗ್ರಹಣ ಕಾರ್ಯಕ್ರಮಕ್ಕೆ ಸಿ.ಟಿ.ರವಿ ಗೈರಾಗಲಿದ್ದು, ಇನ್ನುಳಿದಂತೆ ಅಸಮಾಧಾನಿತರು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೋ ಇಲ್ಲವೋ ಎನ್ನುವ ಪ್ರಶ್ನೆ ಎದ್ದಿದ್ದು, ಮುಂದೆ ವಿಜಯೇಂದ್ರ ಇದೆಲ್ಲವನ್ನು ಹೇಗೆ ಸರಿದೂಗಿಸಿಕೊಂಡು ಹೋಗುತ್ತಾರೆ ಎಂಬುವುದು ಕಾದು ನೋಡಬೇಕಿದೆ.

Vishwa News 24

Recent Posts

ಇನ್ನು ಮುಂದೆ ಭಕ್ತರು ಗೋಕರ್ಣದ ಮಹಾಗಣಪತಿ ವಿಗ್ರಹವನ್ನು ಸ್ಪರ್ಶಿಸಿ ಪೂಜಿಸುವಂತಿಲ್ಲ – vishwanews24

ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…

22 minutes ago

ಕೊಲಂಬೊ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ – vishwanews24

ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…

54 minutes ago

ಸುಳ್ಯ: ಬೈಕ್-ಕಾರು ಅಪಘಾತ ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು – vishwanews24

ಸುಳ್ಯ: ಬೈಕ್-ಕಾರು ಅಪಘಾತ;  ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…

1 hour ago

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ – vishwanews24

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…

1 hour ago

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿ ಆಗ್ರಹ – vishwanews24

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…

1 hour ago

ಕಾಂಗ್ರೆಸ್ ವಿದ್ಯಾರ್ಥಿಗಳ ಹಿತಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಪ್ರಿಯಾಂಕ್ ಖರ್ಗೆ – vishwanews24

 ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…

2 hours ago